ನೂಜಿಬಾಳ್ತಿಲ ಶಾಲೆ: ವಿವಿಧ ಬಗೆಯ ತರಕಾರಿ ತೋಟ

ಫ‌ಸಲು ಬಿಸಿಯೂಟಕ್ಕೆ ಬಳಕೆ; ಸಾರ್ಥಕವಾಯಿತು ವಿದ್ಯಾರ್ಥಿಗಳ ಶ್ರಮ

Team Udayavani, Nov 23, 2019, 4:01 AM IST

tt-9

ಕಲ್ಲುಗುಡ್ಡೆ: ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿಯೇ ಸಮೃದ್ಧ ತರಕಾರಿ ಕೃಷಿಯ ಕೈ ತೋಟ ನಿರ್ಮಿಸಿ, ಮಧ್ಯಾಹ್ನದ ಬಿಸಿಯೂಟಕ್ಕೆ ಅನುಕೂಲವಾಗುವಂತೆ ವಿವಿಧ ಬಗೆಯ ತರಕಾರಿಗಳನ್ನು ಬೆಳೆದು ಮಾದರಿಯಾಗಿದ್ದಾರೆ ಈ ಶಾಲೆಯವರು.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವಿಶೇಷ ತರಕಾರಿ ಕೈ ತೋಟವನ್ನು ಮಾಡಿದ್ದು, ಇದೀಗ ತರಕಾರಿ ಯಥೇತ್ಛವಾಗಿ ಬೆಳೆದು ಫ‌ಸಲು ಬಂದಿದೆ. ಶ್ರಮಪಟ್ಟ ತಂಡ ಇದೀಗ ಸಂತೋಷದ ನಗೆ ಬೀರಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 150ಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಶಾಲಾ ಆವರಣದ ಖಾಲಿ ಜಾಗದಲ್ಲಿ ತರಕಾರಿ ಬೆಳೆಯಲಾಗಿದೆ.  ರಕ್ಷಣೆಯ ದೃಷ್ಟಿಯಿಂದ ಕೈ ತೋಟಕ್ಕೆ ಸುತ್ತ ತಡೆಬೇಲಿ ನಿರ್ಮಿಸಲಾಗಿದೆ.

ವಿವಿಧ ಬಗೆಯ ತರಕಾರಿ
ಇಲ್ಲಿ ನಿರ್ಮಿಸಲಾದ ತರಕಾರಿ ತೋಟದಲ್ಲಿ ಅಲಸಂಡೆ, ಬಸಳೆ, ಬೆಂಡೆಕಾಯಿ, ಬದನೆ, ತೊಂಡೆಕಾಯಿ ಸಹಿತ ವಿವಿಧ ಬಗೆಯ ತರಕಾರಿಗಳನ್ನು ಬೆಳೆಯಲಾಗಿದೆ. ಸ್ಥಳೀಯವಾಗಿ ತರಕಾರಿ ಬೀಜಗಳನ್ನು ಪಡೆದು ಶಾಲಾ ಆವರಣದಲ್ಲಿಯೇ ಕೈತೋಟ ರಚಿಸಲಾಗಿದೆ.

ಎಸ್‌ಡಿಎಂಸಿ ಪ್ರಯತ್ನ
ಸರಕಾರಿ ಶಾಲೆಯಲ್ಲಿ ಈ ವಿನೂತನ ತರಕಾರಿ ತೋಟ ನಿರ್ಮಿಸಿರುವುದರ ಹಿಂದೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪ್ರಯತ್ನವಿದೆ. ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಗೌಡ ಅವರ ನೇತೃತ್ವದಲ್ಲಿ ತರಕಾರಿ ತೋಟ ರಚಿಸಲಾಗಿದೆ. ಶಾಲಾ ಶಿಕ್ಷಕರ, ಹೆತ್ತವರ ಸಹಕಾರದೊಂದಿಗೆ, ನೂಜಿಬಾಳ್ತಿಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರ ಶ್ರಮದಾನವನ್ನು ಪಡೆಯಲಾಗಿದೆ. ಇದೀಗ ತರಕಾರಿ ತೋಟಕ್ಕೆ ಸ್ವತಃ ಎಸ್‌ಡಿಎಂಸಿ ಅಧ್ಯಕ್ಷರೇ ನೀರು ಹಾಯಿಸಲು ಮುತುವರ್ಜಿ ವಹಿಸಿದ್ದಾರೆ. ಜತೆಗೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಮಿತಿಯವರು ಕೈಜೋಡಿಸುತ್ತಿದ್ದಾರೆ. ತರಕಾರಿ ಬೆಳೆದು ಫ‌ಸಲು ಬಂದಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಜಾಸ್ತಿಯಾದ್ದಲ್ಲಿ ಅಂಗಡಿಗಳಿಗೆ ಕೊಟ್ಟು ಬದಲಿ ತರಕಾರಿ ಪಡೆಯಲಾಗುತ್ತದೆ ಎನ್ನುತ್ತಾರೆ ಶಿಕ್ಷಕರು.

ಮಾದರಿ ನಡೆ
ಕೃಷಿಯಲ್ಲಿ ಆಸಕ್ತಿ ಕಳೆದು ಕೊಳ್ಳುತ್ತಿರುವ ಈ ಕಾಲದಲ್ಲಿ ಶಾಲೆ ಯಲ್ಲಿಯೇ ತರಕಾರಿ ತೋಟ ನಿರ್ಮಿಸಿ, ಶಾಲಾ ಬಳಕೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇಂತಹ ಪ್ರಯತ್ನಗಳಿಂದ ವಿದ್ಯಾರ್ಥಿಗಳಲ್ಲಿಯೂ ಕೃಷಿಯ ಕುರಿತು ಆಸಕ್ತಿ ಬೆಳೆಯಲು ಸಾಧ್ಯವಾಗಲಿದೆ.

ಅಧ್ಯಕ್ಷರ ಪ್ರಯತ್ನ
ನಮ್ಮ ಶಾಲೆಯಲ್ಲಿ ಸುಂದರವಾದ ತರಕಾರಿ ತೋಟ ನಿರ್ಮಿಸಿದ್ದು, ಇದೀಗ ಫ‌ಸಲು ಬಂದು ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಗೌಡ ಅವರ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೂ ಪ್ರತಿದಿನ ಬಗೆ ಬಗೆಯ ತರಕಾರಿಯಿಂದ ತಯಾರಿಸಿದ ಪದಾರ್ಥ ಸೇವಿಸಬಹುದಾಗಿದೆ.
– ಶ್ರೇಯಾನ್ಸ್‌ ಎಚ್‌.ಎಸ್‌.  ಮುಖ್ಯ ಶಿಕ್ಷಕ, ನೂಜಿಬಾಳ್ತಿಲ

ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.