ಕೊಂಕಣ ರೈಲ್ವೇಯಲ್ಲಿ ಅಡಿಕೆ ಸಾಗಾಟ: ಇಂದು ಸಾಂಕೇತಿಕ ಚಾಲನೆ

ಪುತ್ತೂರು: ಎಪಿಎಂಸಿ ಸಾಮಾನ್ಯ ಸಭೆ

Team Udayavani, Sep 23, 2020, 2:42 AM IST

ಕೊಂಕಣ ರೈಲ್ವೇಯಲ್ಲಿ ಅಡಿಕೆ ಸಾಗಾಟ: ಇಂದು ಸಾಂಕೇತಿಕ ಚಾಲನೆ

ಪುತ್ತೂರು: ಕೊಂಕಣ ರೈಲ್ವೇ ಮೂಲಕ ಗುಜರಾತ್‌ಗೆ ಅಡಿಕೆ ಸಾಗಾಟಕ್ಕೆ ಸೆ. 23ರಂದು ಬೆಳಗ್ಗೆ 9.30ಕ್ಕೆ ಎಪಿಎಂಸಿ ಪ್ರಾಂಗಣದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುವುದು. ಅ. 3ರಂದು ಸಚಿವರ ಸಮ್ಮುಖದಲ್ಲಿ ಅಧಿಕೃತ ಉದ್ಘಾಟನೆ ನಡೆಸಲಾಗುವುದು ಎಂದು ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ರೈಲ್ವೇ ಅಧಿಕಾರಿ ಮಾಹಿತಿ ನೀಡಿದರು.

ಸೆ. 22ರಂದು ಸಾಲ್ಮರ ಎಪಿಎಂಸಿ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್‌ ಮೆದು ಅಧ್ಯಕ್ಷತೆಯಲ್ಲಿ ಎಪಿಎಂಸಿ ಸಾಮಾನ್ಯ ಸಭೆ ನಡೆಯಿತು. ಕೊಂಕಣ ರೈಲ್ವೇ ಎಂಜಿನಿಯರ್‌ ಸುರೇಶ್‌ ಗೌಡ ಮಾಹಿತಿ ನೀಡಿ, ಸೆ. 23ರಂದು ಸಾಂಕೇತಿಕ ಚಾಲನೆ ಹಾಗೂ ಅ. 3ರಂದು ಎಪಿಎಂಸಿ ಇದರ ವಿವಿಧ ಕಾಮಗಾರಿಗಳ ಉದ್ಘಾಟನ ಸಂದರ್ಭ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಪುತ್ತೂರು, ಸುಳ್ಯ, ಬೆಳ್ತಂಗಡಿ ಸಹಿತ ಕರಾವಳಿ ಜಿಲ್ಲೆಗಳಿಂದ ರೈತರು ಬೆಳೆಯುವ ಕೃಷಿ ಉತ್ಪನ್ನ ಆಧಾರಿತ ವಸ್ತುಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಡೋರ್‌ ಟು ಡೋರ್‌ ಡೆಲಿವರಿ ಮಾಡುವ ನಿಟ್ಟಿನಲ್ಲಿ ಸಿದ್ಧತೆ ಮಾಡಲಾಗಿದೆ. ಸಂಬಂಧಪಟ್ಟ ಟ್ರಾನ್ಸ್‌ಪೊàರ್ಟರ್‌ಗಳಿಂದ, ಎಪಿಎಂಸಿ, ಕ್ಯಾಂಪ್ಕೋದಿಂದ ಅನುಮತಿ ಸಿಕ್ಕಿದೆ ಎಂದು ಅವರು ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು ಮಾತನಾಡಿ, ಸೆ. 23ರಂದು ಕ್ಯಾಂಪ್ಕೋ ವತಿಯಿಂದ ರೈಲಿನ ಮೂಲಕ ಅಡಿಕೆ ಸಾಗಾಟ ಮಾಡಲಾಗುವುದು. ಸೆ. 26ರ ತನಕ ಪ್ರಾಯೋಗಿಕವಾಗಿ ರೈಲಿನಲ್ಲಿ ಅಡಿಕೆ ಸಾಗಾಟ ಮಾಡಲಾಗುವುದು. ಸಾಗಾಟದ ಸಂದರ್ಭದ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ಉತ್ತಮ ಸೇವೆ ನೀಡಲು ರೈಲ್ವೇ ಪ್ರಯತ್ನ ಮಾಡುವ ಭರವಸೆ ದೊರೆತಿದೆ ಎಂದರು.

ಅ.3: ಕಾಮಗಾರಿಗಳ ಉದ್ಘಾಟನೆ
ಸೆ. 26ರಂದು ಎಪಿಎಂಸಿ ಪ್ರಾಂಗಣದಲ್ಲಿ ನಿಗದಿಯಾಗಿದ್ದ ವಿವಿಧ ಕಾಮಗಾರಿಗಳ ಉದ್ಘಾಟನ ಕಾರ್ಯಕ್ರಮವನ್ನು ವಿಧಾನ ಸಭಾ ಅಧಿವೇಶನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಅ. 3ರಂದು ಉದ್ಘಾಟನೆ ನಡೆಯಲಿದೆ. ಈ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಅಧ್ಯಕ್ಷ ದಿನೇಶ್‌ ಮೆದು ಸಭೆಯ ಗಮನಕ್ಕೆ ತಂದರು. ಎಪಿಎಂಸಿಯಲ್ಲಿ ಆಗಸ್ಟ್‌ ತಿಂಗಳ ಬಂದಿರುವ ಆದಾಯ, ಖರ್ಚುಗಳ ಲೆಕ್ಕಪತ್ರವನ್ನು, ಹಿಂದಿನ ಸಭೆಯ ನಡಾವಳಿಯನ್ನು ಕಾರ್ಯದರ್ಶಿ ರಾಮಚಂದ್ರ ವಾಚಿಸಿದರು. ಉಪಾಧ್ಯಕ್ಷ ಮಂಜುನಾಥ್‌ ಎನ್‌.ಎಸ್‌., ಸದಸ್ಯರಾದ ಬೂಡಿಯಾರ್‌ ರಾಧಾಕೃಷ್ಣ ರೈ, ಬಾಲಕೃಷ್ಣ ಸುವರ್ಣ, ಮೇದಪ್ಪ ಗೌಡ, ಕುಶಾಲಪ್ಪ ಗೌಡ, ಕಾರ್ತಿಕ್‌ ಬೆಳ್ಳಿಪ್ಪಾಡಿ, ಎಚ್‌. ಅಬ್ದುಲ್‌ ಶುಕೂರ್‌, ತ್ರಿವೇಣಿ ಪೆರೊಡಿ, ತೀರ್ಥಾನಂದ ದುಗ್ಗಳ, ಪುಲಸ್ತಾ ರೈ, ಕೃಷ್ಣ ಕುಮಾರ್‌, ಬಾಬು ಟಿ., ರೈಲ್ವೇ ಎಂಜಿನಿಯರ್‌ಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

50-50 ಅಭಿವೃದ್ಧಿ
ಎಪಿಎಂಸಿ ರಸ್ತೆಯ ರೈಲ್ವೇ ಅಂಡರ್‌ಪಾಸ್‌ ಕುರಿತಂತೆ 2014ರಲ್ಲಿ ಮೂಲ ಸೌಕರ್ಯ ಇಲಾಖೆ ಹಾಗೂ ಎಪಿಎಂಸಿ ಚರ್ಚಿಸಿದಂತೆ 50-50 ಖರ್ಚು ಭರಿಸುವುದೆಂದು ಅಂದಿನ ಸಭೆಯಲ್ಲಿ ನಿರ್ಣಯಿಸಲಾಗಿತ್ತು.  ಈ ಕುರಿತು ಮತ್ತೂಮ್ಮೆ ಹುಬ್ಬಳ್ಳಿ ವಲಯಕ್ಕೆ ಹೊಸ ಪತ್ರ ಸಲ್ಲಿಸಬೇಕಿದೆ. ಸೆ. 24ರಂದು ರಾಜ್ಯ ಸರಕಾರದ ಪತ್ರದೊಂದಿಗೆ ತೆರಳಲಾಗುವುದು ಎಂದು ದಿನೇಶ್‌ ಮೆದು ತಿಳಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.