ಅಡಿಕೆ ಹಳದಿ ರೋಗಕ್ಕೆ  ಬೇಕಿದೆ ಶಾಶ್ವತ ಪರಿಹಾರ ಕ್ರಮ


Team Udayavani, Aug 9, 2021, 4:30 AM IST

ಅಡಿಕೆ ಹಳದಿ ರೋಗಕ್ಕೆ  ಬೇಕಿದೆ  ಶಾಶ್ವತ ಪರಿಹಾರ ಕ್ರಮ

ತೋಟಗಾರಿಕ ಬೆಳೆಯಾಗಿರುವ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ತಾಲೂಕುಗಳ ಕೃಷಿಕರ ಜೀವನಕ್ಕೆ ಆಧಾರವಾಗಿದೆ. ಧಾರಣೆಯ ಏರಿಳಿತಗಳ ಹೊರತಾಗಿಯೂ ಈ ಭಾಗಗಳ ಜನ ಅಡಿಕೆ ಬೆಳೆಯನ್ನೇ ಅವಲಂಬಿಸಿದ್ದಾರೆ. ದಶಕಗಳ ಹಿಂದೆ ಅಡಿಕೆ ಮರಗಳಿಗೆ ತಗಲಿದ ಹಳದಿ ರೋಗವೆಂಬ ಹೆಮ್ಮಾರಿ ಈಗ ಹೆಮ್ಮರವಾಗಿ ಬೆಳೆದು ಎಕರೆಗಟ್ಟಲೆ ಅಡಿಕೆ ತೋಟಗಳನ್ನು ನಾಶ ಮಾಡಿದೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಅಡಿಕೆ ಮರಗಳನ್ನು ಬಾಧಿಸಿರುವ ಈ ರೋಗಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರಕಾರದ ಇಲಾಖೆಗಳಿಗಾಗಲಿ, ತೋಟಗಾರಿಕ ತಜ್ಞರಿಗಾಗಲಿ ಇನ್ನೂ ಸಾಧ್ಯವಾಗಿಲ್ಲ. ವರ್ಷಗಳುರುಳಿದಂತೆ ಹಳದಿ ರೋಗದ ಸಮಸ್ಯೆ ಅಧಿಕಗೊಳ್ಳುತ್ತಲೇ ಸಾಗಿದ್ದು ಬೆಳೆಗಾರರ ಪಾಲಿಗೆ ಇದೊಂದು ಬಗೆಹರಿಯದ ಜಟಿಲ ಸಮಸ್ಯೆಯಾಗಿಯೇ  ಉಳಿದಿದೆ.

ಅಡಿಕೆಗೆ ಮಾರುಕಟ್ಟೆಯಲ್ಲಿ ಸೂಕ್ತ ಧಾರಣೆ, ಬೇಡಿಕೆ ಇರುವ ಸಂದರ್ಭದಲ್ಲಿಯೇ ಹಳದಿ ರೋಗಕ್ಕೆ ಅಡಿಕೆ ಮರಗಳು ತುತ್ತಾಗುತ್ತಿರುವುದು ಬೆಳೆಗಾರರನ್ನು ಆತಂಕದ ಮಡುವಿಗೆ ತಳ್ಳಿದೆ.   ಸುಳ್ಯದ ಸಂಪಾಜೆಯಲ್ಲಿ ಹಲವು ದಶಕಗಳ ಹಿಂದೆ ಕಾಣಿಸಿಕೊಂಡ ಅಡಿಕೆ ಹಳದಿ ರೋಗವೀಗ ಹತ್ತಾರು ಗ್ರಾಮಗಳ ಅಡಿಕೆ ತೋಟಗಳಿಗೆ ವ್ಯಾಪಿಸಿದೆ. ಈಗಾಗಲೇ ಪುತ್ತೂರು ತಾಲೂಕಿನ ಕೆಲವೆಡೆ ಅಡಿಕೆ ತೋಟಗಳಿಗೂ ಹಳದಿ ರೋಗ ಕಾಲಿಟ್ಟಿದ್ದು   ತೀವ್ರ ಗತಿಯಲ್ಲಿ ವ್ಯಾಪಿಸುತ್ತಿದೆ.

ಹಲವಾರು ವರ್ಷಗಳಿಂದ ಹಳದಿ ರೋಗದ  ಕುರಿತಂತೆ ನಿರಂತರವಾಗಿ ಸಂಶೋಧನೆ, ಅಧ್ಯಯನಗಳು ನಡೆಯುತ್ತಲೇ ಬಂದಿವೆಯಾದರೂ ಇಂದಿಗೂ ಈ ರೋಗ ತಡೆಗಟ್ಟಲು ಔಷಧ ಕಂಡುಹಿಡಿಯುವಲ್ಲಿ ಸಂಶೋಧನ ಕೇಂದ್ರಗಳು ಸಫಲವಾಗಿಲ್ಲ. ಸಾವಯವ, ವೈಜ್ಞಾನಿಕ ಮಾದರಿಯಲ್ಲಿ ರೋಗ ತಡೆಯುವ ಪ್ರಯತ್ನಗಳು ಮುಂದುವರಿದಿವೆಯಾದರೂ ಇವ್ಯಾವೂ ಶಾಶ್ವತ ಫಲ ನೀಡಿಲ್ಲ.

ಶೇ. 85ಕ್ಕೂ ಅಧಿಕ ಭಾಗ ಕೃಷಿಯಿಂದ ಆವೃತವಾಗಿರುವ ಈ 3 ತಾಲೂಕುಗಳಲ್ಲಿ ಹಳದಿ ರೋಗ ವ್ಯಾಪಿಸಿದ ತೋಟಗಳಲ್ಲಿ ಅಡಿಕೆ ಮರಗಳು ಸಂಪೂರ್ಣ ನಾಶವಾಗಿವೆ. ರೋಗದ ತೀವ್ರತೆಯಿಂದಾಗಿ ಹಿಂದೆ ಅಡಿಕೆ ತೋಟಗಳಿದ್ದ ಜಾಗದಲ್ಲಿ ಪುನಃ ಅಡಿಕೆ ಕೃಷಿ ಸಾಧ್ಯವಾಗುತ್ತಿಲ್ಲ. ರೋಗ ಬಾಧಿಸಿದ ತೋಟದಲ್ಲಿ ಹೊಸದಾಗಿ ಅಡಿಕೆ ಗಿಡ ನೆಟ್ಟರೂ ಅವು ಚಿಗುರುತ್ತಿಲ್ಲ. ಹತ್ತಾರು ವಿಜ್ಞಾನಿಗಳ ತಂಡ ಹಲವು ಪರೀಕ್ಷೆಗಳನ್ನು ನಡೆಸಿದರೂ ರೋಗದ ಮೂಲ ಪತ್ತೆ, ನಿಯಂತ್ರಣ ಕ್ರಮ, ಶಾಶ್ವತ ಪರಿಹಾರ ಇವೆಲ್ಲವೂ ಇಂದಿಗೂ ಬಗೆಹರಿಯದ ಸಮಸ್ಯೆಗಳಾಗಿಯೇ ಉಳಿದಿವೆ.

ಹಳದಿ ರೋಗದ ಸಮಸ್ಯೆ ಉಲ್ಬಣಿಸಿದಾಗಲೆಲ್ಲ ಅಡಿಕೆ ಬೆಳೆಗಾರರ ನಿಯೋಗ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿಗೆ ತೆರಳಿ ನಷ್ಟಕ್ಕೆ ಪರಿಹಾರ, ನಿಯಂತ್ರಣ ಕ್ರಮಗಳ ಬಗೆಗೆ ಬೇಡಿಕೆ ಸಲ್ಲಿಸುತ್ತಲೇ ಬಂದಿದೆ. ಆದರೆ ಇದುವರೆಗೂ ಬೆಳೆಗಾರರ ಬೇಡಿಕೆಗೆ ಸೂಕ್ತ ಸ್ಪಂದನೆ ದೊರಕಿಲ್ಲ. ಹಳದಿ ರೋಗ ಪೀಡಿತ ಪ್ರದೇಶದ ಅಡಿಕೆ ಬೆಳೆಗಾರರ ನೆರವಿಗೆ ಪ್ಯಾಕೇಜ್‌ ಘೋಷಿಸುವ ಭರವಸೆಯನ್ನು ಸಚಿವರು, ಅಧಿಕಾರಿಗಳು ನೀಡಿದರೂ ಅದಿನ್ನೂ ಜಾರಿ ಆಗಿಲ್ಲ. ಇತ್ತ ಜಿಲ್ಲೆಯ ನೂತನ ಸಚಿವರು ತತ್‌ಕ್ಷಣ ಗಮನಹರಿಸಿ ಅಡಿಕೆ ಬೆಳೆಗಾರರ ಗೋಳಿಗೆ ಸ್ಪಂದಿಸಬೇಕಿದೆ.

-ಸಂ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.