ಬೆಳ್ತಂಗಡಿ: ನಾಡಿನಿಂದ ನಾಪತ್ತೆಯಾಗಿದ್ದ ವೃದ್ಧ ಮೂರು ದಿನದ ಬಳಿಕ ಕಾಡಿನಲ್ಲಿ ಪತ್ತೆ!
Team Udayavani, Oct 6, 2020, 8:13 AM IST
ಬೆಳ್ತಂಗಡಿ: ಮಿತ್ತಬಾಗಿಲು ಶಾಂತಿಗುಡ್ಡೆ ಸಮೀಪದ ಕಾಡುಮನೆ ನಿವಾಸಿ ಅಣ್ಣು ಪೂಜಾರಿ (82) ಅವರು ಕಳೆದ ಅ. 1ರಂದು ನಾಪತ್ತೆಯಾಗಿದ್ದು, ಅ. 4ರ ಸಂಜೆ ಸಮೀಪದ ಕುದುರೆಮುಖ ಅರಣ್ಯ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿತ್ತು. ಸ್ಥಳೀಯರು ಹಾಗೂ ಮನೆಮಂದಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.
ಮಿತ್ತಬಾಗಿಲು ಗ್ರಾ.ಪಂ. ಉಪಾಧ್ಯಕ್ಷ ವಿನಯಚಂದ್ರ, ಮಾಜಿ ಸದಸ್ಯ ವಿಜಯ ಗೌಡ ಸ್ಥಳೀಯರಾದ ಸಂದೀಪ್ ಪೂಜಾರಿ, ಸುರೇಂದ್ರ ಪೂಜಾರಿ, ತಿಮ್ಮಪ್ಪ ಪೂಜಾರಿ, ಸುಧಾಕರ್ ಸೇರಿದಂತೆ 60ಕ್ಕೂ ಅಧಿಕ ಯುವಕರು ಅರಣ್ಯಾಧಿಕಾರಿಗಳ ಅನುಮತಿಯಂತೆ 7 ತಂಡಗಳಾಗಿ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು, ಮನೆಯಿಂದ 10 ಕಿ.ಮೀ. ದೂರದ ಕಾಡುಮನೆ ಕುಕ್ಕಾಡಿಯಲ್ಲಿ ಕಲ್ಲಿನ ಮೇಲೆ ಕುಳಿತಿದ್ದರು.
ಇದನ್ನೂ ಓದಿ:ಪ್ರವಾಸಿ ತಾಣಗಳಿಗೆ ಮುಗಿಬೀಳುತ್ತಿರುವ ಜನ : ಅಪಾಯದ ಅರಿವಿರಲಿ
ಅವರು ಮೂರು ದಿನಗಳ ಕಾಲ ನೀರು ಕುಡಿದು ದಿನ ಕಳೆದಿದ್ದರು ಎಂದವರ ಪುತ್ರಿ ವನಿತಾ ಉಮೇಶ್ ತಿಳಿಸಿದ್ದಾರೆ.
ಅಣ್ಣು ಪೂಜಾರಿ ಅವರಿಗೆ ನಾಲ್ವರು ಪುತ್ರಿಯರು. ವಯೋ ಸಹಜ ಮರೆವಿನ ಕಾಯಿಲೆ ಹೆಚ್ಚಾಗಿದ್ದರಿಂದ ಕಾಡಿಗೆ ತೆರಳಿದವರಿಗೆ ಮನೆ ರಸ್ತೆ ಸಿಗದೆ ಕಾಡಿನಲ್ಲೆ ಉಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ