ಒಮ್ಮೆ ವೆಚ್ಚ-ಅತ್ಯಲ್ಪ ಶ್ರಮ-ಅಧಿಕ ಲಾಭ


Team Udayavani, Jul 13, 2019, 5:00 AM IST

f-10

ಬಂಟ್ವಾಳ: ಸಂಬಾರ ಬೆಳೆಗಳ ರಾಜ ಎಂದೇ ಕರೆಯಲ್ಪಡುವ ಕರಿಮೆಣಸು ಬಳ್ಳಿಯನ್ನು ಬಿ. ಕಸ್ಬಾ ಪ್ರಗತಿಪರ ಕೃಷಿಕ ಪಿಯೂಸ್‌ ಎಲ್‌. ರೋಡ್ರಿಗಸ್‌ ವಿಯೆಟ್ನಾಂ ಮಾದರಿಯಲ್ಲಿ ಬೆಳೆಸಿದ್ಧಾರೆ.

ವಿಯೆಟ್ನಾಂನಲ್ಲಿ ಮರ ಕಡಿದು ನಿರ್ದಿಷ್ಟ ಎತ್ತರದ ಕಂಬ ಮಾಡಿ ಅದನ್ನು ನೆಲದಲ್ಲಿ ಹೂತು ಕರಿಮೆಣಸು ಕೃಷಿ ಪೂರ್ಣ ವೈಜ್ಞಾನಿಕ ಕ್ರಮದಲ್ಲಿ ಮಾಡುತ್ತಾರೆ. ಇಲ್ಲಿ ಇನ್ನೂ ವಿಶಿಷ್ಟ ಎನ್ನುವಂತೆ ಅನುಪಯುಕ್ತ ಸಿಮೆಂಟ್‌ ಕಂಬಗಳನ್ನು ಬಳಸಿದ್ದಾರೆ. ಕಂಬಕ್ಕೆ 5 ಅಡಿಗಳಷ್ಟು ಎತ್ತರಕ್ಕೆ ನೆಟ್‌ ಬೇಲಿ ಸುತ್ತಿ, ಅದರ ಒಳಗೆ ತೆಂಗಿನ ಸಿಪ್ಪೆಗಳ ಹುಡಿ ತುಂಬಿಸಿದ್ದಾರೆ. ಕಂಬದ ಬುಡದಲ್ಲಿ ಬಳ್ಳಿಗಳನ್ನು ನೆಟ್ಟು ಹಬ್ಬಿಸಿದ್ದಾರೆ.

ದೀರ್ಘಾವಧಿ ಉಳಿದು ಫಸಲು ನೀಡುವ ಈ ಕೃಷಿಗೆ ಒಮ್ಮೆ ಮಾತ್ರ ವೆಚ್ಚ ಮಾಡಿ ಅನಂತರದ ದಿನಗಳಲ್ಲಿ ಅತ್ಯಲ್ಪ ಶ್ರಮದಿಂದ ಅಧಿಕ ಲಾಭ ಪಡೆಯ ಬಹುದು. ಆರೈಕೆ ಶ್ರಮ, ವೆಚ್ಚ. ವಿಯೆಟ್ನಾಂನಲ್ಲಿ ಕಂಬಗಳನ್ನು ಹಾಕಿ ವೈಜ್ಞಾನಿಕ,ತಾಂತ್ರಿಕ ಕ್ರಮದಲ್ಲಿ ಕರಿಮೆಣಸು ಬೆಳೆಯುತ್ತಾರೆ. ಅಲ್ಲಿನ ಕರಿಮೆಣಸು ಗುಣಮಟ್ಟಕ್ಕೂ ಹೆಸರಾಗಿದೆ ಎನ್ನುತ್ತಾರೆ ಪಿಯೂಸ್‌ ಎಲ್‌. ರೋಡ್ರಿಗಸ್‌.

ಪ್ರಯೋಜನ
ಕರಿಮೆಣಸಿನ ಬಳ್ಳಿಯನ್ನು ನೆಲದಲ್ಲಿ ನೆಟ್ಟು ಯಾವುದೇ ಮರಕ್ಕೆ ಹಬ್ಬಿಸುವುದು ರೂಢಿಗತ ಕ್ರಮ. ಇದು ವರ್ಷಕ್ಕೆ 2ಅಡಿಗಳಷ್ಟು ಎತ್ತರಕ್ಕೆ ಬೆಳೆಯಬಹುದು. ವಿಯೆಟ್ನಾಂ ಮಾದರಿಯಲ್ಲಿ ಸುಮಾರು 5 ಅಡಿಗಳಷ್ಟು ಎತ್ತರಕ್ಕೆ ಕೇವಲ 6 ತಿಂಗಳ ಅವಧಿಯಲ್ಲಿ ಬೆಳೆದಿರುವುದು ವಿಶೇಷತೆ.

ಗಿಡ ಬೆಳೆದಂತೆ ಕಂಬಕ್ಕೆ ಮತ್ತೆ ಪ್ಲಾಸ್ಟಿಕ್‌ ನೆಟ್‌ ಸುತ್ತುವ ಮೂಲಕ ಶೀಘ್ರ ಮತ್ತಷ್ಟು ಮೇಲಕ್ಕೆ ಹಬ್ಬಲು ಅನುಕೂಲ ಆಗುತ್ತದೆ. ಮರಕ್ಕೆ ಬಳ್ಳಿ ಹಬ್ಬಿಸಿದಾಗ ಸ್ವಾಭಾವಿಕವಾಗಿ ಅದನ್ನು ಕೆಡವುವ ಪ್ರಯತ್ನ ಮೂಲ ಮರದಲ್ಲಿ ನಡೆಯುತ್ತದೆ. ಅನೇಕ ಸಂದರ್ಭ ರೋಗಕ್ಕೆ ಈಡಾಗುವ ಸಮಸ್ಯೆಯೂ ಇದೆ ಎಂದು ಅವರು ತಿಳಿಸುತ್ತಾರೆ.

ಅಡಿಕೆ, ತೆಂಗು ಮತ್ತು ಹೊರಸಿಪ್ಪೆ ದಪ್ಪಗಿರುವ ಮರಗಳಿಗೆ ಕರಿಮೆಣಸು ಬಳ್ಳಿ ಶೀಘ್ರವಾಗಿ ಸುತ್ತಿಕೊಂಡು ಬೆಳೆಯುತ್ತದೆ. ಅದೇ ರೀತಿಯಾಗಿ ವಿಯೆಟ್ನಾಂ ಮಾದರಿಯಲ್ಲಿ ಕರಿಮೆಣಸಿನ ಪ್ರತೀ ಅಂತರದ ಬೇರಿಗೆ ಸೂಕ್ತವಾದ ನೀರಿನ ಅಂಶ ಮತ್ತು ಪೌಷ್ಟಿಕಾಂಶ ನೆಲದಿಂದ ಸಿಗುವಷ್ಟೆ ಸುಲಭದಲ್ಲಿ ಸಿಗುವುದರಿಂದ ಬಳ್ಳಿ ಶೀಘ್ರವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಕರಿಮೆಣಸು ಕಾಡುತ್ಪತ್ತಿಯಾಗಿದ್ದು, ಬೇಸಗೆಯಲ್ಲಿ ನೀರು ಕೊಡದಿದ್ದರೂ ಬೆಳೆಯುತ್ತದೆ. ತೀರಾ ಅಲ್ಪ ಪ್ರಮಾಣದಲ್ಲಿ, ಕೆಲವೇ ಲೀಟರ್‌ ನೀರು ನೀಡುವ ಮೂಲಕ ಈ ಮಾದರಿಯಲ್ಲಿ ಗಿಡವನ್ನು ಎಂತಹ ಕಾಡುಗುಡ್ಡದಲ್ಲಿಯೂ ಬೆಳೆಸಬಹುದು ಎನ್ನುತ್ತಾರೆ ಪಿಯೂಸ್‌ ಎಲ್‌. ರೋಡ್ರಿಗಸ್‌.

 ಹೆಚ್ಚು ಫ‌ಸಲು
ಪ್ರಗತಿಪರ ಕೃಷಿಕರಿಗೆ ವಿಯೆಟ್ನಾಂ ಮಾದರಿ ಪರಿಚಯಿಸಿದ್ದೇನೆ. ಕೈಗಾರಿಕ ಮಾದರಿಯಲ್ಲಿ ಈ ಕೃಷಿ ಮಾಡಿದರೆ ಅಡಿಕೆಗಿಂತ ದುಪ್ಪಟ್ಟು ಫಸಲನ್ನು ಅಷ್ಟೇ ಜಮೀನಿನಲ್ಲಿ ಕಡಿಮೆ ವೆಚ್ಚದಲ್ಲಿ ಪಡೆಯಬಹುದು. ವಿಯೆಟ್ನಾಂ ಕರಿಮೆಣಸು ಗುಣಮಟ್ಟಕ್ಕೂ ಹೆಸರಾಗಿದೆ.
 - ಪಿಯೂಸ್‌ ಎಲ್‌. ರೋಡ್ರಿಗಸ್‌
ಪ್ರಗತಿಪರ ಕೃಷಿಕರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.