ಬೆಳ್ತಂಗಡಿ: ಆ. 9ರ ಮಹಾ ಪ್ರವಾಹಕ್ಕೆ ಒಂದು ವರ್ಷ; ಇನ್ನೂ ಬಾಡಿಗೆ ಮನೆಯಲ್ಲೇ ಸಂತ್ರಸ್ತರ ವಾಸ

7 ಮನೆಗಳಷ್ಟೆ ಪೂರ್ಣ ನಿರ್ಮಾಣ

Team Udayavani, Aug 8, 2020, 9:03 AM IST

ಬೆಳ್ತಂಗಡಿ: ಆ. 9ರ ಮಹಾ ಪ್ರವಾಹಕ್ಕೆ ಒಂದು ವರ್ಷ; ಇನ್ನೂ ಬಾಡಿಗೆ ಮನೆಯಲ್ಲೇ ಸಂತ್ರಸ್ತರ ವಾಸ

ಕಳೆದ ಬಾರಿ ಪ್ರವಾಹಕ್ಕೆ ತುತ್ತಾದ ಕುಕ್ಕಾವು ಸೇತುವೆ.

ಬೆಳ್ತಂಗಡಿ: ಪಶ್ಚಿಮಘಟ್ಟ ಗುಡ್ಡಗಾಡು ನಲುಗಿ ಇತಿಹಾಸದಲ್ಲಿ ಕಂಡುಕೇಳರಿಯದ ಪ್ರವಾಹಕ್ಕೆ ತುತ್ತಾಗಿದ್ದ ಬೆಳ್ತಂಗಡಿ ತಾಲೂಕು ಆಗಸ್ಟ್‌ 9ಕ್ಕೆ ಒಂದು ವರ್ಷ ಪೂರೈಸುತ್ತಿದೆ. ಅಂದು ಸಂತ್ರಸ್ತರಾದವರ ಬದುಕು ಮತ್ತೆ ಹಸನಾಗಿಲ್ಲ. ಪರಿಹಾರ ಮೊತ್ತ ಖಾತೆಗೆ ಜಮೆಯಾದರೂ ತಾಂತ್ರಿಕ ತೊಂದರೆಗಳಿಂದ ಮನೆಗಳು ಪೂರ್ಣಗೊಳ್ಳದೆ ಬಾಡಿಗೆ ಮನೆಯಲ್ಲೇ ವಾಸ ಒಂದೆಡೆಯಾದರೆ, ನದಿ ಪಾತ್ರದ ಮಂದಿ ಪ್ರವಾಹದ ಭಯದಲ್ಲೇ ಜೀವನ ಸಾಗಿಸುತ್ತಿವೆ.

ಆಗಸ್ಟ್‌-ಅಕ್ಟೋಬರ್‌-2019ರಲ್ಲಿ ನೆರೆ ಹಾವಳಿಯಿಂದ ಬೆಳ್ತಂಗಡಿ ತಾಲೂಕಿನ 16 ಗ್ರಾಮಗಳಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನೆರೆ ಸಂತ್ರಸ್ಥರ ಪುನರ್ವಸತಿ ಯೋಜನೆ-2019 ರಡಿ 289 ಮನೆಗಳನ್ನು ಗುರುತಿಸಲಾಗಿತ್ತು. ಈವರೆಗೆ ನೆರೆಯಿಂದ ಮನೆ ಕಳೆದುಕೊಂಡ ತಾಲೂಕಿನ ಫಲಾನುಭವಿಗಳಿಗೆ 2020 ಜೂನ್‌ 03 ರ ವರೆಗೆ 5,55,00,000 ರೂ. ಹಣ ಬಿಡುಗಡೆಯಾಗಿರುವ ಲೆಕ್ಕ ಕಂದಾಯ ಇಲಾಖೆಯಲ್ಲಿದೆ.

ಲೆಕ್ಕ ನೀಡಿದರೂ ಪಕ್ಕವಾಗದ ಮನೆ
203 ಮನೆ ಸಂಪೂರ್ಣ ಹಾನಿ, 55 ಮನೆ ಭಾಗಶಃ ಹಾನಿ, 31 ಅಲ್ಪ-ಸ್ವಲ್ಪ ಹಾನಿ ಎಂದು ಪರಿಗಣಿಸಿ ಒಟ್ಟು 289 ಮನೆಗಳು ಹಾನಿಗೊಳಗಾಗಿರುವುದಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಸಂಪೂರ್ಣ ಮತ್ತು ಭಾಗಶಃ ಹಾನಿಗೊಳಗಾದ ಒಟ್ಟು 258 ಮನೆಗಳಪೈಕಿ 255 ಮನೆಗಳಿಗೆ 5 ಲಕ್ಷ ರೂ. ಪರಿಹಾರದ ಹಣ ಸರಕಾರ ಘೋಷಿಸಿತ್ತು.

ಅವುಗಳಲ್ಲಿ ಪ್ರಥಮ ಹಂತವಾಗಿ 1 ಲಕ್ಷ ರೂ. ಹಣ ಬಿಡುಗಡೆಗೊಳಿಸಿದೆ. ಬಳಿಕ ತಳಪಾಯ-ಗೋಡೆ- ಛಾವಣಿ-ಪೂರ್ಣ ಹೀಗೆ ಹಂತವಾರು ಪ್ರಗತಿ ಸಾಧಿಸಿದ ಫಲಾನುಭವಿಗಳಿಗೆ ಜಿ.ಪಿ.ಎಸ್‌. ಅಳವಡಿಸಿದ ಅನಂತರ ನೇರವಾಗಿ ಖಾತೆಗೆ ಜಮಾ ಮಾಡ ಲಾಗುತ್ತಿದೆ. ಉಳಿದಂತೆ ಅಲ್ಪ-ಸ್ವಲ್ಪ ಹಾನಿಗೊಳಗಾದ 31 ಮನೆಗಳಿಗೆ ಪ್ರತಿ ಫಲಾನುಭವಿಗೆ 50,000 ರೂ. ಪೂರ್ಣ ಮೊತ್ತದ ಪರಿಹಾರದ ಹಣ ನೀಡಲಾಗಿದೆ. ಇಷ್ಟಾದರೂ ಮನೆಗಳು ಪೂರ್ಣ ಗೊಂಡಿಲ್ಲ. ಒಟ್ಟು 69 ಮನೆಗಳು ತಳಪಾಯ ಹಂತದಲ್ಲಿ, 77 ಮನೆಗಳು ಗೋಡೆ ಹಂತ, 67 ಮನೆಗಳು ಛಾವಣಿ ಹಂತ, 7 ಮನೆಗಳಷ್ಟೆ ಪೂರ್ಣ ಹಂತವಾಗಿದೆ.

ಬಾಡಿಗೆ: ಸ್ಪಷ್ಟತೆ ಇಲ್ಲ
ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಿಕೊಳ್ಳುವ ಫಲಾನುಭವಿಗೆ 50,000 ರೂ. ಮತ್ತು ಬಾಡಿಗೆ ಮನೆಯಲ್ಲಿ ವಾಸಿಸುವ ಫಲಾನುಭವಿಗೆ ಪ್ರತಿ ತಿಂಗಳು 5,000 ರೂ.ನಂತೆ 10 ತಿಂಗಳ ವರೆಗೆ ಮಾಸಿಕ ಬಾಡಿಗೆ ನೀಡಲಾಗಿದೆ. ಆದರೆ ಪ್ರಸಕ್ತ 10 ತಿಂಗಳು ಪೂರ್ಣಗೊಂಡಿದ್ದರಿಂದ ಮುಂದಕ್ಕೆ ಬಾಡಿಗೆ ನೀಡುವ ಬಗ್ಗೆ ಸರಕಾರ ಸ್ಪಷ್ಟತೆ ನೀಡಿಲ್ಲ. ಇತ್ತ ಮನೆಯೂ ಪೂರ್ಣಗೊಂಡಿಲ್ಲ. ಈ ಮಧ್ಯೆ ಕೊರೊನಾದಿಂದ ಬದುಕು ಮತ್ತಷ್ಟು ಜಟಿಲವಾಗಿದೆ.

ಪ್ರವಾಹಕ್ಕೆ ತುತ್ತಾದ ಮಂದಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯತೆ ಪೂರೈಸುವಲ್ಲಿ ಶಾಸಕನಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ತಾಂತ್ರಿಕ ತೊಂದರೆ ಸರಿಪಡಿಸಲು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇನೆ. ಚಾರ್ಮಾಡಿ ರಸ್ತೆ ಸರ್ವೆ ನಡೆಸಿ ಕೇಂದ್ರಕ್ಕೆ ವರದಿ ನೀಡಲಾಗಿದೆ.
-ಹರೀಶ್‌ ಪೂಂಜ, ಶಾಸಕ

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.