ಪಡುಮಲೆ: ಗರಡಿ ನಿರ್ಮಾಣವಾಗಲಿ; ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು

ಗರಡಿಗಳಿಗೆ ಜಾಗ ಮಂಜೂರು ಮಾಡಲು ಸರಕಾರ ಬದ್ಧವಾಗಿದೆ

Team Udayavani, Mar 27, 2023, 6:36 PM IST

ಪಡುಮಲೆ: ಗರಡಿ ನಿರ್ಮಾಣವಾಗಲಿ; ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು

ಪುತ್ತೂರು: ಪುತ್ತೂರಿನ ಇತಿಹಾಸ, ಚರಿತ್ರೆಗೆ ನಕ್ಷತ್ರದಂತೆ ಇರುವ ಶಕ್ತಿಗಳೆಂದರೆ ಕೋಟಿ-ಚೆನ್ನಯರು. ಅಂತಹ ಕಾರಣಿಕ ಶಕ್ತಿಗಳ ಹೆಸರನ್ನು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಇಡುವ ಮೂಲಕ ಸರಕಾರ ಗೌರವ ಸಲ್ಲಿಸಿದೆ ಎಂದು ರಾಜ್ಯ ಕಿಯೋನಿಕ್ಸ್‌ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಹೇಳಿದರು.

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣದ ಸಮಾರಂಭದ್ಲಲಿ ಅವರು ಮಾತನಾಡಿದರು. ಕರಾವಳಿಯಲ್ಲಿ 264 ಗರಡಿಗಳಿವೆ. ಕೋಟಿ -ಚೆನ್ನಯರು ಒಂದು ಜಾತಿಯಲ್ಲಿ ಹುಟ್ಟಿ ರಬಹುದು. ಆದರೆ ಅದನ್ನು ಮೀರಿ ಬೆಳೆದು ನಿಂತ ದೈವಿಕ ಶಕ್ತಿಗಳಾಗಿದ್ದಾರೆ. ಹಾಗಾಗಿ ಅವರನ್ನು ಒಂದು ಜಾತಿಗೆ ಸೀಮಿತಪಡಿಸಬಾರದು ಎಂದರು. ಅವರ ಜನ್ಮಭೂಮಿಯಲ್ಲಿ ಗರಡಿಯಿಲ್ಲ. ಇಂತಹ ಪುಣ್ಯ ಭೂಮಿಯಲ್ಲಿ ಗರಡಿ ನಿರ್ಮಿಸಿ ಆ ನೆಲವನ್ನು ಬೆಳಗಿಸಬೇಕು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಶುಭ ಹಾರೈಸಿದರು. ನಗರಸಭೆ ಅಧ್ಯಕ್ಷ ಕೆ.ಜೀವಂಧರ್‌ ಜೈನ್‌ ಮಾತನಾಡಿ ಕೋಟಿ ಚೆನ್ನಯರ ನಾಮಕರಣ ನಗರಸಭೆಗೂ ಹೆಮ್ಮೆ ತಂದಿದೆ ಎಂದರು. ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಜಯಂತ ನಡುಬೈಲು ಮಾತ ನಾಡಿ, ಗೆಜ್ಜೆಗಿರಿ, ಪಡುಮಲೆ, ಹನುಮ ಗಿರಿ ಕ್ಷೇತ್ರಗಳನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಕೆಲಸವನ್ನು ಶಾಸಕರು ಮಾಡಿದ್ದಾರೆ ಎಂದರು.

ಶಾಸಕರಿಗೆ ಸಮ್ಮಾನ 
ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ ಮಾಡಲು ಕಾರಣ ಕರ್ತರಾದ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದ ವಿವಿಧ ಸಂಘಟನೆಯಿಂದ ಸಮ್ಮಾನಿಸಲಾಯಿತು. ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್‌. ಗೌರಿ, ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್‌ ಶೆಣೈ, ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಆರ್‌. ಸಿ. ನಾರಾಯಣ್‌, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್‌ ಕೋಟ್ಯಾನ್‌, ನಗರಸಭೆ ಪೌರಾಯುಕ್ತ ಮಧು ಎಸ್‌. ಮನೋಹರ್‌ಉಪಸ್ಥಿತರಿದ್ದರು.

ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಸ್ವಾಗತಿಸಿದರು. ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಮುರಳೀಧರ ಆಚಾರ್ಯ ವಂದಿಸಿದರು. ಉಮೇಶ್‌ ಶೆಟ್ಟಿ ಮತ್ತು ಮಾಧವ ಶೆಣೈ ನಿರೂಪಿಸಿದರು.

ಗರಡಿಗಳಿಗೆ ಸ್ಥಳ ಮಂಜೂರಿಗೆ ಸರಕಾರ ಬದ್ಧ
ನಾಮಕರಣದ ಫ‌ಲಕ ಅನಾವರಣ ಮಾಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪ್ರಯತ್ನದಿಂದ ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರನ್ನಿಡಲಾಗಿದೆ. ಭವಿಷ್ಯದಲ್ಲಿ ಕರಾವಳಿಯ 264 ಗರಡಿಗಳ ಪೈಕಿ ಸರಕಾರಿ ಜಾಗದಲ್ಲಿ ಇರುವ ಗರಡಿಗಳಿಗೆ ಜಾಗ ಮಂಜೂರು ಮಾಡಲು ಸರಕಾರ ಬದ್ಧವಾಗಿದೆ ಎಂದ ಅವರು, ಪುತ್ತೂರಿನಲ್ಲಿ ಕೋಟಿ-ಚೆನ್ನಯರ ಹೆಸರಿನಲ್ಲಿ ಥೀಮ್‌ ಪಾರ್ಕ್‌ ನಿರ್ಮಿಸುವ ಯೋಜನೆ ಇದ್ದು ಅದಕ್ಕೆ ಬೇಕಾದ ಸರಕಾರಿ ಜಾಗ ಮಂಜೂರಾತಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದರು.

ಜಿಲಾಡಳಿತ ಸಹಕಾರ
ಜಿಲ್ಲಾಧಿಕಾರಿ ಎಂ.ಆರ್‌. ರವಿ ಕುಮಾರ್‌ ಮಾತನಾಡಿ, ಕೋಟಿ ಚೆನ್ನಯರಂತಹ ವೀರ ಪುರುಷರು ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದ್ದಾರೆ. ಪಡುಮಲೆ ಜನ್ಮಸ್ಥಳದಲ್ಲಿ ಗರಡಿ ನಿರ್ಮಾಣಕ್ಕಾಗಿ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ನೀಡುವ ಕೋರಿಕೆಗೆ ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.