ಪಡುಮಲೆಯಲ್ಲೊಂದು ಕೌತುಕ; ತೆಂಗಿನ ನೀರು ಬಿದ್ದರೂ ಪ್ರಜ್ವಲಿಸಿದ ಆರತಿ!


Team Udayavani, Jan 29, 2023, 12:21 PM IST

4–padumale

ಬಡಗನ್ನೂರು: ಐತಿಹಾಸಿಕ ಹಿನ್ನೆಲೆಯ ಶ್ರೀ ಕ್ಷೇತ್ರ ಪಡುಮಲೆಯಲ್ಲಿ ಗ್ರಾಮದ ದೇವಾಲಯ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ಸಾನ್ನಿಧ್ಯದ ಪುನಃ ನಿರ್ಮಾಣ ನಡೆಯುತ್ತಿದೆ. ದೇವಾಲಯದ ಮೂಲಸ್ಥಾನವಾಗಿರುವ ಮದಕದಲ್ಲಿರುವ ದೇವಿಯ ಸಾನ್ನಿಧ್ಯದ ಅಭಿವೃದ್ಧಿಯೂ ಆಗುತ್ತಿದ್ದು ಈ ಸಂದರ್ಭದಲ್ಲಿ ಘಟಿಸಿದ ವಿಸ್ಮಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಕೌತುಕಕ್ಕೆ ಕಾರಣವಾಗಿದೆ.

ಶಾಸ್ತಾರ ವಿಷ್ಣುಮೂರ್ತಿ ದೇವರ ಮೂಲವು 2 ಕಿ.ಮೀ. ದೂರದ ಪಡುಮಲೆ ಕ್ಷೇತ್ರದ ಮದಕದಲ್ಲಿರುವ ರಾಜರಾಜೇಶ್ವರೀ ದೇವಿ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಿದ್ದು, ಅಲ್ಲಿರುವ ರಾಜರಾಜೇಶ್ವರೀ ಗುಡಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸಾನ್ನಿಧ್ಯದ ಬಳಕೆಗೆ ಬಾವಿ ತೋಡುವ ನಿಟ್ಟಿನಲ್ಲಿ ಅರ್ಚಕರು ಪ್ರಾರ್ಥನೆ ಸಲ್ಲಿಸಿ ತೆಂಗಿನಕಾಯಿ ಒಡೆದಾಗ ಚಿಮ್ಮಿದ ತೆಂಗಿನ ನೀರು ಆರತಿ ತಟ್ಟೆಗೆ ಬಿದ್ದಿತು.

ಸಾಮಾನ್ಯವಾಗಿ ನೀರು ಬಿದ್ದಾಗ ಆರುವ ಬೆಳಕು ಇಲ್ಲಿ ಪ್ರಖರವಾಗಿ ಉರಿಯಲಾರಂಭಿಸಿತು. ಇದು ದೇವಿಯ ಸಾನ್ನಿಧ್ಯ ಬೆಳಗುವ ಸೂಚನೆ ಎಂಬ ಅಭಿಪ್ರಾಯ ಭಕ್ತರಲ್ಲಿ ಮೂಡಿದೆ. ಆರತಿಯ ಬೆಂಕಿ ಪ್ರಜ್ವಲಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಾಲಯದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಮದಕದಿಂದ ನೀರು ತಂದು ಶುದ್ಧೀಕರಣ ಮಾಡಬೇಕೆಂದು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿದೆ. ದೇವಾಲಯಕ್ಕೆ ಸಂಬಂಧಿಸಿದ ನಾಗನ ಕಲ್ಲು ಸೇರಿದಂತೆ ದೇವರ ವಿಗ್ರಹಗಳನ್ನು ಮದಕದಲ್ಲೇ ಜಲಸ್ತಂಭನ ಮಾಡಲಾಗಿದೆ. ದೇವಿಯ ಸಾನ್ನಿಧ್ಯದಲ್ಲಿ ತೋಡಿರುವ ಬಾವಿಯಲ್ಲಿ ಕೇವಲ 6 ಅಡಿಯಲ್ಲಿ ನೀರು ಲಭಿಸಿರುವುದೂ ಇಲ್ಲಿನ ಇನ್ನೊಂದು ವೈಶಿಷ್ಟ್ಯ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.