Panemangalore Bridge ಬಿ.ಸಿ. ರೋಡ್ನಲ್ಲಿ ತಾಸು ಕಾಲ ಟ್ರಾಫಿಕ್ ಜಾಮ್
ಪಾಣೆಮಂಗಳೂರು ಸೇತುವೆಯಲ್ಲಿ ಕೆಟ್ಟು ನಿಂತ ಲಾರಿ
Team Udayavani, Oct 3, 2023, 12:24 AM IST
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಲಾರಿಯೊಂದು ಕೆಟ್ಟು ನಿಂತ ಪರಿಣಾಮವಾಗಿ ಸುಮಾರು 1 ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಲಾರಿಯ ಟಯರ್ನಲ್ಲಿ ತಾಂತ್ರಿಕ ದೋಷ ಕಂಡುಬಂದು ಸೇತುವೆಯ ಮಧ್ಯೆಯೇ ನಿಲ್ಲುವಂತಾಯಿತು. ವಾಹನಗಳು ಒಂದು ಬದಿಯಲ್ಲಿ ಮಾತ್ರ ಸಂಚರಿಸಿದ ಪರಿಣಾಮ ಸೇತುವೆಯ ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು.
ಬಳಿಕ ಕ್ರೇನ್ ತರಿಸಿ ಲಾರಿಯನ್ನು ಎಳೆದುಕೊಂಡು ಹೋಗಿ ಬದಿಗೆ ಸರಿಸ ಲಾಯಿತು. ಬಂಟ್ವಾಳ ಸಂಚಾರ ಠಾಣಾ ಪಿಎಸ್ಐ ಸುತೇಶ್ ಹಾಗೂ ಸಿಬಂದಿ ಸ್ಥಳಕ್ಕಾಗಮಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕೈಗೊಂಡರು.
ಕಳೆದ 2 ವಾರಗಳಲ್ಲಿ ವಾಹನಗಳ ಅಪಘಾತ ಮತ್ತು ಕೆಟ್ಟು ನಿಂತು ಟ್ರಾಫಿಕ್ ಜಾಮ್ ಉಂಟಾಗುತ್ತಿರುವುದು ಇದು 3ನೇ ಘಟನೆಯಾಗಿದೆ.
ಕಲ್ಲಡ್ಕ: ನಿತ್ಯವೂಟ್ರಾಫಿಕ್ ಜಾಮ್
ಹೆದ್ದಾರಿ ಕಾಮಗಾರಿಯ ಪರಿಣಾಮ ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಯ ಗೊಂದಲದಿಂದ ನಿತ್ಯವೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಫ್ಲೆ$çಓವರ್ ನಿರ್ಮಾಣದಿಂದ ಸದ್ಯ ಸರ್ವೀಸ್ ರಸ್ತೆಯಲ್ಲೇ ಸಂಚರಿಸಬೇಕಿದೆ. ಆದರೆ ಕಾಮಗಾರಿ ನಿರ್ವಹಿಸುವ ಸಂಸ್ಥೆಯು ಸರ್ವೀಸ್ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸದ ಪರಿಣಾಮ ಹೊಂಡ ಗುಂಡಿಗಳಿಂದ ತುಂಬಿ ವಾಹನಗಳ ಸರಾಗ ಸಾಗಾಟಕ್ಕೆ ಅಡ್ಡಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್