ಬಂಟ್ವಾಳ: ತೋಟದಲ್ಲಿ ಕಂಡುಬಂದ ಚಿಪ್ಪುಹಂದಿ, ರಕ್ಷಿತಾರಣ್ಯಕ್ಕೆ ಬಿಟ್ಟ ಅಧಿಕಾರಿಗಳು
Team Udayavani, Dec 5, 2020, 4:09 PM IST
ಬಂಟ್ವಾಳ: ಕರಾವಳಿ ಭಾಗದಲ್ಲಿ ಅಪರೂಪವಾದ ಚಿಪ್ಪುಹಂದಿಯನ್ನು ಹಿಡಿದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣಕೋಡಿ ಎಂಬಲ್ಲಿ ಪುರುಷೋತ್ತಮ ಎಂಬವರ ಮನೆಯ ಪಕ್ಕದ ತೋಟದಲ್ಲಿ ಈ ಚಿಪ್ಪುಹಂದಿ ಕಂಡು ಬಂದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ.
ತಮ್ಮ ತೋಟದಲ್ಲಿ ಚಿಪ್ಪು ಹಂದಿ ಇರುವ ಬಗ್ಗೆ ಪುರುಷೋತ್ತಮ ಅವರು ಬಂಟ್ವಾಳ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿ ಸಹಿತ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಚಿಪ್ಪುಹಂದಿಯನ್ನು ಸುರಕ್ಷಿತವಾಗಿ ಹಿಡಿದು ಬಳಿಕ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಯಶಸ್ಬಿಯಾಗಿದ್ದಾರೆ.
ಇದನ್ನೂ ಓದಿ:ಈ ಮನೆಯಲ್ಲಿ ಎರಡು ದಿನದಲ್ಲಿ ನಾಲ್ಕು ಹಾವು ಪ್ರತ್ಯಕ್ಷ: ಕುಟುಂಬಸ್ಥರ ಆತಂಕ
ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್. ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಮತ್ತು ರೇಖಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ