ಫರಂಗಿಪೇಟೆ ಪರಿಸರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವದಂತಿ : ಗ್ರಾ.ಪಂ ತಂಡದಿಂದ ಪರಿಶೀಲನೆ
Team Udayavani, Sep 25, 2022, 12:56 PM IST
ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಪರಿಸರದಲ್ಲಿ ರವಿವಾರ ಬೆಳಗ್ಗೆ ಕೂಡಾ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ತಿಳಿಸಿದ್ದು ಇದರಿಂದ ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಫರಂಗಿಪೇಟೆ ಸಮೀಪದ ಟೆನ್ತ್ ಮೈಲ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆ ಕಂಡ ಬಗ್ಗೆ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಫರಂಗಿಪೇಟೆ ಸಮೀಪದ ವಳಚ್ಚಿಲ್ ನಲ್ಲಿ ಚಿರತೆ ಕಂಡು ಬಂದಿತ್ತು ಎಂದು ಹೇಳಲಾಗಿದೆ.
ರವಿವಾರ ಬೆಳಗ್ಗೆ ಫರಂಗಿಪೇಟೆ ಸಮೀಪದ ಟೆನ್ತ್ ಮೈಲ್ ಪಕ್ಕದ ಕುಂಜತ್ಕಲ ಅಂಗನವಾಡಿಯ ಹಿಂಬದಿಯ ಗುಡ್ಡೆಯಲ್ಲಿ ಚಿರತೆ ಕಂಡು ಬಂದಿದೆ ಎಂದು ಸುದ್ದಿ ಪರಿಸರದಲ್ಲಿ ಹರಿದಾಡಿದ್ದು ಇದಿರಂದ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದರು.
ವಿಷಯ ತಿಳಿದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಸ್ಯ ನಝೀರ್ ಟೆನ್ತ್ ಮೈಲ್, ಕಮರುದ್ದೀನ್ ಕರ್ಮಾರ್ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಅಂಗನವಾಡಿ ಹಿಂಬದಿಯ ಗುಡ್ಡೆಯಲ್ಲಿ ಕೆಲವು ಹೊತ್ತು ಹುಡುಕಾಟ ನಡೆಸಿದರು.
ಗ್ರಾಮದ ಟೆನ್ತ್ ಮೈಲ್ ಪರಿಸರದಲ್ಲಿ ಚಿರತೆಯೊಂದು ಓಡಾಡುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪಿಡಿಒಗೆ ತಿಳಿಸಿದ್ದೇನೆ. ಚಿರತೆ ಕಂಡು ಬಂದಿದೆ ಎಂದು ಹೇಳಲಾದ ಪರಿಸರದ ಜನರು ಜಾಗ್ರತೆ ವಹಿಸುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ತಿಳಿಸಿದ್ದಾರೆ.
ಇದನ್ನೂ ಓದಿ : “ಯಶ್ ಅವರೊಂದಿಗೆ ಸಿನಿಮಾ ಮಾಡುವ ಪ್ಲ್ಯಾನ್ ಯಿದೆ..” ಖ್ಯಾತ ನಟ ಕೊಟ್ರು ದೊಡ್ಡ ಸುಳಿವು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ