ಮುಂಗಾರು ಪೂರ್ವದಲ್ಲೇ ಮೈದುಂಬಿದ ಪಯಸ್ವಿನಿ


Team Udayavani, May 31, 2018, 4:41 PM IST

31-may-17.jpg

ಸುಳ್ಯ : ಭಾಗಮಂಡಲ ಭಾಗದಲ್ಲಿ ಭರ್ಜರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸುಳ್ಯ ನಗರದ ಸನಿಹದಲ್ಲಿ ಹಾದು ಹೋಗಿರುವ ಪಯಸ್ವಿನಿ ಮುಂಗಾರು ಪೂರ್ವದಲ್ಲಿಯೇ ತುಂಬಿ ಹರಿದು ಕೃಷಿಕರ ಮೊಗದಲ್ಲಿ ಸಂತಸ ಮೂಡಿದೆ.

ಮಡಿಕೇರಿ ತಾಲೂಕಿನ ಭಾಗಮಂಡಲದ ಪಶ್ಚಿಮ ದಿಕ್ಕಿನಲ್ಲಿ ಉಗಮಗೊಂಡು ಜೋಡುಪಾಲದ ಮೂಲಕ ಅರಂತೋಡು, ಸುಳ್ಯ ನಗರ, ಪೈಚಾರು, ಜಾಲ್ಸೂರು, ಪಂಜಿಕಲ್ಲು, ದೇವರಗುಂಡ ಮುರೂರು ಮೂಲಕ ಸಾಗಿ ಕೇರಳ ಸೇರುತ್ತದೆ. ಬೇಸಗೆ ಕಾಲದಲ್ಲಿ ಈ ನದಿ ತಟದೊದ್ದಗಿನ ಕೃಷಿಕರಿಗೆ ಪಯಸ್ವಿನಿಯೇ ಜೀವಧಾರೆ. ಸುಳ್ಯದ ನಗರಕ್ಕೆ ಕುಡಿಯುವ ನೀರಿಗೂ ಇದೆ ಮೂಲವಾಗಿದೆ.

ಜೀವಕಳೆ
ಎರಡು ವರ್ಷದ ಹಿಂದೆ ಎಪ್ರಿಲ್‌, ಮೇ ತಿಂಗಳಿನಲ್ಲಿ ಪಯಸ್ವಿನಿ ಸಂಪೂರ್ಣ ಬತ್ತಿ ಬರಡಾಗಿತ್ತು. ಆಗ ಕುಡಿಯುವ ನೀರಿಗೂ ಬರ ಬರುವ ಸಂದರ್ಭ ಎದುರಾಗಿತ್ತು. ಜೂನ್‌ ಮೊದಲ ವಾರದಲ್ಲಿ ಮಳೆಯಾದ ಕಾರಣ, ಆತಂಕ ದೂರವಾಗಿತ್ತು. ಆ ವರ್ಷ ಜುಲೈ ಅನಂತರವೇ ಮಳೆ ಹೆಚ್ಚಳಗೊಂಡು ನದಿಯಲ್ಲಿ ನೀರಿನ ಹರಿವು ಕಂಡಿತ್ತು. ಕಳೆದ ವರ್ಷವೂ ಬಿಸಿಲಿನ ತಾಪ ಮೇ ಅಂತ್ಯದ ತನಕ ಇದ್ದು, ಮಳೆ ಬಂದಿದ್ದರೂ, ನೀರಿನ ಮಟ್ಟ ಹೆಚ್ಚಳಗೊಂಡಿರಲಿಲ್ಲ.

ಮುಂಗಾರು ಪೂರ್ವ ಮಳೆ
ಈ ಬಾರಿ ಮಾರ್ಚ್‌, ಎಪ್ರಿಲ್‌, ಮೇ ತಿಂಗಳಿನಲ್ಲಿ ಮಳೆಯಾಗಿದೆ. ಪಯಸ್ವಿನಿ ಉಗಮದ ಸ್ಥಳದಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗೂ ಮೀರಿ ಸುರಿದ ಕಾರಣ, ಮೇ ಮೊದಲ ವಾರದಲ್ಲಿಯೇ ನದಿ ಹರಿವು ಹೆಚ್ಚಾಗಿತ್ತು.

ಮೇ 9ರಂದು ಸುರಿದ ಮಳೆಯಿಂದ ನಗರದ ಕುಡಿಯುವ ನೀರಿನ ಪೂರೈಕೆಗಾಗಿ ನಾಗಪಟ್ಟಣದ ಬಳಿ ನಿರ್ಮಿಸಲಾದ ಮರಳಿನ ಕಟ್ಟದಿಂದ ಹೊರ ಹರಿವು ಕಂಡಿತ್ತು. ಮಾರ್ಚ್‌ನಲ್ಲಿ 49 ಮಿ.ಮೀ., ಎಪ್ರಿಲ್‌ನಲ್ಲಿ 125 ಮಿ.ಮೀ., ಮೇ ತಿಂಗಳಲ್ಲಿ 516 ಮಿ.ಮೀ. ಮಳೆ ಸುರಿದಿದೆ. ಇವೆಲ್ಲವೂ ನದಿಯ ನೀರಿನ ಮಟ್ಟ ಹೆಚ್ಚಳಕ್ಕೆ ಪೂರಕವಾಗಿವೆ.

ನೀರಿನ ಸೆಲೆ
ಕೆಲ ದಿನಗಳಿಂದ ಮಳೆಯಾದ ಪರಿಣಾಮ ಕೆಲವೆಡೆ ಬಾವಿ, ಕೆರೆಯಲ್ಲಿ ನೀರಿನ ಸೆಲೆ ಕಂಡಿದೆ. ಸಣ್ಣ ಪುಟ್ಟ ತೋಡು, ಹೊಳೆಗಳಲ್ಲಿಯು ಕೆಂಬಣ್ಣದ ನೀರು ಹರಿದಿದೆ. ಮಳೆ ನಿರಂತರವಾಗಿ ಸುರಿದರೆ, ನೀರಿನ ಮೂಲಗಳು ಭರ್ತಿ ಆಗುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.