ಪೆರಿಯತ್ತೋಡಿ, ಸಿಂಗಾಣಿ ಪ್ರದೇಶದಲ್ಲಿ ನೀರಿಗೆ ತತ್ವಾರ

ಬತ್ತಿದ ಬಾವಿ, ಕೊಳವೆಬಾವಿ: 20ಕ್ಕೂ ಹೆಚ್ಚು ಮನೆಗಳಿಗೆ ಸಮಸ್ಯೆ, ನೀರು ಹೊತ್ತು ತರುವ ಸ್ಥಿತಿ

Team Udayavani, Jun 4, 2019, 6:00 AM IST

r-34

ಪೆರಿಯತ್ತೋಡಿ, ಸಿಂಗಾಣಿ ಪ್ರದೇಶದಲ್ಲಿ ನೀರಿಗಾಗಿ ಕಾಯುತ್ತಿರುವ ನಿವಾಸಿಗಳು

ನಗರ: ನಗರಸಭಾ ವ್ಯಾಪ್ತಿಯ ಪೆರಿಯತ್ತೋಡಿ, ಸಿಂಗಾಣಿ ಪ್ರದೇಶದ ಜನರ ನೀರಿಗೆ ಸಂಬಂಧಿಸಿದ ಬವಣೆ ತೀವ್ರಗೊಂಡಿದೆ. ಬೇಸಗೆಯಲ್ಲಿ ಇಲ್ಲಿ ನೀರಿನ ಸಮಸ್ಯೆ ನಿತ್ಯ ನಿರಂತರ ಎನ್ನುವಂತಾಗಿದ್ದು, ಈ ಪರಿಸರದ ಜನತೆ ಕಿಲೋ ಮೀಟರ್‌ ದೂರದಿಂದ ನೀರು ತರುವ ಪರಿಸ್ಥಿತಿ ಒಂದೆಡೆಯಾದರೆ, ಟ್ಯಾಂಕರ್‌ಗಳಲ್ಲಿ ಬರುವ ನಗರಸಭೆಯ ನೀರಿಗಾಗಿ ಕಾಯುವ ಪರಿಸ್ಥಿತಿ ಇನ್ನೊಂಡೆದೆ.

ನಗರದಿಂದ ಬಪ್ಪಳಿಗೆ ಮೂಲಕ ಬಲಾ°ಡು ಬಳಿ ಎಡಕ್ಕೆ ಒಳ ರಸ್ತೆಯಲ್ಲಿ ಚಲಿಸಿದರೆ ಈ ಸಿಂಗಾಣಿ, ಪೆರಿಯತ್ತೋಡಿ ಪ್ರದೇಶ ಸಿಗುತ್ತದೆ. ಈ ರಸ್ತೆ ಇನ್ನೊಂದು ಭಾಗದಿಂದ ಮಂಜಲ್ಪಡ³ನ್ನು ಸಂಪರ್ಕಿಸುತ್ತದೆ. ಈ ಪ್ರದೇಶದಲ್ಲಿ ದಾರಿಯುದ್ದಕ್ಕೂ ಸಾಗುತ್ತಿ ದ್ದಂತೆ ರಸ್ತೆಯುದ್ದಕ್ಕೂ ನೀರು ಸಂಗ್ರಹಿಸುವ ಪ್ಲಾಸ್ಟಿಕ್‌ ಡ್ರಮ್‌, ಬಕೆಟ್‌ ಮುಂತಾದ ಪಾತ್ರೆಗಳನ್ನು ರಸ್ತೆ ಬದಿ ಇಟ್ಟು ನಗರಸಭೆಯ ನೀರಿಗಾಗಿ ಕಾಯುವ ಸ್ಥಿತಿ ಕಾಣಸಿಗುತ್ತದೆ.

ಕೊಳವೆಬಾವಿಯೂ ಬತ್ತಿದೆ
ಪೆರಿಯತ್ತೋಡಿ ಪ್ರದೇಶದಲ್ಲಿರುವ ಕಾಲನಿಯಲ್ಲಿ ಸುಮಾರು 15-20ರಷ್ಟು ಮನೆಗಳಿದ್ದು, ಇಲ್ಲಿ ಹಲವು ವರ್ಷಗಳ ಹಿಂದೆ ನಿರ್ಮಿಸಿರುವ ಕೊಳವೆ ಬಾವಿ ನೀರಿಲ್ಲದೆ ಬತ್ತಿ ಹೋಗಿದೆ. ಅಕ್ಕಪಕ್ಕದಲ್ಲಿರುವ ಬಾವಿಯೂ ಬತ್ತಿ ಹೋಗಿದ್ದು, ನಗರಸಭೆಯ ವತಿಯಿಂದ ನೀಡುವ ನೀರೇ ಗತಿಯಾಗಿದೆ. ಕೆಲವೊಮ್ಮೆ ನೀರು ಬಂದರೂ ಆಯಿತು, ಬಾರದಿದ್ದರೂ ಆಯಿತು. ನೀರಿಗಾಗಿ ಚಾತಕ ಪಕ್ಷಿಯಂತೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸಿಕ್ಕಿದರೂ ಅಗತ್ಯದಷ್ಟು ನೀರು ಕೆಲವೊಮ್ಮೆ ಸಿಗುವುದೇ ಇಲ್ಲ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

ಮೂರು ತಿಂಗಳಿನಿಂದ ಹಾಹಾಕಾರ
ಮೂರು ತಿಂಗಳಿನಿಂದ ಪೆರಿಯತ್ತೋಡಿ, ಸಿಂಗಾಣಿ ಪ್ರದೇಶದ ನಿವಾಸಿಗಳು ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಒಂದು ಕಿ.ಮೀ.ಗೂ ಅಧಿಕ ದೂರದಿಂದ ನೀರು ಹೊತ್ತು ತರುವ ಪರಿಸ್ಥಿತಿ ಉಂಟಾಗಿದೆ. ನೀರಿಗಾಗಿ ಹೊಸ ಕೊಳವೆ ಬಾವಿಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ನಗರಸಭೆ ವತಿಯಿಂದ ಟ್ಯಾಂಕರ್‌ಗಳಲ್ಲಿ ಹೆಚ್ಚಿನ ನೀರು ನೀಡುವ ಸರಿಯಾದ ವ್ಯವಸ್ಥೆ ಮಾಡಲಿ ಎನ್ನುವುದು ಇಲ್ಲಿನ ನಿವಾಸಿಗಳಾದ ಶಾಂತಿ, ಶೋಭಿತಾ ಅವರ ಆಗ್ರಹವಾಗಿದೆ.

 ಕೊಳವೆ ಬಾವಿ ಕೊರೆಸುತ್ತೇವೆ
ಪೆರಿಯತ್ತೋಡಿ, ಸಿಂಗಾಣಿ ಪರಿಸರದಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ. ಶಾಸಕರು ಹಾಗೂ ನಗರಸಭೆ ವತಿಯಿಂದ ಎರಡು ಕೊಳವೆ ಬಾವಿ ಕೊರೆಸಲು ಅನುದಾನ ಒದಗಿಸಲಾಗಿದೆ. ಪಾಯಿಂಟ್‌ ಕೂಡ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಇಲ್ಲಿ ಕೊಳವೆ ಬಾವಿ ಕೊರೆಸುತ್ತೇವೆ.
– ನವೀನ್‌ ಕುಮಾರ್‌, ನಗರಸಭೆ ಸದಸ್ಯರು

 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.