ಮಣ್ಣು ಕುಸಿತ ತಡೆಗೆ ಶಾಶ್ವತ ಯೋಜನೆ: ಸಂಜೀವ್‌ ಕಿಶೋರ್‌

ಘಾಟಿಯಲ್ಲಿ ಹಳಿ ಸುರಕ್ಷೆ ಪರಾಮರ್ಶೆ

Team Udayavani, Oct 31, 2021, 5:11 AM IST

ಮಣ್ಣು ಕುಸಿತ ತಡೆಗೆ ಶಾಶ್ವತ ಯೋಜನೆ: ಸಂಜೀವ್‌ ಕಿಶೋರ್‌

ಸುಬ್ರಹ್ಮಣ್ಯ: ರೈಲ್ವೇಗೆ ಅತ್ಯಂತ ಸವಾಲಿನ ಪ್ರದೇಶಗಳಲ್ಲಿ ಒಂದಾಗಿರುವ ಪಶ್ಚಿಮಘಟ್ಟದ ಸುಬ್ರಹ್ಮಣ್ಯ ರೋಡ್‌ನಿಂದ ಸಕಲೇಶಪುರ ತನಕ ಮಳೆಗಾಲದಲ್ಲಿ ಹಳಿಯ ಮೇಲೆ ಗುಡ್ಡ ಜರಿದು ಆಗಾಗ ಸಮಸ್ಯೆ ಯಾಗ‌ುತ್ತದೆ. ಇದನ್ನು ನಿವಾರಿಸಲು ಸೂಕ್ತ ಯೋಜನೆ ರೂಪಿಸ ಲಾಗುವುದು ಎಂದು ಸೌತ್‌ ವೆಸ್ಟರ್ನ್ ರೈಲ್ವೇಸ್‌ ಜನರಲ್‌ ಮ್ಯಾನೇಜರ್‌ ಸಂಜೀವ್‌ ಕಿಶೋರ್‌ ಹೇಳಿದರು.

ನೆಟ್ಟಣ ನಿಲ್ದಾಣದಲ್ಲಿನ ಮೂಲಸೌಕರ್ಯ ಮತ್ತು ಸುರಕ್ಷೆಯನ್ನು ಶನಿವಾರ ಪರಿಶೀಲಿಸಿದ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸುರಕ್ಷೆಯನ್ನು ಪರಿಶೀಲಿಸಲು ಇಲ್ಲಿಗೆ ಆಗಮಿಸಿದ್ದೇನೆ. ಘಾಟಿ ಸೇರಿದಂತೆ ಮಂಗಳೂರಿನಿಂದ-ಬೆಂಗಳೂರಿನ ತನಕವೂ ರೈಲು ಹಾದಿ ಮತ್ತು ನಿಲ್ದಾಣಗಳನ್ನು ಸಮಗ್ರ ವಾಗಿ ಪರಿಶೀಲಿಸಿದ್ದೇನೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ರೈಲಿನಲ್ಲಿ ಆಗಮಿಸುವ ಭಕ್ತರು ನೆಟ್ಟಣ ನಿಲ್ದಾಣವನ್ನು ಅವಲಂಬಿಸಿರುವುದರಿಂದ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ನವೆಂಬರ್‌ನಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಆರಂಭಗೊಳ್ಳಲಿದ್ದು, ಮುಂದಿನ ಮಳೆಗಾಲದ ಒಳಗೆ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು.

ಇದನ್ನೂ ಓದಿ:ಚೀನಾ ಸೈನಿಕರ ಪತ್ತೆಗಾಗಿ ಹೊಸ ತಂತ್ರಜ್ಞಾನ : ಗಡಿ ಉಲ್ಲಂಘನೆ ತಪ್ಪಿಸಲು ಈ ಪ್ರಯತ್ನ

ಗ್ರಾಮೀಣ ನಿಲ್ದಾಣ ಅಭಿವೃದ್ಧಿ
ಗ್ರಾಮೀಣ ರೈಲು ನಿಲ್ದಾಣಗಳ ಅಭಿವೃದ್ಧಿಗೆ ವಿನೂತನ ಚಿಂತನೆ ಮಾಡಲಾಗುವುದು. ಸಿಬಂದಿ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದರು. ಮೈಸೂರು ರೈಲ್ವೇಯ ಡಿವಿಜನಲ್‌ ಮ್ಯಾನೇಜರ್‌ ರಾಹುಲ್‌ ಅಗರ್ವಾಲ್‌, ಪ್ರಿನ್ಸಿಪಲ್‌ ಚೀಫ್ ಎಂಜಿನಿಯರ್‌ ಎಸ್‌.ಪಿ.ಎಸ್‌. ಗುಪ್ತಾ, ಕಾರ್ಯದರ್ಶಿ ಸಂತೋಷ್‌ ಹೆಗ್ಡೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಒಪ್ಪಿಗೆ ಸಿಕ್ಕ ಕೂಡಲೇ ವಿಜಯಪುರ ರೈಲು
ವಿಜಯಪುರ – ಹಾಸನ – ಸುಬ್ರಹ್ಮಣ್ಯ ರೋಡ್‌ – ಮಂಗಳೂರು ರೈಲು ಒಮ್ಮೆ ಆರಂಭವಾಗಿದ್ದರೂ ಲಾಕ್‌ಡೌನ್‌ ಅವಧಿಯಲ್ಲಿ ನಿಲ್ಲಿಸಲಾಗಿತ್ತು. ಉತ್ತರ ಮತ್ತು ದಕ್ಷಿಣ ಕರ್ನಾಟಕವನ್ನು ಜೋಡಿಸುವ ಮತ್ತು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಅನುಕೂಲತೆಗೆ ಈ ರೈಲು ಅತ್ಯಾವಶ್ಯಕವಾದ ಕಾರಣ ಶೀಘ್ರ ಆರಂಭಿಸುವಂತೆ ರೈಲ್ವೇ ಬೋರ್ಡ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಪ್ಪಿಗೆ ದೊರಕಿದ ಕೂಡಲೇ ಓಡಾಟ ಆರಂಭಿಸಲಿದೆ ಎಂದು ಸಂಜೀವ್‌ ಕಿಶೋರ್‌ ಹೇಳಿದರು.

ಸುಬ್ರಹ್ಮಣ್ಯ ರೋಡ್‌ ನಿಲ್ದಾಣ ಸೇರಿದಂತೆ ಇತರ ಕೆಲವೊಂದು ಪ್ರಮುಖ ನಿಲ್ದಾಣಗಳಲ್ಲಿ ವಿದ್ಯುತ್‌ ಚಾಲಿತವಾಗಿ ರೈಲುಗಳು ಚಲಿಸಲು ಬೇಕಾದ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಸಿಗ್ನಲ್‌ ವ್ಯವಸ್ಥೆಗಳ ಪರಿಪೂರ್ಣತೆಗೂ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕವಾಗಿ ರೈಲು ವ್ಯವಸ್ಥೆಗಳ ಔನ್ನತ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್‌ ಸಿಬಂದಿ

Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್‌ ಸಿಬಂದಿ

25 ಕೋಟಿ ರೂ. ಗೆದ್ದರೆಂದು ಸುಳ್ಳು ಪ್ರಚಾರ; ದೂರು ದಾಖಲು

Sullia 25 ಕೋಟಿ ರೂ. ಗೆದ್ದರೆಂದು ಸುಳ್ಳು ಪ್ರಚಾರ; ದೂರು ದಾಖಲು

Sullia ಆಟೋ ರಿಕ್ಷಾದಲ್ಲಿ ವ್ಯಕ್ತಿ ಸಾವು

Sullia ಆಟೋ ರಿಕ್ಷಾದಲ್ಲಿ ವ್ಯಕ್ತಿ ಸಾವು

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

police crime

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.