ದೇವರಗುಂಡಿ ಜಲಪಾತದ ಬಳಿ ಅಶ್ಲೀಲ ಪೋಟೋಶೂಟ್: ನಟಿ ಬೃಂದಾ ಅರಸ್ ಕ್ಷಮೆಯಾಚನೆ !


Team Udayavani, Oct 29, 2020, 9:03 PM IST

devara-gundi

ಸುಳ್ಯ:  ತಾಲೂಕಿನ ತೊಡಿಕಾನ ಸಮೀಪದ ದೇವರಗುಂಡಿ ಜಲಪಾತದ ಪರಿಸರದಲ್ಲಿ ಬೆಂಗಳೂರಿನ ಮಾಡೆಲ್ ತಂಡವೊಂದು ತುಂಡೂಡುಗೆ ಧರಿಸಿ ಫೋಟೋ ಶೂಟ್ ನಡೆಸಿದ್ದು, ಧಾರ್ಮಿಕ ಹಿನ್ನೆಲೆಯುಳ್ಳ ಪ್ರದೇಶದಲ್ಲಿ ಈ ರೀತಿಯ ವರ್ತನೆಯ ಬಗ್ಗೆ ಭಕ್ತವೃಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ಬೆಂಗಳೂರಿನಿಂದ ಬಂದಿದ್ದ ತಂಡವೊಂದು ತೊಡಿಕಾನದ ಮನೆಯೊಂದಕ್ಕೆ ಬಂದು ಅಲ್ಲಿಂದ ತೊಡಿಕಾನ ದೇವಸ್ಥಾನದಿಂದ ಎರಡೂವರೆ ಕಿ.ಮೀ. ದೂರದಲ್ಲಿರುವ ದೇವರಗುಂಡಿ ಜಲಪಾತ ಬಳಿ ತೆರಳಿ ಫೋಟೋಶೂಟ್ ನಡೆಸಿದ್ದರು. ಈ ಫೋಟೋ ಶೂಟ್ ದೃಶ್ಯಗಳನ್ನು ಇನ್ ಸ್ಟಾಗ್ರಾಂಗೆ ಅಪ್ ಲೋಡ್ ಮಾಡಿದ್ದರು.   ಈ ಫೋಟೋಗಳನ್ನು ನೋಡಿದ ಸುಳ್ಯ ಆಸುಪಾಸಿನ ಕೆಲವರಿಗೆ ದೇವರಗುಂಡಿಯ ಪರಿಸರ ಎನ್ನುವ ಅಂಶ ಬೆಳಕಿಗೆ ಬಂತು. ನಂತರದಲ್ಲಿ ತೊಡಿಕಾನ ದೇವಸ್ಥಾನಕ್ಕೆ ಮಾಹಿತಿ ನೀಡಿದ್ದಾರೆ.

ದೇವರಗುಂಡಿ ಜಾಗ ದೇವಸ್ಥಾನದಿಂದ ಎರಡೂವರೆ ಕಿ.ಮೀ. ದೂರದಲ್ಲಿದೆ. ಅದು ದೇವಸ್ಥಾನದ ಜಾಗವಲ್ಲ. ರಿಸರ್ವ್ ಫಾರೆಸ್ಟ್ ನೊಳಗಿರುವ ಜಾಗ. ಅಲ್ಲಿ ಈ ಮೊದಲು 2 ಸಾವು ಸಂಭವಿಸಿದ ಬಳಿಕ ನಾವು ದೇವಸ್ಥಾನದ ವತಿಯಿಂದ ‘ಅಪಾಯಕಾರಿ ಸ್ಥಳ. ಇಲ್ಲಿ ಫೋಟೋಶೂಟ್ ಮಾಡಬಾರದು’ಎಂಬ ಫಲಕ ಹಾಕಿದ್ದೇವೆ. ಅಲ್ಲಿಗೆ ಯಾರಾದರೂ ಹೋಗುವುದಿದ್ದರೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ಹೋಗಬೇಕು ಎಂದು ದೇವಸ್ಥಾನ ಮಂಡಳಿಯವರು ತಿಳಿಸಿದ್ದಾರೆ.

ಈ ದೇವರ ಗುಂಡಿಯಿಂದ ಪ್ರತಿವರ್ಷ ದೇವಳಕ್ಕೆ ತೀರ್ಥ ತರುವ ಸಂಪ್ರದಾಯ ಇರುವುದರಿಂದ ದೇವರಗುಂಡಿ ತೊಡಿಕಾನ ದೇವಸ್ಥಾನದೊಂದಿಗೆ ಧಾರ್ಮಿಕ ಸಂಬಂಧ ಹೊಂದಿದೆ. ಇಂತಹ ಸ್ಥಳದಲ್ಲಿ ಅಸಭ್ಯ ರೀತಿಯಲ್ಲಿ ಫೋಟೋ ಶೂಟ್ ನಡೆಸಿರುವುದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ದೂರು ದಾಖಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದೇವಳದ ಆಡಳಿತಾಧಿಕಾರಿ ಮತ್ತು ಸುಳ್ಯ ತಹಶೀಲ್ದಾರ್ ರವರ ಗಮನಕ್ಕೆ ತರಲಾಗಿದ್ದು, ಅವರು ಕಾನೂನು ಕ್ರಮದ ಬಗ್ಗೆ ಚರ್ಚಿಸುತ್ತಿದ್ದಾರೆಂದು ಎನ್ನಲಾಗಿದೆ. ಬೆಂಗಳೂರಿನಿಂದ ಬಂದ ರೂಪದರ್ಶಿಗಳ ಮತ್ತು ಛಾಯಾಗ್ರಾಹಕರ ತಂಡವನ್ನು ದೇವರಗುಂಡಿ ಜಲಪಾತದ ಬಳಿಗೆ ಕರೆದೊಯ್ದವರಾರೆಂಬ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ.

ನಟಿ ಬೃಂದಾ ಅರಸ್ ಕ್ಷಮೆ ಯಾಚನೆ:

ತೊಡಿಕಾನ ದೇವರಗುಂಡಿ ಜಲಪಾತದ ಬಂಡೆಯಲ್ಲಿ ಫೋಟೊಶೂಟ್ ನಡೆಸಿದವರು, ಬೆಂಗಳೂರಿನ ಚಿತ್ರನಟಿ ಬೃಂದಾ ಅರಸ್ ಮತ್ತು ತಂಡವಾಗಿದ್ದು ಈ ಫೋಟೊಶೂಟ್ ವಿಚಾರ ವೈರಲ್ ಆಗಿ ವಿವಾದವೆದ್ದಿದೆ. ಈ ಹಿನ್ನೆಲೆಯಲ್ಲಿ ಅವರು ಬಹಿರಂಗ ಕ್ಷಮೆ ಕೇಳಿದ್ದಾರೆ. “ನಾನು ಅಕ್ಟೋಬರ್ ಪ್ರಥಮ ವಾರದಲ್ಲಿ ತೊಡಿಕಾನಕ್ಕೆ ಹೋಗಿ ಜಲಪಾತದ ಸ್ಥಳದಲ್ಲಿ ಫೋಟೋಶೂಟ್ ನಡೆಸಿದ್ದೆ. ಅದು ಧಾರ್ಮಿಕ ಸ್ಥಳ ಎಂದು ನನಗಾಗಲಿ, ನನ್ನ ಫೋಟೋಗ್ರಾಫರ್ ಗಾಗಲಿ ಗೊತ್ತಿರಲಿಲ್ಲ. ಸ್ಥಳೀಯರು ಕೂಡ ಮಾಹಿತಿ ನೀಡಿರಲಿಲ್ಲ. ಫೋಟೋಶೂಟ್ ಮಾಡುವ ಸಂದರ್ಭದಲ್ಲಿ ಕೂಡ ಯಾರೂ ಕೂಡ ನಮ್ಮ ತಂಡಕ್ಕೆ  ತೊಂದರೆ ನೀಡಿಲ್ಲ. ನಾನು ಆ ಫೋಟೋಗಳನ್ನು ಇನ್ ಸ್ಟಾಗ್ರಾಂ ಗೆ ಅಪ್ಲೋಡ್ ಮಾಡಿದ್ದೆ. ಇದುವರೆಗೆ ಏನೂ ಸಮಸ್ಯೆಯಾಗಿರಲಿಲ್ಲ. ಸ್ಥಳೀಯರ ಆಕ್ಷೇಪ ಬಂತೆಂಬ ವಿಷಯ ಗೊತ್ತಾಗಿ ನಾನು ಎಲ್ಲಾ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದೇನೆ. ನಾನು ಅಲ್ಲಿನ ದೇವಸ್ಥಾನದವರನ್ನು ಮತ್ತು ಸ್ಥಳೀಯರನ್ನು ಕ್ಷಮಿಸಿ ಎಂದು ಕೇಳಿಕೊಳ್ಳುತ್ತಿದ್ದೇನೆ” ಎಂದು ಬೆಂಗಳೂರಿನ ನಟಿ ಬೃಂದಾ ಅರಸ್ ದೃಶ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.