ಎಲಿಮಲೆ ಶಾಲೆ ಗೋಡೆಗಳ ಮೇಲೆ ಚಿತ್ರ-ಚಿತ್ತಾರ


Team Udayavani, Nov 28, 2018, 2:42 PM IST

28-november-13.gif

ಸುಳ್ಯ : ಚಿತ್ರಕಲೆಗೂ ಮಗುವಿನ ಮನಸ್ಸಿಗೂ ಒಂದಕ್ಕೊಂದು ಸಂಬಂಧವಿದೆ. ಅದರ ಭಾಗ ಎನ್ನುವಂತೆ ಶಾಲೆಯ ಗೋಡೆಗಳಲ್ಲಿ ಚಿತ್ರ ಬಿಡಿಸುವ ಮೂಲಕ ಮಕ್ಕಳ ಮನಸ್ಸನ್ನು ಕ್ರಿಯಾಶೀಲ ನೆಲೆಯಲ್ಲಿ ಅರಳಿಸುವ ಪ್ರಯತ್ನವೊಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಸರಕಾರಿ ಪ್ರೌಢಶಾಲೆ ಎಲಿಮಲೆ ಸುಳ್ಯ ಮತ್ತು ಹಳೆ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರಿಗಾಗಿ ನಡೆದ ಮೂರು ದಿನಗಳ ಜಿಲ್ಲಾಮಟ್ಟದ ಚಿತ್ರಕಲಾ ಶಿಬಿರದಲ್ಲಿ ಇಂತಹ ವಿಶೇಷ ಪ್ರಯತ್ನವೊಂದು ಅಭಿವ್ಯಕ್ತಗೊಂಡಿದೆ.

ಚಿತ್ರಕಲಾ ಶಿಕ್ಷಕರ ವಿಭಿನ್ನ ಯೋಚನೆ ಹೊಸ ಕಲಾ ಕ್ರಾಂತಿಯನ್ನು ಸೃಷ್ಟಿಸಿದೆ. ನಶಿಸಿ ಹೋಗುತ್ತಿರುವ ಜನಪದ ಕಲೆಗಳನ್ನು ಗೋಡೆ ಮೇಲೆ ಚಿತ್ರಿಸುವ ಕಲೆಯೇ ವಿದ್ಯೆಯ ಮೂಲ ಎನ್ನುವುದಿಲ್ಲಿ ಸಾಕಾರಗೊಂಡಿದೆ. ನೀತಿ ಪಾಠ, ಗತಕಾಲದ ವೈಭವ, ಬೇರೆ-ಬೇರೆ ಪ್ರಾಂತ್ಯದ ಜನಪದ ಶೈಲಿಯನ್ನು ಶಾಲೆಯ ಗೋಡೆಯ ಮೇಲೆ ಚಿತ್ರಿಸಿ ಹಳೆಯ ಕಾಲದ ಗತ ವೈಭವನ್ನು ಮಕ್ಕಳಿಗೆ, ಊರವರಿಗೆ ತಿಳಿಸುವ ಪ್ರಯತ್ನ ಮಾಡಿದ್ದಾರೆ. 

ಬಂಗಾಳದ ಜನಪ್ರಿಯ ಕಲೆಯನ್ನಾಧರಿಸಿದ ಚಿತ್ರ, ದ.ಕ. ಜಿಲ್ಲೆಯ ನಾಗಾರಾಧನೆ, ಶಾಂತಿ ಹಾಗೂ ಜ್ಞಾನೋದಯದ ಪ್ರತೀಕವಾದ ಬುದ್ಧ, ಪುರಿ ಜಗನ್ನಾಥ ಶೈಲಿ, ಪುರಾತನ ಕಾಲದ ಜನಪದ ಶೈಲಿ, ಗುರುಭಕ್ತಿಯನ್ನು ಬಿಂಬಿಸುವ ಏಕಲವ್ಯ, ದೈವರಾಧನೆ, ಉತ್ತರ ಕರ್ನಾಟಕದ ಸೂತ್ರದ ಬೊಂಬೆ, ತೆಂಕು ಹಾಗು ಬಡಗುತಿಟ್ಟಿನ ಯಕ್ಷಗಾನದ ಚಿತ್ರಗಳು, ದರ್ಪಣ ಸುಂದರಿ, ವಾಮನ ಬಲಿಯೇಂದ್ರ, ರಾಜಸ್ಥಾನದಲ್ಲಿ ಅಳಿವಿನಂಚಿನಲ್ಲಿರುವ ಬೊಂಬೆಯಾಟ, ಆಂಧ್ರಪ್ರದೇಶದ ಒಂದು ಹಳ್ಳಿಯಲ್ಲಿ ಬಣ್ಣ ತಯಾರಿಸಿ ಬಟ್ಟೆಯ ಮೇಲೆ ಬಿಡಿಸುತ್ತಿದ್ದ ಕಲಂಕಾರಿ ಚಿತ್ರ – ಹೀಗೆ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳು ಮೂಡಿಬಂದಿವೆ.

ಕಲಿಕೆಗೆ ಪೂರಕ
ಮೂರು ದಿನಗಳ ಕಾಲ ಸುಮಾರು 12 ಚಿತ್ರಕಾರರು ಗೋಡೆಗಳಲ್ಲಿ ಸಾಂಪ್ರದಾಯಿಕ ಹಾಗೂ ಇನ್ನಿತರ ಚಿತ್ರಗಳನ್ನು ಬಿಡಿಸಿದ್ದಾರೆ. ಈ ಮೂಲಕ ಶಾಲಾ ಸೌಂದರ್ಯ ಹಾಗೂ ಕಲಿಕಾ ವಾತಾವರಣಕ್ಕೆ ಪೂರಕವಾದ ಸನ್ನಿವೇಶ ಇಲ್ಲಿ ಮೂಡಿಬಂದಿದೆ. 
-ಚಂದ್ರಶೇಖರ ಪೇರಾಲು
ಮುಖ್ಯ ಶಿಕ್ಷಕ, ಎಲಿಮಲೆ ಶಾಲೆ 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.