ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಅನುದಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರಹ

Team Udayavani, Mar 19, 2024, 11:48 AM IST

7-mng

ಪುತ್ತೂರು: ಶಾಸಕ ಅಶೋಕ್‌ ಕುಮಾರ್‌ ರೈ 1,400 ಕೋ.ರೂ. ಅನುದಾನ ತಂದಿರುವ ಬಗ್ಗೆ ಬಿಜೆಪಿ ಕಾರ್ಯಕರ್ತನೋರ್ವ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿರುವ ವಿಚಾರದಲ್ಲಿ ಶಾಸಕರ ಅಭಿಮಾನಿಗಳ ತಂಡವು ಅನುದಾನದ ವಿವರದ ಬ್ಯಾನರ್‌ ಸಹಿತ ಚೆಂಡೆ ಬಡಿಯುತ್ತ ಆತನ ಮನೆ ಬಾಗಿಲಿಗೆ ತೆರಳಿದ ವೇಳೆ ಮಾತಿನ ಚಕಮಕಿ ಉಂಟಾದ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಕೋಷ್ಠದ ಸದಸ್ಯ ತಾರಿಗುಡ್ಡೆಯ ಜಯಾನಂದ ಕೆ. ಅವರ ಮನೆಗೆ ಪುತ್ತೂರು ಶಾಸಕರ ಅಭಿಮಾನಿ ಬಳಗ ತೆರಳಿದ್ದು, ಕಾಮಗಾರಿಗಳ ವಿವರಣೆ ನೀಡಿದ ವೇಳೆ ಮಾತಿನ ಚಕಮಕಿ ನಡೆದಿದೆ. ಈ ಬಗ್ಗೆ ಜಯಾನಂದ ಅವರು ನಗರ ಪೊಲೀಸರಿಗೆ ದೂರು ನೀಡಿದ್ದು, ದಾಖಲಾಗಿದೆ.

ಏನಿದು ಘಟನೆ? ಪುತ್ತೂರು ಕ್ಷೇತ್ರಕ್ಕೆ ಶಾಸಕ ಅಶೋಕ್‌ ಕುಮಾರ್‌ ರೈ 1,400 ಕೋಟಿ ರೂ.ಅನುದಾನ ತಂದಿರುವ ಬಗ್ಗೆ ಜಯಾನಂದ ಅವರು ಅನುದಾನದ ಮೂಲದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ಶಾಸಕರ ಅಭಿಮಾನಿ ತಂಡ ಜಯಾನಂದರ ಮನೆಗೆ ರವಿವಾರ ಸಂಜೆ ಬ್ಯಾಂಡ್‌, ವಾದ್ಯ ಸಹಿತ ತೆರಳಿತ್ತು. ಶಾಸಕರು ತಂದ ಅನುದಾನ, ನಡೆದ ಕಾಮಗಾರಿಗಳ ಬ್ಯಾನರ್‌ ಪ್ರದರ್ಶಿಸಿ ಮಾಹಿತಿ ನೀಡಲಾರಂಭಿಸಿದ ವೇಳೆ ಪರಸ್ಪರ ಮಾತಿನ ಚಕಮಕಿ ನಡೆಯಿತು. ಶಾಸಕರು ತಂದ ಅನುದಾನ, ಕಾಮಗಾರಿ ಕುರಿತು ಮಾಹಿತಿ ನೀಡಿದ ವಾರಿಯರ್ಸ್‌ ತಂಡ ಬಳಿಕ ಅಲ್ಲಿಂದ ನಿರ್ಗಮಿಸಿತು. ಈ ಘಟನೆಯ ಬಗ್ಗೆ ವೀಡಿಯೋ ಚಿತ್ರೀಕರಣ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಪುತ್ತಿಲ ಭೇಟಿ

ಘಟನೆಯ ಬೆನ್ನಲ್ಲೇ ಜಯಾನಂದ ಅವರ ಮನೆಗೆ ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ, ಪಿ.ಜಿ. ಜಗನ್ನಿವಾಸ್‌ ರಾವ್‌ ಸಹಿತ ಬಿಜೆಪಿ ಪ್ರಮುಖರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಶಾಸಕರ ಬೆಂಬಲಿತ ತಂಡವೊಂದು ನುಗ್ಗಿ ದಾಂಧಲೆ ನಡೆಸಿರುವುದು ಖಂಡನೀಯ. ಘಟನೆಯ ಬಗ್ಗೆ ವೀಡಿಯೋ ದಾಖಲೆ ಇದೆ. ಎಲ್ಲರ ವಿರುದ್ಧ ಪ್ರಕರಣ ದಾಖಲಾಗಬೇಕು ಎಂದು ಪೋಲೀಸ್‌ ಅಧಿಕಾರಿಗಳಲ್ಲಿ ಪುತ್ತಿಲ ಆಗ್ರಹಿಸಿದ್ದಾರೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರು ವುದಿಲ್ಲ. ಪೋಲಿಸರು ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್‌ ಗೂಂಡಾಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್‌ ಚೌಟ ತಿಳಿಸಿದ್ದಾರೆ.

ಪುತ್ತೂರು ಕ್ಷೇತ್ರಕ್ಕೆ 1,400 ಕೋ.ರೂ. ಅನುದಾನ ತಂದಿರುವ ಬಗ್ಗೆ ಈಗಾಗಲೇ ಅಂಕಿ-ಅಂಶ ಸಹಿತ ಮಾಹಿತಿ ನೀಡಿದ್ದೇನೆ. ಕೆಲವರು ಸಾಮಾಜಿಕ ಜಾಲತಾಣದ ಮೂಲಕ ನಿಂದಿಸುವ ಸಂದೇಶ ರವಾನಿಸಿದ್ದಾರೆ. ಹೀಗಾಗಿ ಪಕ್ಷದ ಅಭಿಮಾನಿಗಳು ಬ್ಯಾನರ್‌ ಸಹಿತ ಮನೆಗೆ ತೆರಳಿ ಮಾಹಿತಿ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆ ನಡೆದಿದ್ದರೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. – ಅಶೋಕ್‌ ಕುಮಾರ್‌ ರೈ, ಶಾಸಕ, ಪುತ್ತೂರು

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.