ಬಂಟ್ವಾಳ: ದಂಡ ಶುಲ್ಕವನ್ನು ಮರಳಿಸಿದ ಪೊಲೀಸರು.!
Team Udayavani, Mar 26, 2021, 6:06 PM IST
ಬಂಟ್ವಾಳ: ಖಾಸಗಿ ಕಾರೊಂದರಲ್ಲಿ ಚಾಲಕ ಸಮವಸ್ತ್ರ ಧರಿಸಿಲ್ಲ ಎಂದು ಪೊಲೀಸ್ ಸಿಬಂದಿಯೊಬ್ಬರು ದಂಡ ವಿಧಿಸಿ, ಬಳಿಕ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆಯಂತೆ ದಂಡ ಶುಲ್ಕವನ್ನು ಚಾಲಕನಿಗೆ ಮರಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಪಾಣೆಮಂಗಳೂರಿನ ಅನಿಲ್ ಕೋಲ್ಪೆ ಅವರು ತಮ್ಮ ಮಾರುತಿ ಆಮ್ನಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾ. 23 ರಂದು ತುಂಬೆ ಬಳಿಯ ರಾಮಲ್ ಕಟ್ಟೆಯಲ್ಲಿ ಹೆದ್ದಾರಿ ಗಸ್ತಿನಲ್ಲಿದ್ದ ಪೊಲೀಸರು ಅನಿಲ್ ಕೋಲ್ಪೆ ಅವರಿಗೆ ಸಮವಸ್ತ್ರ ಧರಿಸಿಲ್ಲ ಎಂದು ದಂಡ ವಿಧಿಸುತ್ತಾರೆ.
ಆದರೆ ಅವರ ಆಮ್ನಿ ಬಿಳಿ ಬೋರ್ಡಿನ ವಾಹನವಾಗಿದ್ದು, ಚಾಲಕ ಸಮವಸ್ತ್ರ ಧರಿಸಬೇಕಿಲ್ಲ. ಅನಿಲ್ ಅವರು ಮನೆಯಲ್ಲಿ ಈ ವಿಚಾರವನ್ನು ತಿಳಿಸಿದಾಗ ಅವರ ಪುತ್ರ ಅದನ್ನು ಮಾ. 25 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಗಮನಕ್ಕೆ ತರುತ್ತಾರೆ. ಅದೇ ದಿನ ರಾತ್ರಿ ಪೊಲೀಸ್ ಸಿಬಂದಿ ಅನಿಲ್ ಅವರನ್ನು ಪಾಣೆಮಂಗಳೂರಿಗೆ ಬರ ಹೇಳಿ ದಂಡ ಶುಲ್ಕವನ್ನು ಮರಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ