ಮಾದರಿ ವಿದ್ಯುತ್‌ ಗ್ರಾಮದಲ್ಲಿ ವಿದ್ಯುತ್‌ ಪೂರೈಕೆ ಸಮಸ್ಯೆ!


Team Udayavani, Aug 17, 2018, 3:42 PM IST

17-agust-17.jpg

ವೇಣೂರು : ಹೊಸಂಗಡಿ, ಪೆರಿಂಜೆ ಹಾಗೂ ಬಡಕೋಡಿ ಗ್ರಾಮದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ ಬಗ್ಗೆ ಆರೋಪಿಸಿದ ಗ್ರಾಮಸ್ಥರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿದರು. ಹೊಸಂಗಡಿ ಗ್ರಾ.ಪಂ.ನ 2018-19ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಹೊಸಂಗಡಿ ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು. ಗ್ರಾ.ಪಂ. ಅಧ್ಯಕ್ಷೆ ಹೇಮಾ ವಸಂತ್‌ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕನಿಷ್ಕ ಎಸ್‌. ಚಂದ್ರ ಸಭೆಯನ್ನು ನಡೆಸಿಕೊಟ್ಟರು.

ದಿನದ 24 ಗಂಟೆಗಳಲ್ಲೂ ನಿರಂತರ ವಿದ್ಯುತ್‌ ಪೂರೈಕೆ ಮಾಡುವ ಮಾದರಿ ವಿದ್ಯುತ್‌ ಗ್ರಾಮ ಯೋಜನೆಗೆ ಹೊಸಂಗಡಿ ಗ್ರಾ.ಪಂ.ನ್ನು ಆಯ್ಕೆ ಮಾಡಲಾಗಿತ್ತು. ಆದರೆ ಯೋಜನೆ ಜಾರಿಗೆ ಬಂದಿಲ್ಲ. ವಿದ್ಯುತ್‌ ವ್ಯತ್ಯಯ ಆಗುತ್ತಿದ್ದು, ಸಮಸ್ಯೆಯನ್ನು ನಿವಾರಿಸಬೇಕೆಂದು ಮೆಸ್ಕಾಂ ಇಲಾಖೆಯ ಅಧಿಕಾರಿಯನ್ನು ಆಗ್ರಹಿಸಿದರು. ಸಮಸ್ಯೆ ಬಗ್ಗೆ ಗಮನ ಹರಿಸುವುದಾಗಿ ಅಧಿಕಾರಿ ಭರವಸೆ ನೀಡಿದರು. 

ಮೂಡಬಿದಿರೆ ತಾಲೂಕಿಗೆ ಸೇರಿಸಿ
ಇನ್ನಷ್ಟೇ ಘೋಷಣೆ ಆಗಲಿರುವ ಮೂಡಬಿದಿರೆ ತಾಲೂಕಿಗೆ ಹೊಸಂಗಡಿ ಹಾಗೂ ಬಡಕೋಡಿ ಗ್ರಾಮವನ್ನು ಸೇರಿಸಿಕೊಳ್ಳುವಂತೆ ಆಗ್ರಹಿಸಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. 

ಕಾಡುಪ್ರಾಣಿ ಹಾವಳಿ
ಬಡಕೋಡಿ ಗ್ರಾಮದಲ್ಲಿ ವಿದ್ಯುತ್‌ ದಾರಿದೀಪ ಇಲ್ಲ. ಕಾಡುಪ್ರಾಣಿಗಳ ಹಾವಳಿ ಜಾಸ್ತಿ ಆಗಿದೆ. ಚಿರತೆಯೊಂದು ಮನೆಯ ಸಾಕುನಾಯಿಯನ್ನು ಕೊಂದಿರುವ ಬಗ್ಗೆ ಮಹಿಳೆಯೊಬ್ಬರು ಸಭೆಯನ್ನು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಅಧಿಕಾರಿ, ಚಿರತೆ ಬೀಳದಿದ್ದ ಕಾರಣ ಬಡಕೋಡಿಯಲ್ಲಿ ಬೋನನ್ನು ತೆಗೆಯಲಾಗಿದೆ. ಮುಂದೆ ಇಂತಹ ಘಟನೆ ನಡೆದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗೋ ಆಸ್ಪತ್ರೆ ಬೇಕು
ಹೊಸಂಗಡಿಗೆ 11 ಕಿ.ಮೀ. ದೂರದ ವೇಣೂರು ಪಶು ಆಸ್ಪತ್ರೆಗೆ ತೆರಳಲು ಕಷ್ಟವಾಗುತ್ತದೆ. ಹೊಸಂಗಡಿಗೆ ಪಶು ಆಸ್ಪತ್ರೆಯ ಅಗತ್ಯತೆ ಇದೆ ಎಂದು ಗ್ರಾಮಸ್ಥರು ಬೇಡಿಕೆ ಮುಂದಿಟ್ಟರು. ವೇಣೂರಿನ ಪಶು ಆಸ್ಪತ್ರೆಯಲ್ಲಿ ಎಲ್ಲ ಬಗೆಯ ಔಷಧಗಳಿಲ್ಲ. 155 ರೂ. ಇಂಜೆಕ್ಷನ್‌ಗೆ 200ಕ್ಕಿಂತಲೂ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆಂದು ಗ್ರಾಮಸ್ಥ ಆನಂದ ಕುಲಾಲ್‌ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ, ಪ್ರಯಾಣದ ವೆಚ್ಚವನ್ನು ಪಡೆದುಕೊಳ್ಳುತ್ತೇವೆ, ಆದರೆ ಹೆಚ್ಚಿನ ಹಣ ಪಡೆಯುತ್ತಿಲ್ಲ ಎಂದರು. ಮಳೆ ಹಾನಿಯಾದರೆ ತತ್‌ಕ್ಷಣ ಮಾಹಿತಿ ನೀಡಿ, ಪರಿಹಾರ ಒದಗಿಸಿಕೊಡಲು ಅನುಕೂಲವಾಗುತ್ತದೆ ಎಂದು ಕಂದಾಯ ಇಲಾಖೆಯ ಅಧಿಕಾರಿ ಹೇಳಿದರು. ಜನನ- ಮರಣ ನೋಂದಣಿಗೆ ವಿಳಂಬ ಮಾಡಬಾರದು. ಮದುವೆ ನೋಂದಣಿಯನ್ನೂ ಮಾಡಿಕೊಳ್ಳಬೇಕು ಎಂದವರು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರಕಾರದಡಿ ಲಭಿಸುವ ಉಚಿತ ಗ್ಯಾಸ್‌ ಸಂಪರ್ಕ ಯೋಜನೆಯ ಮಾಹಿತಿಯನ್ನು ವೇಣೂರು ಪಾರ್ಶ್ವನಾಥ ಗ್ಯಾಸ್‌ ಏಜೆನ್ಸಿಯ ಪ್ರಬಂಧಕ ಮಹಮ್ಮದ್‌ ಎಚ್‌. ಮಾಹಿತಿ ನೀಡಿದರು.

ಪಂ.ನ ಪ.ಜಾ. ಮತ್ತು ಪಂಗಡದಲ್ಲಿ ಮೀಸಲಿರಿಸಿದ ಅನುದಾನದಲ್ಲಿ ವಿದ್ಯಾರ್ಥಿವೇತನ ನೀಡಲಾಯಿತು. ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌, ಆರಂಬೋಡಿ ತಾ.ಪಂ. ಸದಸ್ಯ ಓಬಯ್ಯ ಆರಂಬೋಡಿ, ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಲಲಿತಾ ಟಿ. ಹೆಗ್ಡೆ, ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ. ಸಿಬಂದಿ ಸಹಕರಿಸಿದರು. ಪಂ.ಕಾರ್ಯದರ್ಶಿ ವರದಿ ಮಂಡಿಸಿದರು. ಅಭಿವೃದ್ಧಿ ಅಧಿಕಾರಿ ಗಣೇಶ್‌ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿದರು. ಪಂಚಾಯತ್‌ ಸಿಬಂದಿ ಸತೀಶ್‌ ಕುಮಾರ್‌ ಪಿ.ವಿ. ವಂದಿಸಿದರು.

ಅಭಿವೃದ್ಧಿ
ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಆದರೆ ಅದಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಬೇಕಾಗಿದೆ. ಪಿನ್‌ಕೋಡ್‌ ಸಮಸ್ಯೆ ನಿವಾರಣೆ ಆಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮಸ್ಥರಿಗೆ ಎಲ್ಲ ಸೌಲಭ್ಯ ದೊರೆಯಲಿದೆ.
-ಹೇಮಾ ವಸಂತ್‌
ಅಧ್ಯಕ್ಷೆ, ಹೊಸಂಗಡಿ ಗ್ರಾ.ಪಂ. 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.