ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 32 ಸ್ಥಳಕ್ಕೆ ಎನ್‌ಐಎ ದಾಳಿ : ಮಹತ್ವದ ದಾಖಲೆ ವಶ


Team Udayavani, Sep 6, 2022, 5:08 PM IST

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 32 ಸ್ಥಳಕ್ಕೆ ಎನ್‌ಐಎ ದಾಳಿ : ಮಹತ್ವದ ದಾಖಲೆ ವಶ

ಪುತ್ತೂರು : ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಮಂಗಳವಾರ ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ 32 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

ದಿಢೀರ್‌ ಆಗಿ ನಡೆದ ದಾಳಿ ಇದಾಗಿದೆ. ಪ್ರವೀಣ್‌ ಹಂತಕರ ಹತ್ಯಾ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಏಕಕಾಲದಲ್ಲಿ ದಾಳಿ
ಪ್ರವೀಣ್‌ ಹತ್ಯೆ ಪ್ರಕರಣದ ಆರೋಪಿಗಳು, ಪಿಎಫ್‌ಐ ಮುಖಂಡರ ನಿವಾಸಕ್ಕೆ ಬೆಳಗ್ಗೆ 5.30 ಹೊತ್ತಿಗೆ ದಾಳಿ ನಡೆಸಲಾಗಿದೆ. 70 ಕ್ಕೂ ಅಧಿಕ ಅಧಿಕಾರಿಗಳ ತಂಡ ಆಯಾ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಹಲವೆಡೆ ಮೊಬೈಲ್‌, ಇತರೆ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಮನೆಯಲ್ಲಿ ಇಲ್ಲದವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪಿಎಫ್‌ಐ, ಎಸ್‌ಡಿಪಿಐನಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಮುಖರ ಮನೆಗೆ ದಾಳಿ
ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಜಿಲ್ಲಾ ಮುಖಂಡ ಇಕ್ಬಾಲ್‌ ಬೆಳ್ಳಾರೆ, ಜಾಬಿರ್‌ ಅರಿಯಡ್ಕ, ಮನ್ಸೂರ್‌ ಅಗ್ನಾಡಿ ಸೇರಿದಂತೆ ಹಲವರ ನಿವಾಸಕ್ಕೆ ದಾಳಿ ನಡೆಸಲಾಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್‌, ಬಶೀರ್‌, ರಿಯಾಝ್ ಅಂಕತಡ್ಕ, ಶಫೀಕ್‌ ಬೆಳ್ಳಾರೆ, ಜಾಕೀರ್‌ ಸವಣೂರು, ಸದ್ದಾಂ ಪಳ್ಳಿಮಜಲು, ಹಾರೀಸ್‌ ಪಳ್ಳಿಮಜಲು, ಅಬಿದ್‌ ನಾವೂರು, ನೌಫಲ್‌, ಅಬ್ದುಲ್‌ ಕಬೀರ್‌ ಜಟ್ಟಿಪಳ್ಳನ ನಿವಾಸಕ್ಕೆ ದಾಳಿ ನಡೆಸಿ ಮನೆ ಮಂದಿ, ಸುತ್ತಮುತ್ತಲಿನ ಪರಿಸರದಲ್ಲಿ ವಿಚಾರಣೆ ನಡೆಸಿ ಸ್ಥಳ ಮಹಜರು ಮಾಡಲಾಗಿದೆ. ಅನೇಕ ದಾಖಲೆ ಪತ್ರ, ಮೊಬೈಲ್‌ ಪೋನ್‌ ವಶಕ್ಕೆ ಪಡೆಯಲಾಗಿದೆ.

ಮಿತ್ತೂರು ಕಮ್ಯೂನಿಟ್‌ ಹಾಲ್‌ : ಎನ್‌ಐಎ ಕಣ್ಣು
ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಿಎಫ್‌ಐನ ಸಭೆ ಸಮಾರಂಭ ನಡೆಯುವ ಕೇಂದ್ರ ಸ್ಥಾನ ಎನ್ನುವ ಸುಳಿವು ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ತಂಡವು ಸಭಾಂಗಣದ ಕಚೇರಿಗೆ ದಾಳಿ ನಡೆಸಿ ಸಿಸಿ ಕ್ಯಾಮರಾ ದೃಶ್ಯಾವಳಿ ಸಹಿತ ದಾಖಲೆ ಪತ್ರಗಳನ್ನು ಪರಿಶೀಲಿಸಿದೆ.

ಪಿಎಫ್‌ಐ, ಎಸ್‌ಡಿಪಿಐ ಸಭೆ ನಡೆಸಿ ಸಮಾಜ ಘಾತುಕ ಕೃತ್ಯ ನಡೆಸಲು ಯೋಜನೆ ರೂಪಿಸುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ಮಹತ್ವ ಪಡೆದಿದೆ. ಇಲ್ಲಿ ಸಂಘಟನೆಯ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸರಿಗೆ ಇಲ್ಲಿ ಪ್ರವೇಶ ಇರಲಿಲ್ಲ. ಬದಲಿಗೆ ಸಂಘಟನೆಯವರೇ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನುವ ಅಂಶದ ಮೇಲೂ ತನಿಖೆ ದೃಷ್ಟಿ ನೆಟ್ಟಿದೆ.

ಪ್ರವಾಸಿ ಮಂದಿರದಲ್ಲಿ ಕಾರ್ಯಾಚರಣೆ ತಂಡ
ಆಯಾ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ಬಳಿಕ ಅಧಿಕಾರಿಗಳ ತಂಡ ಪುತ್ತೂರು ನಗರದ ದರ್ಬೆ ನಿರೀಕ್ಷಣಾ ಕೇಂದ್ರದಲ್ಲಿ ಬೀಡು ಬಿಟ್ಟಿದೆ. ಈ ವೇಳೆ ಕೆಲವರ ವಿಚಾರಣೆ ನಡೆದಿದೆ ಎನ್ನಲಾಗಿದೆ. ದಾಳಿ ನಡೆಸಿದ ಸ್ಥಳದಲ್ಲಿಯೂ ಮಹಜರು ನಡೆಸಲಾಗಿದೆ. ಸ್ಥಳಕ್ಕೆ ಮಾಧ್ಯಮ ಸಹಿತ ಇತರರ ಪ್ರವೇಶ ನಿರ್ಬಂಧಿಸಲಾಗಿದೆ.

ಸುಳ್ಯದಲ್ಲಿಯೂ ದಾಳಿ
ಪ್ರವೀಣ್‌ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿ ಹಂತಕರು ಸುಳ್ಯದವರಾಗಿದ್ದು ಆರೋಪಿಗಳ ವಾಸ ಸ್ಥಳಕ್ಕೆ ದಾಳಿ ನಡೆಸಲಾಗಿದೆ. ಪ್ರಮುಖ ಆರೋಪಿ ಶಿಯಾಬ್‌ ವಾಸವಾಗಿದ್ದ ಸುಳ್ಯ ನಾವೂರಿನ ಮನೆ ಮತ್ತು ಸುತ್ತಮುತ್ತ ತಪಾಸಣೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಖಾಡಕ್ಕೆ ಇಳಿದ ಎನ್‌ಐಎ
ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು. ಪ್ರಕರಣ ಸಂಬಂಧ ಎನ್‌ಐಎ, ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ ಪ್ರಕರಣ ದಾಖಲಿಸಿ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಾಥಮಿಕ ತನಿಖಾ ವರದಿ(ಎಫ್‌ಐಆರ್‌)ಸಲ್ಲಿಸಿತ್ತು. ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ವಿಪುಲ್‌ ಅಲೋಕ್‌ ಅವರು ಎನ್‌ಐಎ ಮಹಾ ನಿರ್ದೇಶಕರಿಗೆ ಆ.6 ರಂದು ಆದೇಶ ನೀಡಿದ್ದರು. ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೂ ಈ ಕುರಿತು ಮಾಹಿತಿ ನೀಡಲಾಗಿತ್ತು. ಪ್ರಕರಣದ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿರುವ ಬೆನ್ನಲ್ಲೇ ಎನ್‌ಐಎ ಅಧಿಕಾರಿಗಳು ಪ್ರಕರಣ ಸಂಬಂಧ ಭಾರತೀಯ ದಂಡ ಸಂಹಿತೆ 302(ಕೊಲೆ) ಮತ್ತು 120(ಬಿ)(ಕೊಲೆಗೆ ಸಂಚು) ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಅಡಿಯಲ್ಲಿ ಪ್ರಕರಣ ದಾಖಲಿಸಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಿ ವಿವಿಧ ಪ್ರಕ್ರಿಯೆ ಪೂರ್ಣಗೊಳಿಸಿ ತನಿಖೆ ಕೈಗೆತ್ತಿಕೊಂಡಿತ್ತು.

ಹತ್ಯೆಯ ಹಿಂದೆ ಮತಾಂಧ
ಶಕ್ತಿಗಳ ಕೈವಾಡ..?
ಕೇರಳದಲ್ಲಿ ಸೇರಿದಂತೆ ವಿವಿಧ ರಾಜ್ಯದಲ್ಲಿ ನಡೆದಿರುವ ಕೊಲೆ ಮಾದರಿಯಲ್ಲಿಯೇ ಪ್ರವೀಣ್‌ ಹತ್ಯೆ ನಡೆದಿತ್ತು. ಇದರ ಹಿಂದೆ ವ್ಯವಸ್ಥಿತ ಜಾಲ ಇದ್ದು ಮತಾಂಧ ಶಕ್ತಿಗಳ ಕೈವಾಡ, ವಿದೇಶಿ ಶಕ್ತಿಗಳ ಆರ್ಥಿಕ ನೆರವಿನ ಅನುಮಾನ ಕೇಳಿ ಬಂದಿತ್ತು. ಪ್ರವೀಣ್‌ ನೆಟ್ಟಾರು ಹತ್ಯೆಯ ಸಂದರ್ಭ ಈ ಆಕ್ರೋಶದ ಕಟ್ಟೆಯೊಡೆದು ಜನಪ್ರತಿನಿಧಿಗಳಿಗೆ ದಿಗ್ಬಂಧನ ವಿಧಿಸಿ ಸಮಗ್ರ ತನಿಖೆಗೆ ಆಗ್ರಹ ಕೇಳಿ ಬಂದಿತ್ತು. ಅದಾದ ಬಳಿಕ ರಾಜ್ಯ ಸರಕಾರ ಎಚ್ಚೆತ್ತುಕೊಂಡು ಪ್ರಕರಣವನ್ನು ಎನ್‌ಐಎಗೆ ವಹಿಸಿತು. ಪ್ರವೀಣ್‌ ನೆಟ್ಟಾರು ಹಂತಕರು ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ಜತೆ ಲಿಂಕ್‌ ಹೊಂದಿರುವ ಮಾಹಿತಿ ಖಚಿತ ಪಟ್ಟ ಹಿನ್ನೆಲೆಯಲ್ಲಿ ಹತ್ಯೆಯ ಉದ್ದೇಶ ಏನು ಎನ್ನುವ ಬಗ್ಗೆ ಎನ್‌ಐಎ ವಿಚಾರಣೆ ನಡೆಸುತ್ತಿದೆ. ಬಂಧಿತ ಆರೋಪಿಗಳಿಗೆ ಹದಿನೈದು ದಿನಗಳ ಕಾಲ ಹಲವರು ರಕ್ಷಣೆ ನೀಡಿರುವುದರಿಂದ ಈ ಹತ್ಯೆಯ ಹಿಂದೆ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿತ್ತು. ಮೂಲಗಳ ಪ್ರಕಾರ ಕೇರಳ, ವಿದೇಶಿ ಶಕ್ತಿಗಳು ಕರಾವಳಿಯಲ್ಲಿ ಕೋಮು ಆಧಾರಿತ ಸಂಘರ್ಷ ಸೃಷ್ಟಿಸುವ ಹುನ್ನಾರವೇ ಈ ಕೊಲೆಯ ಭಾಗ ಎನ್ನಲಾಗಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.