‘ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿ’
Team Udayavani, Jul 23, 2018, 4:34 PM IST
ಉಪ್ಪಿನಂಗಡಿ : ಚಾಲಕರು ವಾಹನ ಚಲಾಯಿಸುವಾಗ ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಸರಿಯಾಗಿ ಪಾಲಿಸಬೇಕೆಂದು ಉಪ್ಪಿನಂಗಡಿ ಪಿಎಸ್ಐ ನಂದಕುಮಾರ್ ಕರೆ ನೀಡಿದರು. ಇಲ್ಲಿನ ಹೊಸ ಬಸ್ ನಿಲ್ದಾಣ, ಹಳೆ ಬಸ್ ನಿಲ್ದಾಣ ಹಾಗೂ ಆಟೋ ತಂಗುದಾಣಗಳಲ್ಲಿ ರವಿವಾರ ವಾಹನ ಚಾಲಕರಿಗೆ ರಸ್ತೆ ಸುರಕ್ಷಾ ನಿಯಮಾವಳಿಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ರಸ್ತೆ ಸುರಕ್ಷಾ ಸಪ್ತಾಹಕ್ಕೆ ಚಾಲನೆ ನೀಡಿ, ಅವರು ಮಾತನಾಡುತ್ತಿದ್ದರು.
ವಾಹನಗಳನ್ನು ಚಲಾಯಿಸುವಾಗ ಅನಗತ್ಯ ಪೈಪೋಟಿ ಬೇಡ. ಮೊಬೈಲ್ ಸಂಭಾಷಣೆ ಮಾಡುತ್ತ ವಾಹನ ಚಲಾಯಿಸುವುದು, ಮದ್ಯಪಾನ ಮಾಡಿ ವಾಹನ ಓಡಿಸುವುದು ಸಲ್ಲದು. ಚಾಲಕ ಪ್ರಶಾಂತ ಮನಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ವಾಹನದ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ಸುಸ್ಥಿತಿಯಲ್ಲಿಡವುದು ಅಗತ್ಯ. ಸುರಕ್ಷಾ ನಿಯಮಗಳನ್ನು ಪಾಲಿಸಿ, ನಮ್ಮ ಬದುಕನ್ನು ಸುಂದರವಾಗಿಸಿಕೊಳ್ಳುವ ಜತೆಗೆ, ಅನ್ಯರ ಬದುಕನ್ನೂ ಸುಂದರವಾಗಿಸುವ ಹೊಣೆಗಾರಿಕೆ ಪಾಲಿಸಬೇಕೆಂದರು. ಠಾಣೆ ಸಿಬಂದಿ ದೇವದಾಸ, ಮನೋಹರ, ಹರಿಶ್ಚಂದ್ರ ಹಾಗೂ ಚಾಲಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’