ಅರಣ್ಯ ಇಲಾಖೆ ಜಾಗಕ್ಕೆ ಪಹಣಿಪತ್ರವಿಲ್ಲದೆ ಸಮಸ್ಯೆ

 ಜಿಲ್ಲಾಧಿಕಾರಿಗಳ ಗಮನಕ್ಕೆ ತರಲು ಒಳಮೊಗ್ರು ಗ್ರಾಮಸಭೆಯಲ್ಲಿ ನಿರ್ಣಯ

Team Udayavani, Feb 25, 2020, 12:34 AM IST

majji-33

ಬಡಗನ್ನೂರು: ಪಹಣಿ ಪತ್ರದಲ್ಲಿ ಅರಣ್ಯ ಇಲಾಖೆಯ ಜಾಗವನ್ನು ದಾಖಲಿಸಬೇಕು. ಕಂದಾಯ ಇಲಾಖೆಯ ಅಧೀನದಲ್ಲಿರುವ ಎಲ್ಲ ಭೂಮಿಯೂ ಪಹಣಿ ಪತ್ರದಲ್ಲಿ ದಾಖಲಾಗಿದೆ. ಆದರೆ ಅರಣ್ಯ ಇಲಾಖೆಯ ಜಾಗ ಪಹಣಿ ಪತ್ರದಲ್ಲಿ ಇಲ್ಲದೇ ಇರುವುದು ಸಮಸ್ಯೆಯನ್ನು ಹುಟ್ಟು ಹಾಕುತ್ತಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಒಳಮೊಗ್ರು ಗ್ರಾಮಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.

ಗ್ರಾಮಸಭೆ ಫೆ. 24ರಂದು ಕುಂಬ್ರ ರೈತ ಸಭಾಭವನದಲ್ಲಿ ಅಧ್ಯಕ್ಷ ಯತಿರಾಜ್‌ ರೈ ನೀರ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮಸ್ಥರು ಮಾತನಾಡಿ, ಒಳಮೊಗ್ರು ಗ್ರಾಮದ ಕುದ್ಕಲ್‌, ಅಜಲಡ್ಕದಲ್ಲಿ ಕಂದಾಯ ಇಲಾಖೆ ನೀಡಿದ ಭೂಮಿಯಲ್ಲಿ ರೈತರು ಕೃಷಿ ಮಾಡಿದ್ದಾರೆ. ಆದರೆ ಆ ಜಾಗ ತನ್ನದೆಂದು ಅರಣ್ಯ ಇಲಾಖೆ ಹೇಳುತ್ತಿದೆ. ಅವರಲ್ಲಿ ಜಾಗದ ನಕ್ಷೆ ಇದೆ. ಪಹಣಿ ಪತ್ರವಿಲ್ಲ. ಏಕೆ ಹೀಗೆ? ಪಹಣಿಪತ್ರದಲ್ಲಿ ಅರಣ್ಯ ಇಲಾಖೆಯ ಜಾಗವನ್ನು ನಮೂದಿಸುವ ಕಾರ್ಯವನ್ನು ಸರಕಾರ ಮಾಡಬೇಕು. ಆ ಮೂಲಕ ಸಮಸ್ಯೆಯನ್ನು ಪರಹರಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿದರು.

ತ್ಯಾಜ್ಯ ಘಟಕದ ಜಾಗ ಅರಣ್ಯದ್ದು
ಗ್ರಾಮದ ದರ್ಬೆತ್ತಡ್ಕದಲ್ಲಿ ತ್ಯಾಜ್ಯ ವಿಲೇ ಘಟಕ ನಿರ್ಮಾಣಕ್ಕೆ ಗುರುತಿಸಿದ ಜಾಗವನ್ನು ಕೊನೇ ಗಳಿಗೆಯಲ್ಲಿ ತನ್ನದೆಂದು ಅರಣ್ಯ ಇಲಾಖೆ ತಕರಾರು ಎತ್ತಿದೆ. ಆದರೆ ಪಹಣಿ ಪತ್ರದಲ್ಲಿ ಸರಕಾರದ ಭೂಮಿ ಎಂದು ದಾಖಲಾಗಿದೆ. ಎಲ್ಲವೂ ಆದ ಬಳಿಕ ಅರಣ್ಯ ಇಲಾಖೆಯಿಂದ ಘಟಕಕ್ಕೆ ಸಮಸ್ಯೆಯಾಗಿದೆ ಎಂದು ಗ್ರಾ.ಪಂ. ಸದಸ್ಯ ಅಬ್ದುಲ್‌ ರಹಿಮಾನ್‌ ಅರಿಯಡ್ಕ ಆರೋಪಿಸಿದರು. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಪರಿಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ನಾಟಿ ಕೋಳಿ ಕೊಡಿ
ಗ್ರಾಮಸ್ಥರಿಗೆ ಇಲಾಖೆ ಯಿಂದ ಗಿರಿರಾಜ ಕೋಳಿಯ ಬದಲು ನಾಟಿ ಕೋಳಿಯನ್ನೇ ನೀಡಬೇಕು. ಗಿರಿರಾಜ ಕೋಳಿ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಿಲ್ಲ. ನಾಟಿ ಕೋಳಿ ನೀಡಿದರೆ ಗ್ರಾಮಸ್ಥರಿಗೆ ಪ್ರಯೋಜನವಾಗುತ್ತದೆ ಎಂದು ಗ್ರಾಮಸ್ಥರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಯತೀರಾಜ್‌ ರೈ ನಿಪ್ಪಾìಡಿ ಮಾತನಾಡಿ, ಗ್ರಾ.ಪಂ ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಗ್ರಾಮದ ಅಭಿವೃದ್ಧಿ ಸಾಧ್ಯ. ಅಭಿವೃದ್ಧಿ ದೃಷ್ಟಿಯಿಂದ ಚರ್ಚೆ ನಡೆದಿದೆ. ಈ ಐದು ವರ್ಷಗಳ ಆಡಳಿತ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಎಂದರು.

ತಾ.ಪಂ. ಸದಸ್ಯ ಹರೀಶ್‌ ಬಿಜತ್ರೆ, ಗ್ರಾ.ಪಂ. ಉಪಾಧ್ಯಕ್ಷೆ ಸುನಂದಾ, ಸದಸ್ಯರಾದ ಮಹೇಶ್‌ ಕೇರಿ, ಉಷಾ ನಾರಾಯಣ, ಚಂದ್ರಕಲಾ, ತ್ರಿವೇಣಿ, ವಸಂತಿ ಆರ್‌. ಶೆಟ್ಟಿ, ಸುಂದರಿ, ವಿಶ್ವನಾಥ, ಶೀನಪ್ಪ ನಾಯ್ಕ, ಶಶಿಕಿರಣ್‌ ರೈ ಉಪಸ್ಥಿತರಿದ್ದರು.

ಪಶುವೈದ್ಯಾಧಿಕಾರಿ ಡಾ| ಪ್ರಕಾಶ್‌ ನೋಡಲ್‌ ಅಧಿಕಾರಿಯಾಗಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೀತಾ ಬಿ.ಎಸ್‌., ಸ್ವಾಗತಿಸಿ, ವರದಿ ವಾಚಿಸಿ ವಂದಿಸಿದರು.
ಸಿಬಂದಿ ಜಾನಕಿ, ಗುಲಾಬಿ, ಕೇಶವ ಸಹಕರಿಸಿದರು.

ಜಿ.ಪಂ. ಸದಸ್ಯೆ ಸಭೆಗೆ ಬಂದೇ ಇಲ್ಲ
ಸ್ಥಳೀಯ ಜಿ.ಪಂ. ಸದಸ್ಯೆ ಐದು ವರ್ಷಗಳಲ್ಲಿ ಒಂದು ಬಾರಿಯೂ ಗ್ರಾಮಸಭೆಗೆ ಬಂದಿಲ್ಲವೇಕೆ? ಜಿ.ಪಂ. ವ್ಯಾಪ್ತಿಯಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ಸಮಸ್ಯೆಯನ್ನು ಅವರ ಬಳಿ ಹೇಳುವುದಾದರೂ ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು. ಅವರು ಜಿ.ಪಂ. ಅಧ್ಯಕ್ಷರೂ ಆಗಿರುವ ಕಾರಣ ಕಾರ್ಯಕ್ರಮದ ಒತ್ತಡವಿರಬಹುದು. ಅವರಿಗೆ ತಲುಪಿಸಬೇಕಾದ ಸಮಸ್ಯೆಯನ್ನು ಅವರಿಗೆ ಗ್ರಾ.ಪಂ. ಪತ್ರ ಮುಖೇನ ತಿಳಿಸಿದರೆ ಒಳಿತು ಎಂದು ಅಭಿಪ್ರಾಯ ವ್ಯಕ್ತವಾಯಿತು.

ಉಚಿತ ನೀರು ಕೊಡಿ
ಸರಕಾರ ಬಡವರಿಗೆ ಉಚಿತ ಅಕ್ಕಿ, ಉಚಿತ ವೈದ್ಯಕೀಯ ಸೇವೆ, ರೈತರ ಸಾಲಮನ್ನಾ ಮಾಡುತ್ತಿದೆ. ಆದರೆ ಸರಕಾರ ಏಕೆ ಬಡವರಿಗೆ ಕುಡಿಯುವ ನೀರನ್ನು ಉಚಿತವಾಗಿ ನೀಡುತ್ತಿಲ್ಲ? ಈ ವಿಚಾರವನ್ನು ನಿರ್ಣಯ ಮಾಡಿ ಸರಕಾರಕ್ಕೆ ಮನವಿ ಮಾಡಬೇಕು. ಕುಡಿಯುವ ನೀರಿನ ವಿದ್ಯುತ್‌ ಬಿಲ್‌ ಮನ್ನಾ ಮಾಡುವಂತೆ ಇಂಧನ ಸಚಿವರಿಗೂ ಮನವಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ವಿಷಯ ಪ್ರಸ್ತಾವಿಸಿದ ಸಂತೋಷ್‌ ಭಂಡಾರಿ ಚೆಲ್ಮೆತ್ತಾರು ಹಾಗೂ ರಾಜೇಶ್‌ ಪರ್ಪುಂಜ, ಈ ವಿಚಾರವನ್ನು ಕಳೆದ ಗ್ರಾಮಸಭೆಯಲ್ಲೇ ನಿರ್ಣಯ ಮಾಡಿತ್ತು. ಹಾಗಾಗಿ ಮುತುವರ್ಜಿ ವಹಿಸಿ ಸರಕಾರದ ಗಮನಕ್ಕೆ ತರುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.