‘ಪತ್ರಿಕೆಗಳಿಂದ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ’


Team Udayavani, Jul 22, 2018, 2:37 PM IST

22-july-11.jpg

ಪುತ್ತೂರು: ಪ್ರಜಾಪ್ರಭುತ್ವದ ಮೌಲ್ಯ ಉಳಿಸಿ, ಬೆಳೆಸಿಕೊಂಡು ಹೋಗುವಲ್ಲಿ ಪತ್ರಿಕಾ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಗರದ ಟೌನ್‌ ಬ್ಯಾಂಕ್‌ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಸಮ್ಮಾನ ಹಾಗೂ ಕೃತಿ ಬಿಡುಗಡೆ ಉದ್ಘಾಟಿಸಿ ಮಾತನಾಡಿದರು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮಹತ್ತರ ಜವಾಬ್ದಾರಿ ಪತ್ರಕರ್ತರಿಗಿದೆ. ಭಾರತ ಪತ್ರಿಕೋದ್ಯಮ ಸವಾಲುಗಳನ್ನು ಎದುರಿಸಿ ಬೆಳೆದು ಬಂದಿದೆ. ಪತ್ರಕರ್ತರು ಯೋಚನಾಧಾರೆಯನ್ನು ಕೇವಲ ಒಂದೇ ವಿಚಾರಧಾರೆಗೆ ಮೀಸಲಿಡದೇ ಸಮಗ್ರವಾಗಿ ಬೆಳೆಸಿಕೊಳ್ಳಬೇಕು. ಸಮಾಜವನ್ನು ಸದಾ ಎಚ್ಚರವಾಗಿಡುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಸ್ವಚ್ಛ ಪತ್ರಿಕೋದ್ಯಮ ಬೆಳೆಯಬೇಕು ಎಂದವರು ಆಶಯ ವ್ಯಕ್ತಪಡಿಸಿದರು.

ಇತಿಹಾಸ ತಿಳಿದುಕೊಳ್ಳಿ
ಮೂಡಬಿದಿರೆ ಆಳ್ವಾಸ್‌ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಮೌಲ್ಯಾ ಜೀವನ್‌ರಾಂ ವಿಶೇಷ ಉಪನ್ಯಾಸಕ
ರಾಗಿ ಮಾತನಾಡಿ, ಪತ್ರಿಕೋದ್ಯಮದ ವಿದ್ಯಾರ್ಥಿಗಳು ಪತ್ರಿಕೋದ್ಯಮ ಇತಿಹಾಸವ ಅರಿತುಕೊಳ್ಳಬೇಕು. ಇತಿಹಾಸ ತಿಳಿಯದೆ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಅತ್ಯಂತ ಹೆಚ್ಚು ಪ್ರಶ್ನೆಗೆ ಒಳಗಾದ ಕ್ಷೇತ್ರ ಪತ್ರಿಕಾ ಕ್ಷೇತ್ರವಾಗಿದೆ ಎಂದರು.

ಪತ್ರಿಕೋದ್ಯಮ ಬೆಳೆಯಲಿ
ಸಾಮಾಜಿಕ ಕಳಕಳಿಯ ಪತ್ರಕರ್ತರು ನಮ್ಮ ಮಧ್ಯೆ ಸಾಕಷ್ಟು ಮಂದಿ ಇದ್ದಾರೆ. ಆದರೆ ವಿಷಯ ಪ್ರಕಟನೆಯ ನಿರ್ಧಾರ ಅವರದ್ದಾಗಿಲ್ಲದೇ ಇರುವುದರಿಂದ ಹಲವು ಬಾರಿ ಅವರು ಮರೆಗೆ ಸರಿಯುತ್ತಾರೆ ಎಂದರು.  ಸಿಟಿಜನ್‌ ಪತ್ರಿಕೋದ್ಯಮ ಪರಿಕಲ್ಪಣೆ ಬೆಳೆದರೆ ಮಾಧ್ಯಮ ಕ್ಷೇತ್ರ ಬೆಳೆಯುತ್ತದೆ. ಸುದ್ದಿಯನ್ನು ಗ್ರಹಿಸುವ ಸಾಮರ್ಥ್ಯ ಇದ್ದವರು ಉತ್ತಮ ಪತ್ರಕರ್ತರಾಗುತ್ತಾರೆ ಎಂದು ಹೇಳಿದರು.

ಕೃತಿ ಬಿಡುಗಡೆ, ಸಮ್ಮಾನ
ಭಾರತ ಸರಕಾರದ ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿವೃತ್ತ ಪ್ರಾದೇಶಿಕ ಸಾರ್ವಜನಿಕ ಸಂಪರ್ಕಾಧಿಕಾರಿ ಪುತ್ತೂರಿನ ಜಯಪ್ರಕಾಶ್‌ ರಾವ್‌ ಅವರು ಬರೆದ ಕಲಾಂ ಜೀವನ ಧರ್ಮಕೃತಿಯ 2ನೇ ಆವೃತ್ತಿಯನ್ನು ಹಿರಿಯ ಪತ್ರಕರ್ತ ಪ್ರೊ| ವಿ.ಬಿ. ಅರ್ತಿಕಜೆ ಬಿಡುಗಡೆಗೊಳಿಸಿದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ| ಯು.ಪಿ. ಶಿವಾನಂದ, ಜಗನ್ನಾಥ ಶೆಟ್ಟಿ ಬಾಳ ಹಾಗೂ 17ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾ. ಕಾರಂತ ಪೆರಾಜೆ ಅವರನ್ನು ಪತ್ರಕರ್ತರ ಸಂಘದ ಕಾನೂನು ಸಲಹೆಗಾರ ಬಿ. ಪುರಂದರ ಭಟ್‌ ಸಮ್ಮಾನಿಸಿದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಲೇಖಕ ಜಯಪ್ರಕಾಶ್‌ ರಾವ್‌ ಪುತ್ತೂರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಸುಧಾಕರ್‌ ಸುವರ್ಣ ತಿಂಗಳಾಡಿ ಪ್ರಸ್ತಾವನೆಗೈದರು. ಹಿರಿಯ ಪತ್ರಕರ್ತ ಸಂಶುದ್ದೀನ್‌ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಜತೆ ಕಾರ್ಯದರ್ಶಿ ಶ್ರವಣ್‌ ಕುಮಾರ್‌ ನಾಳ ವಂದಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.