‘ತುಳುವಿಗೆ ಸಂವಿಧಾನ ಮಾನ್ಯತೆ ಸಿಗಲು ಇಚ್ಛಾಶಕ್ತಿ ಕೊರತೆ’


Team Udayavani, Dec 13, 2018, 2:49 PM IST

13-december-16.gif

ಬೆಳ್ತಂಗಡಿ: ಸಾಂಸ್ಕೃತಿಕವಾಗಿ ತುಳು ಭಾಷೆ ಹೆಚ್ಚು ಶ್ರೀಮಂತವಾಗಿದ್ದರೂ ತುಳುವನ್ನು ದೇಶದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಲ್ಲಿ ನಮ್ಮನ್ನಾಳುವವರ ಇಚ್ಛಾಶಕ್ತಿಯ ಕೊರತೆ ಕಾಣುತ್ತಿದೆ. ಹೀಗಾಗಿ ಅವರಲ್ಲಿ ಎಚ್ಚರ ಹುಟ್ಟಿಸಲು ಇಂತಹ ಧರಣಿ ಸತ್ಯಾಗ್ರಹಗಳು ಅನಿವಾರ್ಯ ಎಂದು ತುಳು ಸಾಹಿತಿ ಉದಯ ಧರ್ಮಸ್ಥಳ ಹೇಳಿದರು.

ಅವರು ಬುಧವಾರ ಇಲ್ಲಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ  ಹಾಗೂ ಕರ್ನಾಟಕ ಹಾಗೂ ಕೇರಳಗಳ ಅಧಿಕೃತ ಆಡಳಿತ ಭಾಷೆಯಲ್ಲಿ ತುಳುವಿಗೂ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ತುಳುನಾಡು ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಒಂದು ದಿನದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು.

ಈ ಹಿಂದೆ ವಿಶ್ವಸಂಸ್ಥೆ ನೀಡಿದ ಅಳಿವಿನಂಚಿನ 196 ಭಾಷೆಗಳ ಪಟ್ಟಿನಲ್ಲಿ ತುಳು ಹಾಗೂ ಕನ್ನಡ ಸೇರಿದ್ದು, ಬಳಿಕ ತುಳುವಿನ ಇತಿಹಾಸ ಏನು ಎಂಬುದನ್ನು ತಿಳಿಸುವ ಪ್ರಯತ್ನ ಮಾಡಲಾಗಿತ್ತು. ತುಳುವಿಗೆ ಸ್ವಂತ ಲಿಪಿ ಇಲ್ಲ ಎಂಬ ಮಾತುಗಳೂ ಕೇಳಿ ಬರುತ್ತಿದ್ದು, ಆದರೆ ತುಳುವಿಗೂ ಅದರದ್ದೇ ಲಿಪಿ ಇದೆ ಎಂದು ತೋರಿಸಿಕೊಡುವ ಕೆಲಸವೂ ಆಗಬೇಕು ಎಂದರು.

ತುಳುನಾಡು ಒಕ್ಕೂಟದ ಬೆಳ್ತಂಗಡಿ ನಗರಾಧ್ಯಕ್ಷ ರಾಜು ಬಿ.ಎಚ್‌. ಅವರು ಜಾದೂ ಮೂಲಕ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದರು. ನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ, ಸಾಹಿತಿ ಉಗ್ಗಪ್ಪ ಪೂಜಾರಿ ಮೂಡುಬಿದಿರೆ, ಕೊಡಗು ತುಳು ಜಾನಪದ ಕೂಟದ ಅಧ್ಯಕ್ಷ ಹರೀಶ್‌ ಆಳ್ವ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಸೇವಿಯರ್‌ ಪಾಲೇಲಿ, ಕಾರ್ಯದರ್ಶಿ ಮನೋಹರ್‌ಕುಮಾರ್‌, ತುಳುನಾಡು ಒಕ್ಕೂಟದ ಪುತ್ತೂರು ಜಿಲ್ಲಾಧ್ಯಕ್ಷ ನವೀನ್‌ ಬಿ.ಕೆ., ಕಾನೂನು ಸಲಹೆಗಾರ ಪ್ರಶಾಂತ್‌ ಬಿ., ತಾಲೂಕು ಅಧ್ಯಕ್ಷ ವಿನ್ಸೆಂಟ್‌ ಲೋಬೊ, ಪುತ್ತೂರು ತಾಲೂಕು ಅಧ್ಯಕ್ಷ ಶೇಖರ್‌ ಗೌಡತ್ತಿಗೆ, ಜನಾರ್ದನ ಬಂಗೇರ ಮೊದಲಾದವರಿದ್ದರು.

ಧರಣಿ ಸತ್ಯಾಗ್ರಹದ ಸಂದರ್ಭದಲ್ಲಿ ತಮ್ಮ ಬೇಡಿಕೆ ಈಡೇರಿಕೆಗಾಗಿ ಬೆಳ್ತಂಗಡಿ ತಹಶೀಲ್ದಾರ್‌ ಮೂಲಕ ಪ್ರಧಾನಿ, ಕರ್ನಾಟಕ, ಕೇರಳ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ತುಳುನಾಡು ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್‌ ಆರ್‌.ಜೆ. ಸ್ವಾಗತಿಸಿದರು.

ಮಾಜಿ ಶಾಸಕರು ಭೇಟಿ
ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ, ತುಳು ಭಾಷೆಗೆ ಸಂವಿಧಾನದ ಮಾನ್ಯತೆಗಾಗಿ ನಿರಂತರ ಹೋರಾಟ ಮಾಡಿದ್ದೇನೆ. ವಿಧಾನಸೌಧದಲ್ಲಿ ತುಳುವಿನಲ್ಲಿ ನಾನು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದು, ಆಗ ಸ್ಪೀಕರ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ನಾನು ತುಳುವಿನಲ್ಲೇ ಪ್ರಮಾಣವಚನ ಮಾಡಿ, ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಿ ಎಂದಿದ್ದೆ ಎಂದರು.

ಹೋರಾಟಗಳು ಅಗತ್ಯ
ಈ ಹಿಂದೆ ತುಳುವನ್ನು ಕಲಿಕಾ ಭಾಷೆಯನ್ನಾಗಿಸುವ ಸಂದರ್ಭದಲ್ಲೂ ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿತ್ತು. ಅದೇ ರೀತಿ ಸಂವಿಧಾನದ ಮಾನ್ಯತೆಗೂ ಹೋರಾಟಗಳು ಅಗತ್ಯ. ಪ್ರಸ್ತುತ ತುಳುನಾಡಿನ ಸರಕಾರಿ ಇಲಾಖೆಗಳಲ್ಲೂ ಇತರ ಭಾಗದವರಿಗೂ ಅವಕಾಶ ನೀಡುವ ಪದ್ಧತಿ ಹೆಚ್ಚುತ್ತಿದ್ದು, ತುಳುವರಿಗೂ ಆದ್ಯತೆ ನೀಡಬೇಕು.
 – ಉದಯ ಧರ್ಮಸ್ಥಳ ತುಳು ಸಾಹಿತಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.