ಬಿಳಿನೆಲೆ ಅಕ್ರಮ ಶೆಡ್ ನಿರ್ಮಾಣ ವಿಚಾರ: ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ !
Team Udayavani, Aug 13, 2020, 12:14 PM IST
ಸುಬ್ರಹ್ಮಣ್ಯ: ಬಿಳಿನೆಲೆ ಗ್ರಾಮದ ಬಿಳಿನೆಲೆ ಪೇಟೆಯಲ್ಲಿ ನಿರ್ಮಿಸಲಾದ ಅಕ್ರಮ ಶೆಡ್ ನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರಾರಂಬಿಸಿದ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಬೆಳಿಗ್ಗೆ 9 ಗಂಟೆಗೆ ಪ್ರತಿಭಟನೆ ಆರಂಭಗೊಂಡಿದ್ದು, ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಯಲಿದ್ದು, ಶೆಡ್ ತೆರವುಗೊಳಿಸುವಲ್ಲಿವರೆಗೆ ಸತ್ಯಾಗ್ರಹ ಮುಂದುವರಿಸಲಾಗುವುದು. ಹಾಗೂ ಯಾವುದೇ ಅನಾಹುತಗಳು ನಡೆದಲ್ಲಿ ಅಧಿಕಾರಿಗಳೇ ಹೊಣೆಗಾರರು ಎಂದು ಸತ್ಯಾಗ್ರಹ ನಿರತರು ತಿಳಿಸಿದ್ದಾರೆ.
ಅನ್ನಪೂರ್ಣ ಹಾಗೂ ಅವರ ಪತಿ ಗಿರಿಯಪ್ಪ, ಮಕ್ಕಳಾದ ಚೇತನ್ , ಚೇತಕ್ ಅವರು ಬಿಳಿನೆಲೆ ಗ್ರಾಮ ಪಂಚಾಯತ್ ಜಗಲಿಯಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿದ್ದಾರೆ. ಇವರಿಗೆ ಗ್ರಾಮದ ಪ್ರಮುಖರಾದ ಸುಧೀರ್ ಕುಮಾರ್, ಶಾರದಾ ದಿನೇಶ್ ಸೇರಿದಂತೆ ಬೆಂಬಲ ಸೂಚಿಸಿ ಸ್ಥಳದಲ್ಲಿ ಹಾಜರಿದ್ದಾರೆ.