ಶಾಲೆ ಮಕ್ಕಳಿಗೆ ಪುಸ್ತಕ, ಬ್ಯಾಗ್‌ ನೀಡಿದ ಪಿಎಸ್‌ಐ


Team Udayavani, Jun 18, 2019, 5:00 AM IST

t-24

ನೆಲ್ಯಾಡಿ: ಖಡಕ್‌ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ಧರ್ಮಸ್ಥಳ ಠಾಣೆಯ ಉಪ ನಿರೀಕ್ಷಕ ಅವಿನಾಶ್‌ ಎಚ್‌. ಗೌಡ ಅವರು ತಮ್ಮ ಠಾಣೆ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಕಲಿಯುವ 50ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್‌ ವಿತರಿಸಿ, ಜನಸ್ನೇಹಿ ಕಾರ್ಯದಿಂದ ಮೆಚ್ಚುಗೆ ಗಳಿಸಿದ್ದಾರೆ.

ಇಲಾಖೆಯ ಕರ್ತವ್ಯದ ಒತ್ತಡದ ನಡುವೆಯೂ ತಮ್ಮ ಸಹಪಾಠಿಗಳನ್ನು ಸೇರಿಸಿ, ಧರ್ಮಸ್ಥಳ ಠಾಣೆ ವ್ಯಾಪ್ತಿಯ ಹಲವು ಶಾಲೆಗಳಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳನ್ನು ಗುರುತಿಸಿ, ನೆರವಾಗಿದ್ದಾರೆ. ಐವತ್ತಕ್ಕೂ ಹೆಚ್ಚಿನ ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಚೀಲ ಇತ್ಯಾದಿ ಗಳನ್ನು ನೀಡಿದ್ದಾರೆ. ತಮ್ಮ ಹುಟ್ಟೂರು ಸಕಲೇಶಪುರ ತಾಲೂಕಿನ ವಳಲಹಳ್ಳಿ ಪ್ರಾಥಮಿಕ ಶಾಲೆಯ 80 ಮಕ್ಕಳಿಗೂ ಒಂದು ಜತೆ ಸಮವಸ್ತ್ರ ನೀಡಿದ್ದಾರೆ.

ಶಾಲೆ ಉಳಿಸುವ ಉದ್ದೇಶ
ಧರ್ಮಸ್ಥಳ ಠಾಣೆಯಲ್ಲಿ ಎರಡು ವರ್ಷಗಳಿಂದ ಪಿಎಸ್‌ಐ ಆಗಿರುವ ಅವಿನಾಶ್‌, ಸರಕಾರಿ ಕನ್ನಡ ಶಾಲೆಗಳನ್ನು ಉಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ಕಾರ್ಯ ಕೈಗೊಂಡಿದ್ದಾರೆ. ಸ್ವತಃ ಸರಕಾರಿ ಶಾಲೆ ಹಾಗೂ ಕನ್ನಡ ಮಾಧ್ಯಮದಲ್ಲಿ ಕಲಿತು ಉದ್ಯೋಗ ಗಳಿಸಿರುವ ಅವರು, ಕನ್ನಡ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕಷ್ಟವಾಗಬಾರದೆಂದು ಸ್ನೇಹಿತರ ನೆರವಿನೊಂದಿಗೆ ಈ ಮಾನವೀಯ ಕಾರ್ಯ ಮಾಡುತ್ತಿದ್ದಾರೆ.

“ಸಿರಿಗನ್ನಡಂ ಗೆಲ್ಗೆ ವಿದ್ಯಾರ್ಥಿ ಸಂಘ’ ಕಟ್ಟಿಕೊಂಡಿರುವ ಅವರು ಧರ್ಮಸ್ಥಳ ಠಾಣೆ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಾದ ಮುಂಡಾಜೆ, ಮೀಯಾರು, ಪುದುವೆಟ್ಟು, ಕಳೆಂಜ – ಕಾಯರ್ತಡ್ಕ, ಪಟ್ರಮೆ, ಕೊಕ್ಕಡ, ಹಳ್ಳಿಂಗೇರಿ, ಭಂಡಿಹೊಳೆ ಸಹಿತ ಎಂಟು ಶಾಲೆಗಳ 50ಕ್ಕೂ ಮಿಕ್ಕಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಆವಶ್ಯಕ ವಸ್ತುಗಳನ್ನು ನೀಡಿದ್ದಾರೆ. ಮುಂದಿನ ವರ್ಷ ಗ್ರಾಮೀಣ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ದೊಡ್ಡ ಯೋಜನೆಯನ್ನೂ ರೂಪಿಸಿದ್ದಾರೆ.

ಪಟ್ರಮೆಯಲ್ಲಿ…
ಶನಿವಾರ ಪಟ್ರಮೆಯ ಅನಾರು ಶಾಲಾ ಬಡ ಪ್ರತಿಭಾವಂತ ಮಕ್ಕಳಿಗೆ ಪಠ್ಯ ಪರಿಕರ ವಿತರಿಸಿ ಮಾತನಾಡಿದ ಅವಿನಾಶ್‌, ತಾವು ಸ್ವತಃ ಸರಕಾರಿ ಶಾಲೆಯಲ್ಲೇ ಕಲಿತು ಉನ್ನತ ಸ್ಥಾನ ಅಲಂಕರಿಸಿದ್ದೇವೆ. ಸರಕಾರಿ ಶಾಲಾ ಮಕ್ಕಳ ಪರಿಸ್ಥಿತಿಯ ಸಂಪೂರ್ಣ ಅರಿವು ತಮಗಿರುವ ಕಾರಣ ಸರಕಾರಿ ಶಾಲಾ ಮಕ್ಕಳನ್ನು ಆಯ್ಕೆ ಮಾಡಿ, ಮುಂದಿನ ಉತ್ತಮ ಭವಿಷ್ಯಕ್ಕೆ ತಮ್ಮ ಈ ಅಳಿಲ ಸೇವೆ ಸಲ್ಲಿಸುತ್ತಿದ್ದೇವೆ ಎಂದರು. ಪಟ್ರಮೆ ಗ್ರಾಮದ ಬೀಟ್‌ ಪೊಲೀಸ್‌ ಧರೇಶ್‌, ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣಮೂರ್ತಿ, ಶಾಲಾ ಅಧ್ಯಕ್ಷರಾದ ಶ್ಯಾಮರಾಜ್‌, ಉಪಾಧ್ಯಕ್ಷರಾದ ಸುನೀತಾ ಹಾಗೂ ಇತರೇ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

 ಮಿತ್ರರ ಸಹಕಾರವಿದೆ
ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳು ಮನ ಮಾಡ ಬೇಕೆನ್ನುವ ಕಾಳಜಿಯ ಜತೆಗೆ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಿಗೆ ಹೋಗುವ ಮಕ್ಕಳನ್ನು ಪ್ರೋತ್ಸಾಹಿಸಲು ನನ್ನ ಸಹಪಾಠಿಗಳು ಮತ್ತು ಮಿತ್ರರನ್ನು ಒಟ್ಟುಗೂಡಿಸಿ ತಂಡ ಆರಂಭಿಸಿದ್ದೇವೆ. ನನ್ನ ಒಂದು ತಿಂಗಳ ಸಂಬಳವನ್ನು ಈ ಉದ್ದೇಶಕ್ಕೆ ವಿನಿಯೋಗಿಸುತ್ತಿದ್ದೇನೆ. ಕಲಿಕೆಗೆ ಉತ್ತೇಜನ ನೀಡಲು, ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಯೋಜನೆ ನಮ್ಮ ಮುಂದಿದೆ.
– ಅವಿನಾಶ್‌ ಎಚ್‌. ಗೌಡ, ಧರ್ಮಸ್ಥಳ ಠಾಣೆ ಪಿಎಸ್‌ಐ

 ಶ್ಲಾಘನೀಯ
ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯದ ನಡುವೆಯೂ ಭಾಷೆ, ಕನ್ನಡ ಸರಕಾರಿ ಶಾಲೆಗಳ ಕುರಿತು ಕಾಳಜಿಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ಶಾಲೆಯ ಎಲ್ಲ 80 ಮಕ್ಕಳಿಗೆ ಒಂದು ಜೊತೆ ಸಮವಸ್ತ್ರ ಕೊಡಿಸಿದ್ದಾರೆ.
 - ದಿವಾಕರ ಎಚ್‌,
ವಳಲಹಳ್ಳಿ ಸ.ಹಿ.ಪ್ರಾ. ಶಾಲೆಯ ಶಿಕ್ಷಕ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.