ಪುಂಜಾಲಕಟ್ಟೆ: ಯಕ್ಷೋತ್ಸವಕ್ಕೆ ಚಾಲನೆ 


Team Udayavani, Nov 5, 2018, 3:35 PM IST

5-november-13.gif

ಪುಂಜಾಲಕಟ್ಟೆ: ಯಕ್ಷಗಾನದ ಮೂಲ ಸಂಸ್ಕೃತಿ, ಸಂಪ್ರದಾಯವನ್ನು ಬಿಟ್ಟು ಅನ್ಯದಾರಿಯಲ್ಲಿ ಯಕ್ಷಗಾನ ನಡೆಯಬಾರದು. ಮೂಲ ಸಂಪ್ರದಾಯಕ್ಕೆ ಧಕ್ಕೆಯಾಗಬಾರದು ಎಂದು ಹಿರಿಯ ಯಕ್ಷಗಾನ  ಕಲಾವಿದ ನಾರಾಯಣ ಶೆಟ್ಟಿ ಪೆರುವಾಯಿ ಅವರು ಹೇಳಿದರು.

ಸಹಕಾರಿ ಧುರೀಣ ದಿ| ಎನ್‌. ಸುಬ್ಬಣ್ಣ ಶೆಟ್ಟಿ ಸರಪಾಡಿ ಅವರ ಸ್ಮರಣಾರ್ಥವಾಗಿ ಸರಪಾಡಿ ಶ್ರೀ ಶರಭೇಶ್ವರ ಯಕ್ಷಗಾನ ಮಂಡಳಿ ಮತ್ತು ರಾಜಯೋಗ ಸರಪಾಡಿ ಹಾಗೂ ಸರಪಾಡಿ ಫ್ರೆಂಡ್ಸ್‌ ಸರಪಾಡಿ ಇದರ ಆಶ್ರಯದಲ್ಲಿ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವಠಾರದಲ್ಲಿ ನ. 10ರವರೆಗೆ ನಡೆಯಲಿರುವ ಸರಪಾಡಿ ಯಕ್ಷೋತ್ಸವ ಸಪ್ತಾಹ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್‌ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಸಾಮಾಜಿಕ ಕಳಕಳಿಯ ಸುಬ್ಬಣ್ಣ ಶೆಟ್ಟಿ ಅವರು ಇತರ ಕ್ಷೇತ್ರಗಳ ಜತೆ ಯಕ್ಷಗಾನಕ್ಕೂ ಅಮೂಲ್ಯ ಕೊಡುಗೆ ನೀಡಿದವರಾಗಿದ್ದಾರೆ. ಅವರ ಸಂಸ್ಮರಣೆಯ ತಾಳಮದ್ದಳೆ ಸಪ್ತಾಹ ಅರ್ಥಪೂರ್ಣವಾಗಿದೆ. ಇದು ನಿರಂತರವಾಗಿ ಮುಂದುವರಿಯಲಿ ಎಂದು ಹೇಳಿದರು.

ಕಲಾವಿದರ ನೆಲೆ ಗಟ್ಟಿಯಾದರೆ ಕಲೆಯ ಬೆಳವಣಿಗೆಯಾಗುವುದು. ಕಲಾವಿದರಿಗೆ ಪ್ರೋತ್ಸಾಹ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ವಾಸ್ತು ತಜ್ಞ, ಜೋತಿಷ ವಿದ್ವಾನ್‌ ರತ್ನಾಕರ ಭಟ್‌ ಸರಪಾಡಿ ಆಶೀರ್ವಚನ ನೀಡಿ ಶುಭ ಹಾರೈಸಿದರು. ಸರಪಾಡಿ ಗ್ರಾ.ಪಂ. ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಸರಪಾಡಿ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ, ಶ್ರೀ ಶರಭೇಶ್ವರ ದೇವಸ್ಥಾನದ ಉಪಾಧ್ಯಕ್ಷ, ಕೂರ್ಯಾಳ ದುರ್ಗಾ ಸೇವಾ ಸಮಿತಿ ಅಧ್ಯಕ್ಷ ಕುಸುಮಾಕರ ಶೆಟ್ಟಿ ಕೂರ್ಯಾಳ, ಶ್ರೀ ಶರಭೇಶ್ವರ ದೇವಸ್ಥಾನದ ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಮೊಕ್ತೇಸರ ವಿಠಲ ಎಂ., ಸರಪಾಡಿ ಪ್ರಗತಿಪರ ಕೃಷಿಕ, ಉದ್ಯಮಿ ರಿಚಾರ್ಡ್‌ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು. ಯಕ್ಷಗಾನ ಕಲಾವಿದ, ಕಾರ್ಯಕ್ರಮದ ಸಂಘಟಕ ಯೋಗೀಶ ಶೆಟ್ಟಿ ಆರುಮುಡಿ ಸ್ವಾಗತಿಸಿ, ವಂದಿಸಿದರು.

ಸರಪಾಡಿ ಸ.ಪ್ರೌ.ಶಾಲಾ ಮುಖ್ಯ ಶಿಕ್ಷಕ ಉದಯ ಕುಮಾರ್‌ ಜೈನ್‌ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಮಂಡಳಿ ನಾಳ, ಗೇರುಕಟ್ಟೆ ಇವರಿಂದ ಶ್ರೀ ಕೃಷ್ಣ ಸಂಧಾನ ತಾಳಮದ್ದಳೆ ಜರಗಿತು. ನ.5ರಂದು ವಿಶ್ವ ಭಾರತಿ ಮುಡಿಪು ಇವರಿಂದ ಶ್ರೀ ರಾಮ ನಿರ್ಯಾಣ ತಾಳಮದ್ದಳೆ ನಡೆಯಲಿದೆ.

ಜೀವನಕ್ಕೆ ಪಾಠ
ಯಕ್ಷಗಾನದಿಂದ ಜನರಿಗೆ ನೈತಿಕ, ಧಾರ್ಮಿಕ ನಡೆ-ನುಡಿಯ, ಉತ್ತಮ ಆಚಾರ ವಿಚಾರದ ಸಂದೇಶ ದೊರಕುವುದು. ಸುಸಂಸ್ಕೃತ ಜೀವನಕ್ಕೆ ಬೇಕಾದ ಉತ್ತಮ ಪಾಠ ಯಕ್ಷಗಾನದಿಂದ ಲಭಿಸುವುದು.
ನಾರಾಯಣ ಶೆಟ್ಟಿ ಪೆರುವಾಯಿ 
  ಹಿರಿಯ ಯಕ್ಷಗಾನ ಕಲಾವಿದ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.