ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ


Team Udayavani, Apr 2, 2021, 11:39 AM IST

ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

ಪುಂಜಾಲಕಟ್ಟೆ: ಬಹು ಕಾಲದ ಬೇಡಿಕೆಯಾಗಿರುವ ಪುಂಜಾಲಕಟ್ಟೆ ಪ್ರಾ. ಆರೋಗ್ಯ ಕೇಂದ್ರ ಮೇಲ್ದರ್ಜೆಗೇರುವ ಕಾಲ ಕೂಡಿ ಬಂದಿದೆ. ರಾಜ್ಯ ಸರಕಾರ ಘೋಷಿಸಿದ 250 ಪ್ರಾ.ಆ.ಕೇಂದ್ರಗಳ ಉನ್ನತೀಕರಣದಲ್ಲಿ ಇದೂ ಒಂದಾಗಿದೆ. ಪುಂಜಾಲಕಟ್ಟೆ ಪ್ರಾ.ಆ. ಕೇಂದ್ರವನ್ನು 6 ಕೋ.ರೂ. ವೆಚ್ಚದಲ್ಲಿ ಜಾಗತಿಕ ಮಟ್ಟದ ಚಿಕಿತ್ಸಾ ಕೇಂದ್ರವಾಗಿಸುವ ಕಾರ್ಯವನ್ನು ಶೀಘ್ರ ಕೈಗೆತ್ತಿಕೊಳ್ಳುವುದಾಗಿ ರಾಜ್ಯ ಆರೋಗ್ಯ ಸಚಿವ ಡಾ| ಸುಧಾಕರ್‌ ಘೋಷಿಸಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಬಹುಕಾಲದ ಬೇಡಿಕೆ :

ಗ್ರಾಮೀಣ ಪ್ರದೇಶಗಳನ್ನೊಳಗೊಂಡ ಪುಂಜಾ ಲಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಲವು ಕೊರತೆಗಳ ನಡುವೆಯೂ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿದೆ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು, ಇರ್ವತ್ತೂರು, ಮೂಡುಪಡುಕೋಡಿ, ಬಡಗಕಜೆಕಾರು, ತೆಂಕಕಜೆಕಾರು, ಕಾವಳಮೂಡೂರು, ಕಾವಳಪಡೂರು, ಕಾಡಬೆಟ್ಟು ಗ್ರಾಮಗಳು ಹಾಗೂ  ಬೆಳ್ತಂಗಡಿ ತಾಲೂಕಿನ ಮಾಲಾಡಿ, ಕುಕ್ಕಳ ಗ್ರಾಮಸ್ಥರು ಅವಲಂಬಿಸಿರುವ ಸರಕಾರಿ ಆಸ್ಪತ್ರೆ ಇದಾಗಿದೆ. ದಿನವೊಂದಕ್ಕೆ ಸುಮಾರು 150ರಿಂದ 200 ರೋಗಿಗಳು ಇಲ್ಲಿಗೆ ಚಿಕಿತ್ಸೆಗೆ ಬರುತ್ತಾರೆ. ಕಾಯಂ ಎಂಬಿಬಿಎಸ್‌ ವೈದ್ಯರ ಹಾಗೂ ಸ್ಟಾಫ್‌ ನರ್ಸ್‌ ಕೊರತೆಯಿಂದಾಗಿ ಹೆಚ್ಚಿನ ಚಿಕಿತ್ಸೆ ನೀಡಲು ಸಮಸ್ಯೆಯಾಗಿತ್ತು.

ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆ ಗೇರಿಸುವುದು, ಪೂರ್ಣಾವಧಿ ವೈದ್ಯರ ನೇಮಕ ಮೊದಲಾದ ಬೇಡಿಕೆಗಳ ಬಗ್ಗೆ  ಸಾರ್ವಜನಿಕರು ಹಾಗೂ ಇತರ ಸಂಘ ಟನೆಗಳ ವತಿಯಿಂದ ಈ ಹಿಂದೆ ಪ್ರತಿ ಭಟನೆಗಳು ನಡೆದಿದ್ದವು. ಆದರೂ ವ್ಯವಸ್ಥೆ ಯಾಗಿರಲಿಲ್ಲ. ಇದಕ್ಕೆ ಕಾನೂನಿನ ತೊಡಕು ಪ್ರಮುಖ ಕಾರಣವಾಗಿತ್ತು. ಸಮುದಾಯ ಆಸ್ಪತ್ರೆಯಾಗಿಸಲು ಅಗತ್ಯ ವಾದ ಐವತ್ತು ಸಾವಿರ ಜನಸಂಖ್ಯೆಗೆ  ವಾಮ ದಪದವಿನಲ್ಲಿ ಅದಾಗಲೇ ಸಮುದಾಯ ಆಸ್ಪತ್ರೆ ಸ್ಥಾಪಿಸಲಾಗಿದೆ.

ಹೀಗಾಗಿ ಜಟಿಲವಾದ ಕಾನೂನು ಸರಳಗೊಳಿಸಿ ಜನತೆಗೆ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕೆಂದು ಬಹು ಕಾಲದ ಬೇಡಿಕೆಯಾಗಿತ್ತು.

ಬೆಳ್ತಂಗಡಿ, ಬಂಟ್ವಾಳ ಹಾಗೂ ವಾಮದಪದವಿನಲ್ಲಿ ಸಮುದಾಯ ಆಸ್ಪತ್ರೆಗಳಿವೆ. ಇವುಗಳ ನಡುವೆ ಬಹಳ ಅಂತರವಿದೆ. ಆದ್ದರಿಂದ ಪುಂಜಾಲಕಟ್ಟೆ ಪರಿಸರ ಮಾತ್ರವಲ್ಲ ಅಕ್ಕ ಪಕ್ಕದ ಊರುಗಳಿಂದಲೂ ಜನರು ಈ ಆಸ್ಪತ್ರೆಗೆ ಆಗಮಿಸುತ್ತಾರೆ.

ವೈದ್ಯಾಧಿಕಾರಿ ಇಲ್ಲ :

ಇಲ್ಲಿ 7 ವರ್ಷಗಳಿಂದ ಒಂದು ವೈದ್ಯಾಧಿಕಾರಿ ಹುದ್ದೆ ಇದೆ. ಆದರೆ ಕಾಯಂ ವೈದ್ಯಾಧಿಕಾರಿ ಇಲ್ಲ. ಬಿ.ಸಿ.ರೋಡ್‌ ಗಿರಿಜನ ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸತೀಶ್‌ ಎಂ.ಸಿ. ಪ್ರಭಾರ ವೈದ್ಯಾಧಿಕಾರಿಯಾಗಿ ವಾರದಲ್ಲಿ ಮೂರುದಿನ ಕರ್ತವ್ಯ ನಿರ್ವಹಿಸಬೇಕಾಗಿದೆ. ಮತ್ತೋರ್ವ ಆಯುಷ್‌ ವೈದ್ಯ ಡಾ| ಸೋಹನ್‌ ಕುಮಾರ್‌ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿಭಾಯಿಸುತ್ತಾರೆ.

ಸ್ಟಾಫ್‌ ನರ್ಸ್‌ ಹುದ್ದೆಯೇ ಇಲ್ಲ :

ಹಿಂದೆ ಆರೋಗ್ಯ ಕೇಂದ್ರದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ತೆರೆಯುವ ವ್ಯವಸ್ಥೆ ಇತ್ತು. ಆಗ ಮೂರು ಮಂದಿ ಸ್ಟಾಫ್‌ ನರ್ಸ್‌ ಇದ್ದರು. ಹೆರಿಗೆಯ ಸಂಖ್ಯೆ ಕಡಿಮೆಯಾದ ನಿಟ್ಟಿನಲ್ಲಿ ಈ ವ್ಯವಸ್ಥೆ ರದ್ದುಗೊಂಡಿದೆ. ಜತೆಗೆ ಸ್ಟಾಫ್‌ ನರ್ಸ್‌ ಹುದ್ದೆಯೂ ರದ್ದುಗೊಂಡಿದೆ. ಪ್ರಸ್ತುತ ಓರ್ವ ಸ್ಟಾಫ್‌ ನರ್ಸ್‌ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ ಖಾಲಿ ಇದೆ. ಈ ಕಾರಣದಿಂದ ರಾತ್ರಿ ಒಳರೋಗಿಗಳ ಚಿಕಿತ್ಸೆಗೆ ಅವಕಾಶವಿಲ್ಲ.ಸಂಜೆಯವರೆಗೆ ಚಿಕಿತ್ಸೆ ನೀಡಿ ಅಗತ್ಯವಾದಲ್ಲಿ ಬೆಳ್ತಂಗಡಿ ಅಥವಾ ಬಂಟ್ವಾಳ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಗ್ರೂಪ್‌ ಡಿ ಸಿಬಂದಿ ಹುದ್ದೆ ಖಾಲಿಯಾದ ಕಾರಣ  ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಅಥವಾ ಬಂಟ್ವಾಳಕ್ಕೆ ಹೋಗಬೇಕಾಗಿದೆ. ಇಲ್ಲಿ ಪ್ರಯೋಗ ಶಾಲಾ ತಜ್ಞ ರಿದ್ದಾರೆ. ಸಾಧಾರಣ ರಕ್ತ ಪರೀಕ್ಷೆಗಳು ನಡೆಯುತ್ತವೆ. ದಾನಿಯೊಬ್ಬರು ಇಸಿಜಿ ಮತ್ತು ನೆಬುಲೈಸೇಷನ್‌ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರಸ್ತುತ 6 ಹಾಸಿಗೆ ಮಾತ್ರವಿದೆ. ಆರೋಗ್ಯ ಕೇಂದ್ರ ಮೂರೂವರೆ ಎಕರೆ ಜಾಗ ಹೊಂದಿದೆ. ಆದರೆ ಸಂಪೂರ್ಣ ಆವರಣ ಗೋಡೆ ಇಲ್ಲ. ಹಳೆಯ ಕಟ್ಟಡವಾದರೂ ಸುಣ್ಣ, ಬಣ್ಣ, ಟೈಲ್ಸ್‌ ಅಳವಡಿಸಲಾಗಿದೆ. ನೂತನ ಕಟ್ಟಡ ಸಹಿತ ನಿರ್ಮಾಣಗೊಳ್ಳಲಿರುವ ಹೈಟೆಕ್‌ ಆಸ್ಪತ್ರೆ ಸಮಗ್ರ ಚಿಕಿತ್ಸಾ ಕೇಂದ್ರ, ವೈದ್ಯರು, ದಾದಿಯರು, ಇತರ ಸಿಬಂದಿಗೆ ವಸತಿ ಸೌಲಭ್ಯ ಒಳಗೊಂಡಿರಲಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬೇಕು. ಇಬ್ಬರು ಪೂರ್ಣ ಪ್ರಮಾಣದ ವೈದ್ಯಾಧಿಕಾರಿಗಳು ಹಾಗೂ ಸಿಬಂದಿಯನ್ನು ನೇಮಕಗೊಳಿಸಬೇಕೆಂದು ಜಿ.ಪಂ.ನಲ್ಲಿ ಐದು ಬಾರಿ ನಿರ್ಣಯ ಕೈಗೊಂಡು ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪ್ರಸ್ತುತ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಅವರ ಮುತುವರ್ಜಿಯಿಂದ ಬಹುಕಾಲದ ಬೇಡಿಕೆ ಈಡೇರಿದೆ.  -ಎಂ.ತುಂಗಪ್ಪ ಬಂಗೇರ, ಜಿ.ಪಂ. ಸದಸ್ಯರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.