ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ನಡೆಸಿದ ಸಹೋದರಿಯರು; ಆರೋಪಿಗಳ ಬಂಧನ
Team Udayavani, Mar 2, 2021, 8:38 AM IST
ಪುತ್ತೂರು: ದೂರು ಅರ್ಜಿಯೊಂದರ ವಿಚಾರಣೆ ವೇಳೆ ಮಹಿಳೆಯೊಬ್ಬರು ತನ್ನ ಗಂಡನಿಗೆ ಹಲ್ಲೆ ನಡೆಸಲು ಮುಂದಾದಾಗ ತಡೆಯಲು ಹೋದ ಮಹಿಳಾ ಠಾಣಾ ಎಸ್.ಐ. ಅವರಿಗೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾ.1ರಂದು ನಡೆದ ಬಗ್ಗೆ ವರದಿಯಾಗಿದೆ. ಹಲ್ಲೆ ನಡೆಸಿದ ಆರೋಪಿ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಅವರು ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ(34ವ) ಮತ್ತು ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ(35ವ) ಹಲ್ಲೆ ನಡೆಸಿದ ಆರೋಪಿಗಳು ಎಂದು ಹೆಸರಿಸಲಾಗಿದೆ.
ಇದನ್ನೂ ಓದಿ: ಕಿಲಿಮಂಜಾರೊ ಪರ್ವತಾರೋಹಣ: ಋತ್ವಿಕಾ ವಿಶ್ವದ 2ನೇ ಕಿರಿಯ ಸಾಧಕಿ
ಘಟನೆ ವಿವರ
ಫೆ.28ರಂದು ಸಂಬಂಧಿ ಸುನಿತಾ ಡಿ’ಸೋಜಾ ಎಂಬವರು ಬೇಬಿ ಡಿಸೋಜಾ ಅವರ ವಿರುದ್ಧ ಮತ್ತು ಬೇಬಿ ಡಿಸೋಜಾ ಅವರು ಸುನಿತಾ ಡಿಸೋಜಾ ಅವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದರು.
ಈ ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜ ಅವರ ಅಕ್ಕ, ಹಾಸನದಲ್ಲಿರುವ ಆಶಾ ಕೂಡಾ ಜೊತೆಗೆ ಬಂದಿದ್ದರು. ಎಸ್.ಐ ಸೇಸಮ್ಮ ಅವರು ಕುಟುಂಬ ಸಮಸ್ಯೆಯನ್ನು ನಯವಾಗಿ ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾರವರು ಪತಿ ಲಾರೆನ್ಸ್ ಡಿ’ಸೋಜಾ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಎಸ್.ಐ ಸೇಸಮ್ಮ ಅವರು ಹಲ್ಲೆ ನಡೆಯುವುದನ್ನು ತಪ್ಪಿಸಿದರು.
ಈ ವೇಳೆ ಬೇಬಿ ಡಿಸೋಜ ಮತ್ತು ಆಕೆಯ ಅಕ್ಕ ಆಶಾ ಅವರು ಎಸ್.ಐ ಸೇಸಮ್ಮ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಎಸ್.ಐ ಸೇಸಮ್ಮ ಅವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಇನ್ ಸ್ಟಾಗ್ರಾಂನಲ್ಲಿ ಶತಕ ಬಾರಿಸಿದ ಟೀಂ ಇಂಡಿಯಾ ನಾಯಕ: ಕೊಹ್ಲಿ ಮುಡಿಗೆ ಹೊಸ ದಾಖಲೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ