Puttur; ಅಕ್ಷಯ್‌ ಕೊಲೆ ಪ್ರಕರಣ: ಆರೋಪಿಯ ಸಹೋದರನ ಹತ್ಯೆಗೆ ಸಂಚು?

ಮುಕ್ರಂಪಾಡಿ: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ

Team Udayavani, Feb 21, 2024, 11:14 PM IST

Puttur; ಅಕ್ಷಯ್‌ ಕೊಲೆ ಪ್ರಕರಣ ಆರೋಪಿಯ ಸಹೋದರನ ಹತ್ಯೆಗೆ ಸಂಚು?

ಪುತ್ತೂರು: ನಗರದ ಹೊರ ವಲಯದ ಮುಕ್ರಂಪಾಡಿ ಜಂಕ್ಷನ್‌ನಲ್ಲಿ ಫೆ. 19ರಂದು ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳು, ಕಲ್ಲೇಗ ಅಕ್ಷಯ್‌ ಕೊಲೆ ಪ್ರಕರಣದ ಆರೋಪಿಯೋರ್ವನ ಸಹೋದರನನ್ನು ಕೊಲ್ಲಲು ಹವಣಿ ಸಿರುವ ಅಂಶ ಬೆಳಕಿಗೆ ಬಂದಿದೆ.

ಕಿಶೋರ್‌ ಪೂಜಾರಿ ಕಲ್ಲಡ್ಕ, ಮನೋಜ್‌, ಆಶಿಕ್‌ ಮತ್ತು ಸನತ್‌ ಕುಮಾರ್‌ ಬಂಧಿತರು. ಈ ಪೈಕಿ ಕಿಶೋರ್‌ ಪೂಜಾರಿಯು ಕೊಲೆ ಪ್ರಕರಣವೊಂದರಲ್ಲಿ ಜೈಲಿನಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿ ನಲ್ಲಿ ಬಿಡುಗಡೆ ಗೊಂಡಿದ್ದ. ಆರೋಪಿ ಗಳು ಕೊಲೆ ಮಾಡುವ ಉದ್ದೇಶ  ದಿಂದ ಕಾರಿನಲ್ಲಿ ತಲವಾರು ಇರಿಸಿ ಕೊಂಡಿದ್ದರು ಎಂಬ ಅಂಶ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಹಿನ್ನೆಲೆ
ಕಬಕ ಗ್ರಾಮದ ಕಲ್ಲೇಗ ನಿವಾಸಿ, ಕಲ್ಲೇಗ ಟೈಗರ್ಸ್‌ ಎಂಬ ಹುಲಿ ವೇಷ ಕುಣಿತ ತಂಡದ ನಾಯಕ ಅಕ್ಷಯ್‌ ಕಲ್ಲೇಗ (26)ನನ್ನು 2023ರ ನ.6ರಂದು ತಡರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ದಾರಂದಕುಕ್ಕು ನಿವಾಸಿಯೋರ್ವನ ಸಹೋದರನ ಕೊಲೆಗೆ ಕಿಶೋರ್‌ ಪೂಜಾರಿ ಗ್ಯಾಂಗ್‌ ಸಂಚು ರೂಪಿಸಿತ್ತು ಎನ್ನಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕೊಲೆ ಆರೋಪಿಗಳು
ಕಿಶೋರ್‌ ಪೂಜಾರಿ ಮತ್ತು ತಂಡ 2022ರಲ್ಲಿ ಪೆರ್ಲಂಪಾಡಿ ಬಳಿ ಕೊಲೆಯಾದ ಚರಣ್‌ರಾಜ್‌ ರೈ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರು. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ 2022 ಜೂ.4ರಂದು ಚರಣ್‌ರಾಜ್‌ ರೈ ಎಂಬವರನ್ನು ಕೊಲೆ ಮಾಡಲಾಗಿತ್ತು. ಹಿಂಜಾವೇ ಕಾರ್ಯದರ್ಶಿ ಕಾರ್ತಿಕ್‌ ಸುವರ್ಣ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದ್ದು ಈ ಪ್ರಕರಣದ ಪ್ರಮುಖ ಸೂತ್ರಧಾರಿ ಕಿಶೋರ್‌ ಪೂಜಾರಿ ಕಲ್ಲಡ್ಕ ಆಗಿದ್ದ. ಈ ಪ್ರಕರಣದಲ್ಲಿ ಈತ ಜೈಲಿನಲ್ಲಿದ್ದು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ.

ಹಿಂದೂ ಮುಖಂಡನಿಗೆ ಬೆದರಿಕೆ?
ಕಿಶೋರ್‌ ಪೂಜಾರಿ ಸಹಿತ ಆರೋಪಿ ಗಳು ಸೋಮವಾರ ಪುತ್ತೂರಿನ ಹಿಂದೂ ಸಂಘಟನೆಯ ಪ್ರಮುಖ ಮುಖಂಡ ನಿಗೂ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಬೆದರಿಕೆ ಒಡ್ಡಿರು  ವುದಾಗಿಯು ಸುದ್ದಿ ಹಬ್ಬಿದೆ. ಆದರೆ ಪೊಲೀಸ್‌ ಮೂಲಗಳು ಇದನ್ನು ದೃಢಪಡಿಸಿಲ್ಲ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.