ಸ್ವಚ್ಛ ನಗರದ ಕನಸು ಸಾಕಾರಗೊಳ್ಳಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ


Team Udayavani, Sep 6, 2021, 3:00 AM IST

ಸ್ವಚ್ಛ ನಗರದ ಕನಸು ಸಾಕಾರಗೊಳ್ಳಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ

ಪುತ್ತೂರು ಮತ್ತು ಸುಳ್ಯ ನಗರಗಳಲ್ಲಿ ಸ್ವಚ್ಛ ನಗರ ನಿರ್ಮಾಣದ ಕನಸು ಬಿತ್ತಿ ದಶಕವೇ ಕಳೆದಿದೆ. ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಲು ವರ್ಷಂಪ್ರತಿ ಹತ್ತಾರು ಕಾರ್ಯಕ್ರಮಗಳು ನಡೆಯುತ್ತಿವೆ. ಅದರೆ ಇವೆಲ್ಲವೂ  ಆ ದಿನಕ್ಕಷ್ಟೇ ಸೀಮಿತವಾಗಿವೆಯೇ ಹೊರತು ತ್ಯಾಜ್ಯ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸುವಲ್ಲಿ ವಿಫ‌ಲವಾಗಿವೆ.

ದ.ಕ.ಜಿಲ್ಲೆಯಲ್ಲಿ ಪುತ್ತೂರು, ಸುಳ್ಯ ನಗರ ದಿನೇದಿನೆ ಬೆಳವಣಿಗೆ ಹೊಂದುತ್ತಿರುವ ಪ್ರದೇಶಗಳಾಗಿವೆ. ಶಿಕ್ಷಣ, ಆರೋಗ್ಯ ಸಹಿತ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದ್ದು ಆ ಮೂಲಕ ಸುತ್ತಮುತ್ತಲಿನ ಜನರನ್ನು ಸೆಳೆಯುತ್ತಿವೆ. ಈ ಎರಡೂ ನಗರಗಳು ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕಿರುವಂತೆಯೇ ಸ್ವತ್ಛತೆಯನ್ನು ಕಾಯ್ದುಕೊಳ್ಳುವುದು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಬಲು ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಇನ್ನು ಜನರು ಕೂಡ ಸ್ವತ್ಛತೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಸ್ಥಳೀಯಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಈ ಎರಡೂ ನಗರಗಳನ್ನು ಸಂಪರ್ಕಿಸುವ ರಸ್ತೆಗಳ ಇಕ್ಕೆಲಗಳಲ್ಲಿ  ಹೊಳೆ, ಹಳ್ಳ, ತೋಡುಗಳಿಗೇನೂ ಕೊರತೆ ಇಲ್ಲ. ನೀರಿನ ಮೂಲಸೆಲೆಗಳಾದ ಇವು ಜನರ ಪಾಲಿಗೆ ತ್ಯಾಜ್ಯ ಎಸೆಯಲು ಇರುವ ಡಂಪಿಂಗ್‌ ಯಾರ್ಡ್‌ಗಳು. ಅಷ್ಟೇಕೆ ನಗರ ಪ್ರದೇಶದಲ್ಲಿಯೇ ಇರುವ ಕಾಲುವೆ, ತೋಡುಗಳ ಮೋರಿಗಳನ್ನು ಕಂಡರೆ ಜನರು ಅಲ್ಲೇ ತ್ಯಾಜ್ಯ ಎಸೆದು ಮುಂದೆ ಸಾಗುವುದನ್ನು ಪ್ರತಿನಿತ್ಯ ಕಾಣಬಹುದು. ಕೇವಲ ರಾತ್ರಿ ಮಾತ್ರವಲ್ಲದೆ ಹಗಲಿನ ವೇಳೆಯೂ ಇಂತಹ ಕೃತ್ಯಗಳಲ್ಲಿ ತೊಡಗುವ ಕಿಡಿಗೇಡಿಗಳ ತಂಡವೇ ತುಂಬಿದೆ. ಮನಬಂದಲ್ಲಿ ತ್ಯಾಜ್ಯ ಎಸೆಯುವ ಜನರ ಪ್ರವೃತ್ತಿಗೆ ಕಡಿವಾಣ ಹಾಕಲು ಸ್ಥಳೀಯಾಡಳಿತ ಸಂಸ್ಥೆಗಳು ದಂಡ, ಸಿಸಿ ಕೆಮರಾ ಅಳವಡಿಕೆ ಇವೇ ಮೊದಲಾದ ಕ್ರಮಗಳನ್ನು ಕೈಗೊಂಡರೂ ಅವು ನಿರೀಕ್ಷಿತ ಫ‌ಲಿತಾಂಶ ನೀಡಿಲ್ಲ.

ಪುತ್ತೂರಿನ ನಗರ ಮತ್ತು ಆಸುಪಾಸಿನ ಗ್ರಾಮಗಳಲ್ಲಿ ಸಂಗ್ರಹವಾಗುವ ಕಸವನ್ನು ಬಯೋಗ್ಯಾಸ್‌ ಆಗಿ ಪರಿವರ್ತಿಸುವ ಪ್ರಯತ್ನ ಬನ್ನೂರಿನ ನೆಕ್ಕಿಲ ಡಂಪಿಂಗ್‌ ಯಾರ್ಡ್‌ನಲ್ಲಿ ಪ್ರಾರಂಭಗೊಂಡಿದೆ. ಸುಮಾರು ಹತ್ತಾರು ವರ್ಷಗಳ ಹೋರಾಟದ ಪರಿಣಾಮ ಮಹತ್ವದ ಯೋಜನೆಯೊಂದು ಕಾರ್ಯಗತಗೊಂಡಿದ್ದು ಇದರಿಂದ ತ್ಯಾಜ್ಯ ಮಣ್ಣಿನಲ್ಲಿ ಬೆರೆಯದೆ ಮರು ಬಳಕೆ ಸಾಧ್ಯವಾಗಲಿದೆ. ಇನ್ನು ಸುಳ್ಯ ನಗರದ ತ್ಯಾಜ್ಯ ಸಮಸ್ಯೆಯ ಕಥೆಯೇ ಭಿನ್ನ. ಇಲ್ಲಿ ಡಂಪಿಂಗ್‌ ಯಾರ್ಡ್‌ನ ಅವ್ಯವಸ್ಥೆಯ ಕಾರಣದಿಂದಾಗಿ ನಗರದ ಕಸವನ್ನು ತಂದು ಹಾಕಲು ಊರವರು ಪ್ರತಿಭಟಿಸಿದ ಕಾರಣ ಕಳೆದ ಎರಡು ವರ್ಷಗಳಿಂದ ನಗರದ ಕಸವನ್ನು ನಗರ ಪಂಚಾಯತ್‌ ಆವರಣದ ಶೆಡ್‌ನ‌ಲ್ಲಿ ರಾಶಿ ಹಾಕಲಾಗಿತ್ತು. ಪ್ರಸ್ತುತ ಕಸ ಬರ್ನಿಂಗ್‌ ಯಂತ್ರವನ್ನು ಡಂಪಿಂಗ್‌ ಯಾರ್ಡ್‌ನಲ್ಲಿ ಅಳವಡಿಸಲಾಗುತ್ತಿದ್ದು ಇದರಿಂದ ಡಂಪಿಂಗ್‌ ಯಾರ್ಡ್‌ನ ಕಸದ ರಾಶಿ ಕರಗುವ ನಿರೀಕ್ಷೆ ಹೊಂದಲಾಗಿದೆ. ಆ ಬಳಿಕ ದೈನಂದಿನ ಕಸವನ್ನು ಬರ್ನಿಂಗ್‌ ಮಾಡಲು ಯೋಜನೆ ರೂಪಿಸಲಾಗಿದೆ.

ಉಭಯ ನಗರಗಳ ತ್ಯಾಜ್ಯವನ್ನು ವೈಜ್ಞಾನಿಕ ಮಾದರಿಯಲ್ಲಿ ವಿಲೇ ಮಾಡುವ ಪ್ರಯತ್ನವೀಗ ಮುನ್ನೆಲೆಗೆ ಬಂದಿದೆ. ಈ ಪ್ರಯೋಗ ಯಶಸ್ಸು ಕಂಡದ್ದೇ ಆದಲ್ಲಿ  ಪುತ್ತೂರು ಮತ್ತು ಸುಳ್ಯ ನಗರಗಳ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸೀತು ಎಂಬ ಆಶಾವಾದ ಸ್ಥಳೀಯಾಡಳಿತ ಸಂಸ್ಥೆಗಳದ್ದಾಗಿದೆ. ಸಾರ್ವಜನಿಕರು ಸ್ವಚ್ಛತೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ಹೋದಲ್ಲಿ ತ್ಯಾಜ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲಿ ಸ್ಥಳಿಯಾಡಳಿತ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಲೇಬೇಕಿದೆ.

 

ಸಂ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.