ಪುತ್ತೂರು ನಗರ: 200ಕ್ಕೂ ಅಧಿಕ ಅನಧಿಕೃತ ಅಂಗಡಿಗಳು

ಉದ್ಯಮ ಪರವಾನಿಗೆ ರಹಿತ ಅಂಗಡಿಗಳಿಗೆ ಬೀಗ ಹಾಕಲು ಸಿದ್ಧತೆ

Team Udayavani, Jul 22, 2022, 10:38 AM IST

2

ಸಾಂದರ್ಭಿಕ ಚಿತ್ರ

ಪುತ್ತೂರು: ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪತ್ರವನ್ನೇ ಪಡೆಯದೆ ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದ್ದು ಅಂತಹ ಅಂಗಡಿಗಳಿಗೆ ನಗರಸಭೆ ಬೀಗ ಜಡಿಯಲು ಮುಂದಾಗಿದೆ.

ಉದ್ದಿಮೆ ನಡೆಸುವ ಅಂಗಡಿ ಮಾಲಕರು ಅಧಿನಿಯಮದ ಪ್ರಕಾರ ಪರವಾನಿಗೆ ಪತ್ರ ಪಡೆದೆ ವ್ಯವಹಾರ ಮಾಡಬೇಕು. ಉದ್ಯಮ ಪರವಾನಿಗೆ ಪತ್ರ ಇಲ್ಲದಿದ್ದರೆ ಅದನ್ನು ಅನಧಿಕೃತ ಎಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕೃತ, ಅನಧಿಕೃತ ಅಂಗಡಿ ಪತ್ತೆ ಕಾರ್ಯ ನಡೆಸಲಾಗಿದೆ.

ಅನಧಿಕೃತ ಅಂಗಡಿ ಗುರುತು

ಪರವಾನಿಗೆ ಪಡೆದ ಕಟ್ಟಡದಲ್ಲಿ ವ್ಯವಹಾರ ಆರಂಭಿಸುವ ಮೊದಲ ಅಂಗಡಿ ಮಾಲಕ ನಗರಸಭೆಗೆ ಅರ್ಜಿ ಸಲ್ಲಿಸಿ (ಆನ್‌ಲೈನ್‌) ಉದ್ಯಮ ಪರವಾನಿಗೆ ಪಡೆಯಬೇಕು. ಪ್ರತೀ ವರ್ಷ ಪರವಾನಿಗೆ ಪತ್ರವನ್ನು ನವೀಕರಿಸಬೇಕು. ಆದರೆ ಪುತ್ತೂರು ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪಡೆದು ಕೊಳ್ಳದೆ ವ್ಯಾಪಾರ ವ್ಯವಹಾರ ನಡೆಸುತ್ತಿದೆ. ಇದು ಕಾನೂನು ಬಾಹಿರವಾಗಿದ್ದು ಈ ಹಿನ್ನೆಲೆಯಲ್ಲಿ ಪೌರಾ ಯುಕ್ತರ ನೇತೃತ್ವದ ಅಧಿಕಾರಿಗಳ ತಂಡವು ಅಂತಹ ಅಂಗಡಿಗಳನ್ನು ಗುರುತು ಮಾಡಿದೆ.

ಬೀಗ ಜಡಿಯುವಿಕೆ

ಪ್ರತೀ ಹತ್ತು ವಾರ್ಡ್‌ಗಳಿಗೆ ಒಂದು ತಂಡದಂತೆ ಒಟ್ಟು ಮೂರು ತಂಡ ರಚಿಸಲಾಗಿದೆ. ಈ ತಂಡವು ವಾರ್ಡ್‌ ವಾರು ಸಮೀಕ್ಷೆ ನಡೆಸುತ್ತಿದ್ದು ಉದ್ಯಮ ಪರವಾನಿಗೆ ರಹಿತವಾಗಿ ವ್ಯವಹಾರ ನಡೆಸುವ ಅಂಗಡಿಗೆ ನೋಟಿಸ್‌ ನೀಡಿದೆ. ನೋಟಿಸ್‌ ಸ್ವೀಕರಿಸಿದ ಮೂರು ದಿನದೊಳಗೆ ಉದ್ಯಮ ಪರವಾನಿಗೆ ಪತ್ರಕ್ಕೆ ಅರ್ಜಿ ಸಲ್ಲಿಸಿ ಪರವಾನಿಗೆ ಪತ್ರ ಪಡೆಯಬೇಕು. ತಪ್ಪಿದಲ್ಲಿ ಎಚ್ಚರಿಕೆ ನೀಡಿದ ಮೂರು ದಿನದಲ್ಲಿ ಅಂಗಡಿಗೆ ಬೀಗ ಜಡಿಯಲು ನಗರಸಭೆ ನಿರ್ಧರಿಸಿದೆ.

ಗೂಡಂಗಡಿಗಿಲ್ಲ ಉದ್ಯಮ ಪತ್ರ

ಬೀದಿ ಬದಿ ವ್ಯಾಪಾರ ಹಾಗೂ ಗೂಡಂಗಡಿಗಳಿಗೆ ಉದ್ಯಮ ಪರವಾನಿಗೆ ಪತ್ರದ ಆವಶ್ಯಕತೆ ಇಲ್ಲ. ಪುತ್ತೂರು ನಗರದಲ್ಲಿ 75 ಗೂಡಂಗಡಿಗಳಿಗೆ ನಗರಸಭೆ ವತಿಯಿಂದ ಅನುಮತಿ ನೀಡಲಾಗಿದೆ. ಗೂಡಂಗಡಿ ತೆರೆಯುವ ಮೊದಲು ಅನುಮತಿ ಪಡೆದುಕೊಳ್ಳಬೇಕು. ನಗರಸಭೆಯ ಅನುಮತಿ ಪಡೆದುಕೊಳ್ಳದೆ ಏಕಾಏಕಿ ಗೂಡಂಗಡಿ ತೆರೆದರೆ ಅದು ನಿಯಮಕ್ಕೆ ವಿರುದ್ಧ ಎಂದಾಗಿ ಅನಧಿಕೃತ ಅಂಗಡಿ ಸಾಲಿಗೆ ಸೇರುತ್ತದೆ.

1600 ಮಂದಿ ನವೀಕರಣಕ್ಕೆ ಬಾಕಿ

ಪುತ್ತೂರು ನಗರಸಭೆಯಲ್ಲಿ ಕಳೆದ ವರ್ಷ 2749 ಪರವಾನಿಗೆದಾರರ ಪೈಕಿ 154 ಮಂದಿ ನವೀಕರಣ ಮಾಡಿಲ್ಲ. ಈ ವರ್ಷ 2976 ಉದ್ಯಮ ಪರವಾನಿಗೆದಾರರಿದ್ದು 1600 ಮಂದಿ ನವೀಕರಣಕ್ಕೆ ಬಾಕಿ ಇದ್ದಾರೆ. 1424 ಮಂದಿ ಮಾತ್ರ ನವೀಕರಿಸಿದ್ದಾರೆ. ಎಪ್ರಿಲ್‌, ಮೇ ಒಳಗೆ ನವೀಕರಿಸದೆ ಇರುವ ಪರವಾನಿಗೆದಾರರು ಪ್ರತಿ ದಿನಕ್ಕೆ ಇಂತಿಷ್ಟು ದಂಡ ವಿಧಿಸಿ ನವೀಕರಿಸಬೇಕಿದೆ.

ನಗರದಲ್ಲಿ 150 ರಿಂದ 200 ರ ತನಕ ಅನಧಿಕೃತ ಅಂಗಡಿಗಳು ಇರುವುದನ್ನು ಗುರುತಿಸಲಾಗಿದೆ. ಆ ಅಂಗಡಿಗಳಿಗೆ ನೋಟಿಸ್‌ ನೀಡಲಾಗುತ್ತಿದೆ. ಉದ್ಯಮ ಪರವಾನಿಗೆ ಪತ್ರ ಪಡೆದುಕೊಳ್ಳದಿದ್ದರೆ ಅಂತಹ ಅಂಗಡಿಗಳಿಗೆ ನಗರಸಭೆಯ ವತಿಯಿಂದಲೇ ಬೀಗ ಜಡಿಯಲಾಗುವುದು. – ಮಧು ಎಸ್‌. ಮನೋಹರ್‌ ಪೌರಾಯುಕ್ತ, ನಗರಸಭೆ ಪುತ್ತೂರು

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

Belgavi; ಶೆಟ್ಟರ್ ಅವರಿಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.