ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್ ನೀಡದೆ ನಿಂದಿಸಿದ ಮಾಲಕನ ವಿರುದ್ಧ ಕೇಸ್ ದಾಖಲು
Team Udayavani, May 8, 2021, 5:27 PM IST
ಸಾಂದರ್ಭಿಕ ಚಿತ್ರ
ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್ನ್ನು ನೀಡದೆ ಇರುವ ಬಗ್ಗೆ ಪ್ರಶ್ನಿಸಲು ತೆರಳಿದ ಸಂದರ್ಭದಲ್ಲಿ ವೈದ್ಯೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.
ಘಟನೆಯ ಕುರಿತು ಪುತ್ತೂರಿನ ವೈದ್ಯೆ ಚೇತನಾ ಎಂಬವರು ನೀಡಿದ್ದಾರೆ. ದೂರಿನಂತೆ ಸುಳ್ಯದ ಗುತ್ತಿಗಾರು ನಿವಾಸಿಯಾಗಿರುವ, ಬನ್ನೂರಿನಲ್ಲಿರುವ ‘ಡೆಲಿವರಿ ಕೊರಿಯರ್ ಸಂಸ್ಥೆ ಫ್ರಾಂಚೈಸಿ ಮಾಲಕ ರಾಜ ಮಾವಿನಕಟ್ಟೆ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ವೈದ್ಯೆಯೊಬ್ಬರಿಗೆ ಅವರ ಸ್ನೇಹಿತರಿಂದ ಪಾರ್ಸೆಲ್ ಒಂದು ಬರುವುದಿತ್ತು. ಪಾರ್ಸೆಲ್ನ ಮೊತ್ತವನ್ನು ಮೊದಲೇ ಪಾವತಿಸಲಾಗಿತ್ತು. ಎಪ್ರಿಲ್ 19ರೊಳಗೆ ಆ ಪಾರ್ಸೆಲ್ ವಾರಸುದಾರರಾದ ವೈದ್ಯೆಯನ್ನು ತಲುಪಬೇಕಿತ್ತು. ಆದರೆ ತಲುಪದೇ ಇದ್ದಾಗ, ಆನ್ಲೈನ್ನಲ್ಲಿ ಪರಿಶೀಲಿಸಿದಾಗ ‘ಡೆಲಿವರ್ಡ್ ಟು ಕಸ್ಟಮರ್’ ಎಂದು ವೈದ್ಯೆಯವರ ಸಹಿಯನ್ನು ಹಾಕಿ ಅದಾಗಲೇ ಕೊರಿಯರ್ ಪಾರ್ಸೆಲ್ನ್ನು ಸ್ವೀಕರಿಸಿರುವ ವಿಚಾರ ತಿಳಿದು ಬಂದಿತ್ತು.
ಇದನ್ನೂ ಓದಿ :ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ
ಈ ಬಗ್ಗೆ ವಿಚಾರಿಸಲೆಂದು ವಾರಿಸುದಾರರಾದ ವೈದ್ಯರು ಎಪ್ರಿಲ್ 19ರಂದು ಬನ್ನೂರಿನಲ್ಲಿರುವ ಡೆಲಿವರಿ ಸಂಸ್ಥೆಯ ಫ್ರಾಂಚೈಸಿಗೆ ತೆರಳಿ ಪ್ರಶ್ನಿಸಿದ್ದರು. ಈ ಸಂದರ್ಭ ಫ್ರಾಂಚೈಸಿ ಮಾಲಕ ರಾಜ ಮಾವಿನಕಟ್ಟೆ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪಾರ್ಸೆಲ್ನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ವಾರಿಸುದಾರರು ದೂರು ನೀಡಿದ್ದರು. ದೂರು ಸ್ವೀಕರಿಸಿದ ಪುತ್ತೂರು ನಗರ ಠಾಣಾ ಪೊಲೀಸರು ರಾಜ ಮಾವಿನಕಟ್ಟೆ ವಿರುದ್ಧ ಐಪಿಸಿ ಸೆಕ್ಷನ್ 504 ಮತ್ತು 506ರನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ