ಪುತ್ತೂರು : ರಿಕ್ಷಾ ಚಾಲಕನ ಮೇಲೆ ಹಲ್ಲೆಗೆ ಯತ್ನ, ದೂರು
Team Udayavani, Jul 4, 2022, 9:53 PM IST
ಪುತ್ತೂರು : ರಿಕ್ಷಾ ಚಾಲಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಕೆದಂಬಾಡಿ ಗ್ರಾಮದ ದರ್ಬೆಯಲ್ಲಿ ನಡೆದಿದೆ.
ಗೋಳ್ತಿಲ ಅರಿಯಡ್ಕ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ (22) ಹಲ್ಲೆಗೊಳಗಾದವರು. ಮುಜೀದ್ ಹಲ್ಲೆ ನಡೆಸಿದ ಆರೋಪಿ. ಅನಿಲ್ ಕುಮಾರ್ ಅವರು ಪ್ರಯಾಣಿಕರೋರ್ವರನ್ನು ಸಾಗು ಕಡೆಯಿಂದ ತಿಂಗಳಾಡಿ ಕಡೆಗೆ ಅಟೋದಲ್ಲಿ ಕರೆದುಕೊಂಡು ಹೋಗುತಿದ್ದ ವೇಳೆ ಕಾರಿನಲ್ಲಿ ಹಾರ್ನ್ ಮಾಡಿಕೊಂಡು ಬಂದ ಮುಜೀದ್ ಎನ್ನುವಾತ ಓವರ್ ಟೇಕ್ ಮಾಡಿ ಕಾರಿನಿಂದ ಇಳಿದು ಆಟೋ ರಿಕ್ಷಾವನ್ನು ನಿಲ್ಲಿಸಿ ಅನಿಲ್ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗಾಯಗೊಂಡ ಅನಿಲ್ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ