ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರವೂ ಅಗತ್ಯ
Team Udayavani, Dec 2, 2018, 2:04 PM IST
ಪುತ್ತೂರು: ನಗರಸಭಾ ವ್ಯಾಪ್ತಿಯ ಕಬಕ 1ನೇ ವಾರ್ಡ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಸ್ವಚ್ಛತೆಗಾಗಿ ಕಸ ಸಂಗ್ರಹದ ಬಕೆಟ್ ವಿತರಣೆ ಶನಿವಾರ ನಡೆಯಿತು. ವಾರ್ಡ್ನ ರಕ್ತೇಶ್ವರಿ ವಠಾರ ಅಂಗನವಾಡಿ ಕೇಂದ್ರದ ಪರಿಸರದಲ್ಲಿ ನಗರಸಭೆಯ 5 ಲಕ್ಷ ರೂ. ಅನುದಾನದಲ್ಲಿ 72 ಮೀ. ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣ ಮತ್ತು 3.50 ಲಕ್ಷ ರೂ. ವೆಚ್ಚದಲ್ಲಿ 65 ಮೀ. ಚರಂಡಿ ನಿರ್ಮಾಣದ ಕಾಮಗಾರಿಗೆ ತೆಂಗಿನಕಾಯಿ ಒಡೆಯುವ ಮೂಲಕ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು.
ಆದ್ಯತೆಯಲ್ಲಿ ಕೆಲಸ
ಪರಿಸರದ 150 ಮಂದಿಗೆ ಕಸ ಸಂಗ್ರಹದ ಬಕೆಟ್ ವಿತರಿಸಿದ ಸಂಜೀವ ಮಠಂದೂರು ಮಾತನಾಡಿ, ಸಾರ್ವಜನಿಕ ಆವಶ್ಯಕತೆಗಳ ಕಾಮಗಾರಿಯ ಸಂದರ್ಭ ಸಾರ್ವಜನಿಕರ ಸಹಕಾರವೂ ಅಗತ್ಯ. ಪ್ರತಿ ಮನೆ ಹಾಗೂ ಮನಗಳಲ್ಲಿ ಸ್ವಚ್ಛತೆಯ ಅರಿವು ಮೂಡಬೇಕು. ಕಸ, ತ್ಯಾಜ್ಯಗಳನ್ನು ವಿಂಗಡಿಸಿ ವಿಲೇವಾರಿಯವರಿಗೆ ನೀಡಬೇಕು. ಎಲ್ಲರೂ ಜಾಗೃತರಾದರೆ ಸ್ವಚ್ಛ ಭಾರತದ ಪರಿಕಲ್ಪನೆ ಈಡೇರಲು ಸಾಧ್ಯ. ಈ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ ಬಕೆಟ್ಗಳನ್ನು ನೀಡಿ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಸಹಕಾರ ನೀಡಿ
ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಮಾತನಾಡಿ, ವಾರ್ಡ್ಗಳಲ್ಲಿ ಸಮಸ್ಯೆಗಳನ್ನು ಗುರುತಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಸ್ವತ್ಛತೆಯ ಕುರಿತು ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಯಾರೂ ಸಾರ್ವಜನಿಕ ಸ್ಥಳಗಳಲ್ಲಿ ಕಸ, ತಾಜ್ಯವನ್ನು ಬಿಸಾಡದೆ ಸ್ವತ್ಛತೆಗಾಗಿ ನಗರಸಭೆಗೆ ಸಹಕಾರ ನೀಡಬೇಕು ಎಂದು ವಿನಂತಿಸಿದರು. ನಗರಸಭೆ ಸದಸ್ಯರಾದ ಕೆ. ಜೀವಂಧರ್ ಜೈನ್, ಯಶೋದಾ ಹರೀಶ್, ಸಂತೋಷ್ ಕುಮಾರ್ ಬೊಳುವಾರು, ನಗರಸಭಾ ಎಂಜಿನಿಯರ್ ದಿವಾಕರ, ಸ್ಥಳೀಯ ಪ್ರಮುಖರಾದ ರಾಮಕೃಷ್ಣ ಗೌಡ, ನವೀನ್ ಕುಮಾರ್ ಶೆಟ್ಟಿ, ಜಯವೀರ್ ಮಯ್ಯ, ಶಂಕರ್, ಅವಿನಾಶ್, ಸರಿತಾ, ವೀಣಾ ಉಪಸ್ಥಿತರಿದ್ದರು. ನಗರಸಭೆ ಸದಸ್ಯ ಶಿವರಾಮ ಸಪಲ್ಯ ಸ್ವಾಗತಿಸಿ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿನೋದ್ ಪಿ. ಕಲ್ಲೇಗ ನಿರೂಪಿಸಿದರು.
ಅಂಗನವಾಡಿ ಕಟ್ಟಡಕ್ಕೆ ಮನವಿ
27 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ರಕ್ತೇಶ್ವರಿ ವಠಾರದ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡವನ್ನು ಮಂಜೂರುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಂಗನವಾಡಿ ಕಾರ್ಯಕರ್ತೆ ರಮಾ ಅವರು ಶಾಸಕರಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ