ಪುತ್ತೂರು ಜಾತ್ರೆ ಸಂಪನ್ನ; ವೀರಮಂಗಲ- ದೇವರ ಅವಭೃಥ ಸ್ನಾನ


Team Udayavani, Apr 20, 2023, 10:55 AM IST

ಪುತ್ತೂರು ಜಾತ್ರೆ ಸಂಪನ್ನ; ವೀರಮಂಗಲ- ದೇವರ ಅವಭೃಥ ಸ್ನಾನ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಬುಧವಾರ ಬೆಳಗ್ಗೆ ಧ್ವಜಾವರೋಹಣದೊಂದಿಗೆ ಸಮಾಪನಗೊಂಡಿತು. ಮಂಗಳವಾರ ಸಂಜೆ ದೇವಾಲಯದಿಂದ ತೆರಳಿದ ಶ್ರೀ ದೇವರ ಅವಭೃಥ ಸವಾರಿಯು ದಾರಿಯುದ್ದಕ್ಕೂ 56ಕ್ಕೂ ಹೆಚ್ಚು ಕಟ್ಟೆಪೂಜೆಗಳು, ಸುಮಾರು 10,000ಕ್ಕೂ ಹೆಚ್ಚು ಹಣ್ಣುಕಾಯಿ ಸೇವೆಯನ್ನು ಸ್ವೀಕರಿಸಿ ವೀರಮಂಗಲಕ್ಕೆ ತಲುಪಿತು.

ತಳಿರು ತೋರಣ, ವಿದ್ಯುತ್‌ ದೀಪಗಳ ಅಲಂಕಾರದಿಂದ ಶೃಂಗಾರಗೊಂಡಿದ್ದ ಮಂಜೇಶ್ವರ-ಕಾಣಿಯೂರು ರಸ್ತೆಯಲ್ಲಿ 12 ಕಿ.ಮೀ. ದೂರದ ವೀರಮಂಗಲದ ಕುಮಾರಧಾರಾ ನದಿಗೆ ಸೋಮವಾರ ಬೆಳಗ್ಗೆ ತಲುಪಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ
ಅವಭೃಥ ಸ್ನಾನ ಮುಗಿಸಿ ದೇವಾಲಯಕ್ಕೆ ಮರಳಿತು.

ಬೆಳಗ್ಗೆ ದೇವರ ಮೂಲ ಉತ್ಸವ ಮೂರ್ತಿಯೊಂದಿಗೆ ಸವಾರಿಯು ದೇವಾಲಯದ ಒಳಾಂಗಣ ಪ್ರವೇಶಿಸಿತು. ಒಂದು ಸುತ್ತು ಉತ್ಸವ ನಡೆದು ಬಳಿಕ ಧ್ವಜಾವರೋಹಣ ನಡೆಯಿತು. ಬಳಿಕ ಭಕ್ತರು ದೇವರ ಧರ್ಮನಡೆಯಲ್ಲಿ ನಿಂತು ಪ್ರಾರ್ಥಿಸಿ, ಕಾಣಿಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಧ್ವಜಾವರೋಹಣ ಮುಗಿದ ಬೆನ್ನಲ್ಲೇ ದೇವಾಲಯದಲ್ಲಿ ಅನ್ನಸಂತರ್ಪಣೆ ನಡೆಯಿತು.

ಬುಧವಾರ ಬೆಳಗ್ಗೆ ವೀರಮಂಗಲ ಕುಮಾರಧಾರಾ ನದಿಯಲ್ಲಿ ಶ್ರೀ ದೇವರ ಅವಭೃಥ ಸ್ನಾನ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಿತು. ಪಂಚ ದ್ರವ್ಯಗಳಿಂದ ಶ್ರೀ ದೇವರ ಅವಭೃಥ ನಡೆಯಿತು. ದೇವರ ಸ್ನಾನದ ಬಳಿಕ ಸಾವಿರಾರು ಸಂಖ್ಯೆಯ ಭಕ್ತರು ನದಿಯಲ್ಲಿ ಮಿಂದು ಪುನೀತರಾದರು. ಬಳಿಕ ಶ್ರೀ ದೇವರ ಪ್ರಭಾವಳಿಯೊಂದಿಗೆ ನದಿ ದಡದಲ್ಲಿರುವ ಕಟ್ಟೆಯಲ್ಲಿ ಪೂಜೆ ನಡೆದು
ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ಶ್ರೀ ದೇವರ ಸವಾರಿ ಮರಳಿ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಮರಳಿತು.

ಸಾವಿರಾರು ಭಕ್ತರು
ಶ್ರೀ ದೇವರ ಸವಾರಿ ಮರಳಿ ಬರುವ ಸಂದರ್ಭದಲ್ಲಿ ವಿವಿಧ ವಾಹನಗಳಲ್ಲಿ ವಾದ್ಯಘೋಷ, ಶ್ರೀ ಮಹಾಲಿಂಗೇಶ್ವರ
ದೇವರ ಭಕ್ತಿ ಗೀತೆ, ಭಕ್ತರಿಂದ ಶಿವನಾಮ ಸ್ಮರಣೆ ನಡೆಯಿತು. ದೇವರೊಂದಿಗೆ ಅವಭೃಥಕ್ಕೆ ಬರಿಗಾಲಿನಲ್ಲಿ ಭಕ್ತಿ, ಶ್ರದ್ಧೆಯೊಂದಿಗೆ ತೆರಳಿದ ನೂರಾರು ಭಕ್ತರು ವೀರಮಂಗಲ ಕುಮಾರಧಾರಾ ನದಿಯಲ್ಲಿ ಶ್ರೀ ದೇವರೊಂದಿಗೆ ಸ್ನಾನ ಮುಗಿಸಿ ಮರಳಿ ದೇವರೊಂದಿಗೆ ದೇವಾಲಯಕ್ಕೆ ಆಗಮಿಸಿದರು. ಪೊಲೀಸರು ಬಿಗಿ ಭದ್ರತೆ ವಹಿಸಿದ್ದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ, ಕಾರ್ಯನಿರ್ವಹಣಾಧಿಕಾರಿ ನವೀನ್‌ ಕುಮಾರ್‌ ಭಂಡಾರಿ, ಪ್ರಧಾನ ಅರ್ಚಕ ವೆಂಕಟೇಶ ಸುಬ್ರಹ್ಮಣ್ಯ ಭಟ್‌, ವ್ಯವಸ್ಥಾಪನ ಸಮಿತಿ ಸದಸ್ಯರಾದ ವೀಣಾ ಬಿ.ಕೆ.,ಡಾ|ಸುಧಾ ಶ್ರೀಪತಿ ರಾವ್‌, ಬಿ.ಐತ್ತಪ್ಪ ನಾಯ್ಕ, ರವೀಂದ್ರನಾಥ ರೈ ಕೆ.ಎಸ್‌., ರಾಮದಾಸ ಗೌಡ ಎಸ್‌, ಶೇಖರ ನಾರಾವಿ, ರಾಮಚಂದ್ರ ಕಾಮತ್‌ ಮೊದಲಾದವರಿದ್ದರು.

ದೈವಗಳ ನೇಮ
ಕೊಡಿ ಇಳಿದ ಬಳಿಕ ಎರಡು ದಿನ ದೈವಗಳ ನೇಮ, ಚೂರ್ಣೋತ್ಸವ, ವಸಂತಕಟ್ಟೆ ಪೂಜೆ ನಡೆಯುತ್ತದೆ. ಬುಧವಾರ ರಾತ್ರಿ ಪಿಲಿಭೂತ, ರಕ್ತೇಶ್ವರಿ ನೇಮ ನಡೆದು ಮಂತ್ರಾಕ್ಷತೆ, ಅಂಙಣತ್ತಾಯ, ಪಂಜುರ್ಲಿ ಇತ್ಯಾದಿ ದೈವಗಳ ನೇಮ ಜರಗುತ್ತದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.