ಪುತ್ತೂರು ದೇಗುಲ: ಲಕ್ಷದೀಪೋತ್ಸವ


Team Udayavani, Dec 5, 2021, 3:00 AM IST

ಪುತ್ತೂರು ದೇಗುಲ: ಲಕ್ಷದೀಪೋತ್ಸವ

ಪುತ್ತೂರು: ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವವು ಶುಕ್ರವಾರ ರಾತ್ರಿ ನಡೆಯಿತು.

ದೇಗುಲದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಹಾಗೂ ಕುಂಟಾರು ಶ್ರೀಧರ್‌ ತಂತ್ರಿ ನೇತೃತ್ವದಲ್ಲಿ ದೇಗುಲದ ಪ್ರಧಾನ ಅರ್ಚಕ ವಿ.ಎಸ್‌.ಭಟ್‌ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಸಂಜೆ ದೇವರ ವಿಶೇಷ ಉತ್ಸವ, ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿಯಲ್ಲಿ ಭಕ್ತರು ಹಣತೆ ಬೆಳಗಿಸಿ ದೀಪೋತ್ಸವದಲ್ಲಿ ಸಂಭ್ರಮಿಸಿದರು.

ದೇವಸ್ಥಾನದ ದ್ವಾರ ಪ್ರಾಕಾರಗುಡಿಗಳಲ್ಲಿ ಮಾವಿನ ತಳಿರುತೋರಣ, ದೇವಸ್ಥಾನದ ಸುತ್ತು, ರಾಜಗೋಪುರವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಲಕ್ಷ ದೀಪೋತ್ಸವ ಪ್ರಯುಕ್ತ ನೂರಾರು ಮಂದಿ ಸ್ವತ್ಛತೆ ಸೇನಾನಿಗಳು, ನಿತ್ಯ ಕರಸೇವಕ ಗೌರವಾಧ್ಯಕ್ಷ ವೇಣಗೋಪಾಲ್‌ ನೇತೃ ತ್ವದಲ್ಲಿ ನಿತ್ಯ ಕರಸೇವಕರು ಸ್ವತ್ಛತೆ ಯಲ್ಲಿ ಕೈ ಜೋಡಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯೆ ರೋಹಿಣಿ ಆಚಾರ್ಯ ಅವರ ನೇತೃತ್ವದಲ್ಲಿ ಶೋಭಾ, ಸುಪ್ರಿಯಾ, ಪವಿತ್ರಾ, ಯಮುನಾ, ಪುಷ್ಪಾ, ಸಹನಾ ಮತ್ತು ಬಳಗದವರಿಂದ ರಥಬೀದಿಯಲ್ಲಿ ರಂಗೋಲಿ ಸೇವೆ, ಒಳಾಂಗಣದ ಗೋಪುರದಲ್ಲಿ ಮಹಾ ಲಿಂಗೇಶ್ವರ ಭಜನ ಮಂಡಳಿಯಿಂದ ಭಜನೆ ಸೇವೆ ನಡೆಯಿತು.

ದೀಪೋತ್ಸವಕ್ಕೆ ಚಾಲನೆ:

ಬ್ರಹ್ಮಶ್ರೀ ಶ್ರೀಧರ್‌ ತಂತ್ರಿ ರಥ ಬೀದಿ ಯಲ್ಲಿರುವ ಹಣತೆಗೆ ದೀಪ ಪ್ರಜ್ವಲಿಸಿದರು. ಬಳಿಕ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು, ಶೇಖರ್‌ ನಾರಾವಿ, ರಾಮಚಂದ್ರ ಕಾಮತ್‌, ರಾಮ್‌ದಾಸ್‌ ಗೌಡ, ದೇಗುಲದ ಕಚೇರಿ ವ್ಯವಸ್ಥಾಪಕ ಹರೀಶ್‌ ಶೆಟ್ಟಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ದೇಗುಲದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ, ಮಾಜಿ ಆಡಳಿತ ಮೊಕ್ತೇಸರ ಎನ್‌.ಕೆ.ಜಗನ್ನಿವಾಸ ರಾವ್‌ ಪಾಲ್ಗೊಂಡರು.

ಬಲಿ ಉತ್ಸವ ತೆಪ್ಪೋತ್ಸವ:

ಮಹಾಪೂಜೆಯ ಬಳಿಕ ಬಲಿ ಹೊರಟು ರುದ್ರವಾದ್ಯಗಳಾದ ತಿಮಲೆ (ಶಿವಲಿ) ಚೆಂಡೆ, ಡೋಲು ಘಂಟೆಯ ತಾಂತ್ರಿಕವಾದನದೊಂದಿಗೆ ತಂತ್ರಸುತ್ತು, ಸರ್ವವಾದ್ಯ ಸುತ್ತಿನಲ್ಲಿ ರಾಜಾಂಗಣದಲ್ಲಿ ಉಡಕೆ, ಚೆಂಡೆ, ಭಜನೆ, ವಾದ್ಯ ಸುತ್ತು ನೆರವೇರಿತು. ಚಂದ್ರಮಂಡಲ ರಥೋತ್ಸವ, ಕೆರೆ ಉತ್ಸವ ತೆಪ್ಪೋತ್ಸವ ನಡೆಯಿತು. ತೆಪ್ಪೋತ್ಸವದ ವೇಳೆ ಕೆರೆಯ ಸುತ್ತಲೂ ಹಣತೆ ಬೆಳಗಿಸಲಾಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.