ಪುತ್ತೂರು ಸೀಮಾಧಿಪತಿಯ ಸ್ವರ್ಣ ಕವಚದ ಧ್ವಜಸ್ತಂಭ ಪ್ರತಿಷ್ಠೆ 


Team Udayavani, Mar 23, 2019, 7:12 AM IST

23-march-8.jpg

ಪುತ್ತೂರು : ಪುತ್ತೂರು ಸೀಮಾಧಿಪತಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವರ್ಣ ಕವಚದ ನೂತನ ಧ್ವಜಸ್ತಂಭ ಪ್ರತಿಷ್ಠೆಯು ಸಾವಿರಾರು ಭಕ್ತರ ಸಮ್ಮುಖ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ನಡೆಯಿತು. ಇದೇ ಸಂದರ್ಭ ದೇವಾಲಯಕ್ಕೆ ನೂತನ ಹೂ ತೇರು ಸಮರ್ಪಣೆ ಮಾಡಲಾಯಿತು.

ನೂತನ ಧ್ವಜಸ್ತಂಭದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಕಳೆದ ಆರು ದಿನಗಳಿಂದ ವಿವಿಧ ವೈದಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯ ನೇತೃತ್ವದಲ್ಲಿ ನಡೆದು ಶುಕ್ರವಾರ 9.42ರ ವೃಷಭ ಲಗ್ನ ಸುಮೂರ್ತದಲ್ಲಿ ಧ್ವಜಸ್ತಂಭದ ಪ್ರತಿಷ್ಠೆ, 1008 ಬ್ರಹ್ಮಕಲಶಾಭಿಷೇಕ ವಿಧಿ ವಿಧಾನಗಳು ನಡೆದವು. ಮುಂಜಾನೆ 5.30ರಿಂದ 108 ತೆಂಗಿನಕಾಯಿಗಳ ಗಣಪತಿ ಹೋಮ, ಪ್ರತಿಷ್ಠಾ ಪಾಣಿ, ಧ್ವಜಸ್ತಂಭ ಪ್ರತಿಷ್ಠೆ, 1008 ಬ್ರಹ್ಮಕಲಶಾಭಿಷೇಕ, ಪ್ರತಿಷ್ಠಾ ಬಲಿ, ಮಹಾಪೂಜೆ, ಮಹಾ ಮಂತ್ರಾಕ್ಷತೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ ನೂತನ ಹೂತೇರು ಸಮರ್ಪಣೆ ನಡೆದು ಶ್ರೀ ದೇವರ ಉತ್ಸವ ಬಲಿ ನಡೆಯಿತು.

ಬ್ರಹ್ಮಕಲಶಾಭಿಷೇಕ
ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಮೂರು ಮಂದಿ ತಂತ್ರಿಗಳು, ವೈದಿಕರು ವಿಧಿ ವಿಧಾನಗಳನ್ನು ನೆರವೇರಿಸಿದರು.

ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕವನ್ನು ನೆರವೇರಿಸಿ ಅನಂತರ ಧ್ವಜಸ್ತಂಭದ ಶಿಖರಕ್ಕೆ ನಂದಿಯನ್ನು ಪ್ರತಿಷ್ಠಾಪಿಸಿ ಅಭಿಷೇಕ ನೆರವೇರಿಸಲಾಯಿತು. ಸಾವಿರಾರು ಮಂದಿ ಭಕ್ತರು ಭಕ್ತಿಯಿಂದ ಈ ವಿಶೇಷ ಸಂದರ್ಭವನ್ನು ವೀಕ್ಷಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌., ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ವಸಂತ ಕುಮಾರ್‌ ಕೆದಿಲಾಯ, ಎನ್‌. ಕರುಣಾಕರ ರೈ, ಯು.ಪಿ. ರಾಮಕೃಷ್ಣ, ಸಂಜೀವ ಕಲ್ಲೇಗ, ಜಾನು ನಾಯ್ಕ, ನಯನಾ ರೈ, ರೋಹಿಣಿ ಆಚಾರ್ಯ, ದೇವಾಲಯದ ಅರ್ಚಕರು, ಸಿಬಂದಿ ವರ್ಗ, ಭಕ್ತರು ಪಾಲ್ಗೊಂಡರು.

ಧ್ವಜಸ್ತಂಭ ವಿಶೇಷ
ಸುಮಾರು 62 ಅಡಿ ಎತ್ತರದ ಧ್ವಜಸ್ತಂಭಕ್ಕೆ ಸಂಪೂರ್ಣ ಸ್ವರ್ಣ ಕವಚದ ಹೊದಿಕೆಯನ್ನು ಅಳವಡಿಸಲಾಗಿದೆ. ಕೆಳ ಭಾಗದಲ್ಲಿ ಕಲ್ಲಿನ ಆಧಾರ ಶಿಲೆ, ಅನಂತರದಲ್ಲಿ ಕ್ರಮವಾಗಿ ಶಿಲೆ ಕಲ್ಲಿನ ಅಧಿಷ್ಠಾನ, ವೇದಿಕೆ, ಪದ್ಮ, ದಿಕ್ಪಾಲಕರು, ಕುಂಭ, ಲಕುನ ಮೂಲಸ್ಥಾನ, ಯಷ್ಠಿ, ಪದ್ಮ, ಮಂಡಿ ಹಲಗೆ, ವೀರಕಾಂಡ, ವಾಹನ (ನಂದಿ), ಮೇಲೆ ಕೊಡೆಯನ್ನು ಧ್ವಜಸ್ತಂಭ ಹೊಂದಿದೆ. 22 ಪರೆ, 23 ವಲಯಗಳ ಅಳವಡಿಕೆಯಿದೆ.

ಗರುಡ ಪ್ರದಕ್ಷಿಣೆ
ನೂತನ ಧ್ವಜಸ್ತಂಭದ ಶಿಖರಕ್ಕೆ ನಂದಿಯನ್ನು ಪ್ರತಿಷ್ಠೆ ಮಾಡುತ್ತಿದ್ದಂತೆ ಧ್ವಜಸ್ತಂಭದ ಮೇಲ್ಬಾಗ ಆಕಾಶದಲ್ಲಿ ಮೂರು ಗರುಡಗಳು ಹಾರಾಟ ನಡೆಸಿದ್ದು ವಿಶೇಷವಾಗಿತ್ತು. ಪ್ರತಿಷ್ಠೆ ಬಳಿಕ ಶ್ರೀ ದೇವಾಲಯದ ಮುಗುಳಿಯ ನೇರಕ್ಕೆ ಗರುಡಗಳು ಹಾರಾಟ ನಡೆಸಿದವು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.