ಪುತ್ತೂರು: ಭರದಿಂದ ಸಾಗುತ್ತಿದೆ ಸ್ವರ್ಣ ಕವಚ ಅಳವಡಿಕೆ ಕಾರ್ಯ
Team Udayavani, Mar 13, 2019, 7:40 AM IST
ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಸ್ವರ್ಣ ಕವಚದ ಧ್ವಜಸ್ತಂಭದ ಕಾಮಗಾರಿಗಳು ಭರದಿಂದ ನಡೆಯುತ್ತಿದ್ದು, ಧ್ವಜಸ್ತಂಭದ ತಾಮ್ರದ ಹೊದಿಕೆಗೆ ಸ್ವರ್ಣ ಕವಚ ಅಳವಡಿಸುವ ಕಾಮಗಾರಿಗಳನ್ನು ತಜ್ಞ ಕಾರ್ಮಿಕರು ನಡೆಸುತ್ತಿದ್ದಾರೆ.
ಕುಂಭಕೋಣಂನ ಎ. ಶೇಖರ್ ನೇತೃತ್ವದ 7 ಮಂದಿ ಶಿಲ್ಪಿಗಳು ಸ್ವರ್ಣ ಕವಚ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದಾರೆ. ಸಿಸಿ ಕೆಮರಾ ಅಳವಡಿಸಿದ ಭದ್ರತಾ ಕೊಠಡಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಶ್ರೀ ಮಹಾಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ಭದ್ರತಾ ಕೊಠಡಿ ನಿರ್ಮಿಸಲಾಗಿದೆ. ಸ್ವರ್ಣ ಕವಚಕ್ಕೆ ಸುಮಾರು ನಾಲ್ಕು ಕೆ.ಜಿ. ಚಿನ್ನವನ್ನು ಬಳಸಲಾಗುತ್ತಿದೆ. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ, ವಾಸ್ತು ಎಂಜಿನಿಯರ್ ಪಿ.ಜಿ. ಜಗನ್ನಿವಾಸ್ ರಾವ್ ಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್