ಪ್ರಕೃತಿ, ಪ್ರಾಣಿ, ಪಕ್ಷಿಗಳ ರಕ್ಷಣೆ ಹೊಣೆ ನಮ್ಮದು: ಖಾದರ್‌


Team Udayavani, Dec 1, 2018, 3:44 PM IST

1-december-14.gif

ಪುತ್ತೂರು: ಮನುಷ್ಯನಿಗೆ ಇರುವ ಹಕ್ಕು ಆತನ ಜತೆ ಬೆರೆತು ಜೀವಿಸುವ ಪ್ರಾಣಿಗಳಿಗೂ ಇದೆ. ಮನುಷ್ಯ ಪ್ರಕೃತಿ ಮತ್ತು ಪ್ರಾಣಿ, ಪಕ್ಷಿಗಳಿಂದ ದೂರ ಸರಿದಾಗ ವಿಕೋಪ ಉಂಟಾಗುತ್ತದೆ. ಈ ಕಾರಣದಿಂದ ಅವುಗಳನ್ನು ರಕ್ಷಿಸಿಕೊಳ್ಳುವ, ಆರೋಗ್ಯದಿಂದ ನೋಡಿಕೊಳ್ಳುವ ಜವಾಬ್ದಾರಿಯೂ ನಮಗಿದೆ ಎಂದು ರಾಜ್ಯ ನಗರಾಭಿವೃದ್ಧಿ, ವಸತಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಆರ್‌.ಐ.ಡಿ.ಎಫ್‌. ಯೋಜನೆಯಡಿ ಮಂಜೂರಾದ ದ.ಕ. ಜಿ.ಪಂ., ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ ಮಂಗಳೂರು ಮತ್ತು ಪುತ್ತೂರು, ದ. ಕ. ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ನಿರ್ಮಿಸಲಾದ ಪುತ್ತೂರು ಪಶು ಆಸ್ಪತ್ರೆಯ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಗೋವುಗಳ ವಿವಿಧ ತಳಿಗಳ ಪ್ರದರ್ಶನ ಸ್ಪರ್ಧೆಗಳು ಮಂಗಳೂರು ವ್ಯಾಪ್ತಿಯಲ್ಲಿ ಈ ಹಿಂದೆ ನಡೆಯುತ್ತಿದ್ದವು. ಇಂತಹ ಪ್ರದರ್ಶನ ಗಳನ್ನು ಮತ್ತೆ ಹಮ್ಮಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

9 ಕಟ್ಟಡ ಉದ್ಘಾಟನೆ
ಜಿಲ್ಲೆಯಾದ್ಯಂತ ಶುಕ್ರವಾರ 9 ಕಡೆಗಳಲ್ಲಿ ಪಶು ಆಸ್ಪತ್ರೆ ಕಟ್ಟಡಗಳು ಉದ್ಘಾಟನೆಗೊಂಡಿವೆ. 5 ಕಟ್ಟಡಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಶು ವೈದ್ಯ ಕೇಂದ್ರಗಳ ಮೂಲಕ ಜನಜಾಗೃತಿ, ಸರಕಾರದ ಯೋಜನೆಗಳ ಮಾಹಿತಿ ನೀಡುವ ಕೆಲಸ ಆಗಬೇಕು. ಪಶುಗಳಿಗೆ ಬಾಧಿಸುವ ರೋಗಗಳ ಕುರಿತು ಸಮರ್ಪಕ ಅಧ್ಯಯನವನ್ನು ವೈದ್ಯಾಧಿಕಾರಿಗಳು ಮಾಡಬೇಕು ಎಂದು ಸಚಿವರು ಹೇಳಿದರು.

ಮಂಗಳೂರಿನ ಬಳಿಕ ಹೆಚ್ಚು ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೇಂದ್ರ ಪುತ್ತೂರು. ಭವಿಷ್ಯದ ಪುತ್ತೂರಿಗಾಗಿ ಮೂಲ ಸೌಕರ್ಯಗಳು, ಆರ್ಥಿಕ ಪ್ರಗತಿ ವ್ಯವಸ್ಥೆಗಳು ಇನ್ನಷ್ಟು ಆಗಬೇಕು. ಈ ನಿಟ್ಟಿನಲ್ಲಿ ಎಡಿಬಿ ಮೂಲಕ 63 ಕೋಟಿ ರೂ. ಕುಡಿ ಯುವ ನೀರಿನ ಯೋಜನೆ ಪುತ್ತೂರಿಗೆ ಮಂಜೂರು ಗೊಂಡಿದೆ ಎಂದರು.

ನೆಮ್ಮದಿ ನೀಡುವ ಆಲಯ
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ರೈತನಿಗೆ ಮತ್ತು ಆತನ ಕೃಷಿ ಬದುಕಿಗೆ ನೆಮ್ಮದಿ ನೀಡುವ ಆಲಯ ಪಶು ಆಸ್ಪತ್ರೆ. ಈ ಕಾರಣದಿಂದ ಹಿಂದೆ ಇದನ್ನು ಗೋ ಶಾಲೆ ಎನ್ನಲಾಗುತ್ತಿತ್ತು. ದೇಶದಲ್ಲಿ ಕೃಷಿ, ಹೈನುಗಾರಿಕೆಗೆ ಸಂಬಂಧಪಟ್ಟ ಕ್ರಾಂತಿಯೇ ಆಗಿದೆ. ಈ ಸಾಧನೆಗಳಲ್ಲಿ ಪಶುವೈದ್ಯ ಇಲಾಖೆಯ ಪಾಲೂ ಗಣನೀಯವಾಗಿದೆ ಎಂದರು.

ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಎಸ್‌. ಮೋಹನ್‌, ಕೊಯಿಲ ಪಶು ವೈದ್ಯಕೀಯ ಕೇಂದ್ರದ ಡಾ| ಹರೀಶ್‌, ಪುತ್ತೂರು ಮುಖ್ಯ ಪಶು ವೈದ್ಯಾಧಿಕಾರಿ ಡಾ| ಧರ್ಮಪಾಲ್‌ ಕೆ., ಸ್ಥಳೀಯರಾದ ನಜೀರ್‌ ಮದ, ಕೈಲಾರ್‌ ರಾಜಗೋಪಾಲ ಭಟ್‌, ಕರುಣಾಕರ ಸುವರ್ಣ, ಜತೀಂದ್ರ ಶೆಟ್ಟಿ, ರಘುನಾಥ ರೈ, ಪ್ರಕಾಶ ರೈ, ಜಗದೀಶ ರಾವ್‌ ಮಣಿಕ್ಕಳ, ಮಹಮ್ಮದ್‌ ಕೆಂಪಿ ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು. ಉಪ್ಪಿನಂಗಡಿ ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ| ರಾಮಪ್ರಕಾಶ್‌ ಡಿ. ಸ್ವಾಗತಿಸಿದರು.

5 ವರ್ಷ ನಿಮ್ಮದೇ ಆಡಳಿತ
ನಗರ ಸ್ಥಳೀಯಾಡಳಿತ ನಗರಸಭೆಯ ಚುನಾವಣೆ ನಡೆದು 3 ತಿಂಗಳು ಕಳೆದರೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಮೂಲಕ ಆಡಳಿತ ರಚನೆಯಾಗದಿರುವ ಕುರಿತು ಸಭೆಯಲ್ಲಿ ನಗರಾಭಿವೃದ್ಧಿ ಸಚಿವರ ಗಮನ ಸೆಳೆದ ಶಾಸಕ ಸಂಜೀವ ಮಠಂದೂರು, ನಮಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದರು. ತಮ್ಮ ಭಾಷಣದ ಸಂದರ್ಭ ಶಾಸಕರ ಮನವಿಗೆ ಉತ್ತರಿಸಿದ ಸಚಿವ ಯು.ಟಿ. ಖಾದರ್‌, 5 ವರ್ಷದ ಪೂರ್ಣ ಅವಧಿ ನಿಮಗೆ ಖಂಡಿತಾ ಸಿಗುತ್ತದೆ. ಹೆದರಬೇಡಿ ಎಂದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.