ಸಾಹಿತ್ಯ ವಿಚಾರಧಾರೆಗಳ ದಾಖಲೀಕರಣ ಅಗತ್ಯ


Team Udayavani, Jan 25, 2019, 9:29 AM IST

25-january-14.jpg

ನೆಹರೂನಗರ: ಸಾಹಿತಿ ಯೊಬ್ಬನು ಸೃಷ್ಟಿಸಿದ ಸಾಹಿತ್ಯವನ್ನು, ಆತನ ಮಾತು, ಅಭಿಪ್ರಾಯಗಳನ್ನು ವೀಡಿಯೋ ಮೂಲಕ ದಾಖಲೀಕರಿಸಬೇಕಾದ ಅಗತ್ಯ ವಿದೆ. ಆಗ ಸಾಹಿತಿಯ ಅನಂತರವೂ ವಿಚಾರಧಾರೆಗಳು ಪರಿಣಾಮಕಾರಿಯಾಗಿ ಉಳಿದುಕೊಳ್ಳುತ್ತವೆ ಎಂದು ಸಾಹಿತಿ ಎ.ಪಿ. ಮಾಲತಿ ಅಭಿಪ್ರಾಯಿಸಿದರು.

ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ಕನ್ನಡ ಸಂಘದ ಆಶ್ರಯದಲ್ಲಿ ಕೊಡಮಾಡಿದ ನಿರಂಜನ ಪ್ರಶಸ್ತಿ ಸ್ವೀಕರಿಸಿದ ಅವರು, ನಮ್ಮ ವರ್ತಮಾನದ ಬದುಕಿನಲ್ಲಿ ಸಾಮಾಜಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ವೈಚಾರಿಕ ವಿಚಾರಗಳ ಅರಿವಿಗಾಗಿ ಅಪಾರವಾದ ಓದು ಅಗತ್ಯ ಎಂದು ಹೇಳಿದರು.

ನಿರಂಜನ ಅವರ ಪ್ರತಿಯೊಂದು ಸಾಹಿತ್ಯದಲ್ಲೂ ಆಶಾವಾದವಿದೆ. ಅವರ ಸತ್ವಭರಿತ ಸಾಹಿತ್ಯ ಹಾಗೂ ಶ್ರೇಷ್ಠ ಕಾರ್ಯಗಳನ್ನು ವಿದ್ಯಾರ್ಥಿಗಳು ಅರಿಯಬೇಕಾದ ಅಗತ್ಯವಿದೆ. ನಿರಂಜನ ಅವರ ಅರಿವೇ ಬರೆಯುವ ಬದುಕಿಗೆ ಹೊಸ ಹಾದಿಯನ್ನು ಕಲ್ಪಿಸಿಕೊಡಬಲ್ಲುದು. ಅಂತಹ ಮಹಾನ್‌ ಸಾಹಿತಿಯ ಹೆಸರಿಸಲ್ಲಿ ಕೊಡಮಾಡುವ ಪ್ರಶಸ್ತಿಯನ್ನು ಸ್ವೀಕರಿಸುವುದೇ ಸೌಭಾಗ್ಯ ಎಂದರು.

ನೆಲದ ಸಾಹಿತ್ಯ
ಅಧ್ಯಕ್ಷತೆ ವಹಿಸಿದ ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಕಾರ್ಯಾಧ್ಯಕ್ಷ ಡಾ| ತಾಳ್ತಜೆ ವಸಂತ ಕುಮಾರ ಮಾತನಾಡಿ, ಇಂದು ಕಮ್ಯೂನಿಸ್ಟ್‌ ಸಿದ್ಧಾಂತದಿಂದ ಪ್ರೇರಿತರಾದ ಸಾಹಿತಿಗಳು ಪಾಶ್ಚಿಮಾತ್ಯ ಸಾಹಿತಿಗಳನ್ನು, ಬರಹಗಳನ್ನು ಮಾದರಿಯಾಗಿ ಸ್ವೀಕರಿಸಿರುವುದು ಭಾರತೀಯ ನೆಲೆಗಟ್ಟಿನ ಸಾಹಿತ್ಯದ ವಾಸ್ತವಿಕ ವಿಮರ್ಶೆಗೆ ಅಡ್ಡಿಯುಂಟು ಮಾಡುತ್ತಿದೆ. ಇಲ್ಲಿಯ ಸಾಹಿತ್ಯದ ಚರ್ಚೆಗಳು, ವಿಶ್ಲೇಷಣೆಗಳು ಈ ನೆಲದ ಸಾಹಿತ್ಯದ ಆಧಾರದಲ್ಲಿರಬೇಕು. ಪಶ್ಚಿಮದ ಚಿಂತನೆಗಳಿಗೆ ಇಲ್ಲಿಯದನ್ನು ತಾಳೆ ಹಾಕುತ್ತಾ ವಿಮರ್ಶಿಸಿದರೆ ಸರಿಯೆನಿಸದು. ಎ.ಪಿ.ಮಾಲತಿ ಅವರ ಸಾಹಿತ್ಯದಲ್ಲಿ ಪ್ರಾದೇಶಿಕ ಸೌಂದರ್ಯವಿದೆ. ಇದು ಈ ಮಣ್ಣಿನ ನಿಜವಾದ ಸಾಹಿತ್ಯ ಎಂದರು.

ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ. ಶ್ರೀನಿವಾಸ ಪೈ, ಸಂಚಾಲಕ ಎಂ.ಟಿ. ಜಯರಾಮ ಭಟ್ ಉಪಸ್ಥಿತರಿದ್ದರು. ಎ.ಪಿ. ಮಾಲತಿ ಅವರ ಕಥೆಯೊಂದನ್ನು ಕನ್ನಡ ವಿದ್ಯಾರ್ಥಿ ಅರುಣ್‌ ಕುಮಾರ್‌ ವಾಚಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಸ್ವಾಗತಿಸಿ, ಕನ್ನಡ ವಿಭಾಗ ಮುಖ್ಯಸ್ಥ ಡಾ| ಶ್ರೀಧರ ಎಚ್.ಜಿ. ವಂದಿಸಿದರು. ಕನ್ನಡ ಉಪನ್ಯಾಸಕಿ ಡಾ| ಗೀತಾ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು. ಐಚ್ಛಿಕ ಕನ್ನಡ ವಿದ್ಯಾರ್ಥಿನಿ ಅಶ್ವಿ‌ನಿ ಆಶಯ ಗೀತೆಯನ್ನು ಪ್ರಸ್ತುತಪಡಿಸಿದರು.

ಮಾದರಿ ಸಾಹಿತಿ
ಅಭಿನಂದನ ಭಾಷಣ ಮಾಡಿದ ಉಪ್ಪಿನಂಗಡಿಯ ಸ.ಪ್ರ.ದ. ಕಾಲೇಜಿನ ಉಪನ್ಯಾಸಕಿ ಸತ್ಯಭಾಮಾ ಪಿ. ಅವರು, ಎ.ಪಿ. ಮಾಲತಿಯವರು ಓರ್ವ ಗೃಹಿಣಿ ಹೇಗೆ ಸಮಾಜಮುಖೀಯಾಗಿ ತೆರೆದುಕೊಳ್ಳಬಲ್ಲಳು ಎಂಬುದಕ್ಕೆ ನಿದರ್ಶನ. ಮಗಳಾಗಿ, ಮಡದಿಯಾಗಿ, ತಾಯಿಯಾಗಿ, ಅತ್ತೆಯಾಗಿ ಕರ್ತವ್ಯ ನಿಭಾಯಿಸುವ ಜತೆಗೆ ತನ್ನ ಆಸಕ್ತಿಯ ಕ್ಷೇತ್ರದಲ್ಲೂ ಅಪಾರ ಪರಿಶ್ರಮ ಮಾಡಿದ್ದಾರೆ. ವೈಚಾರಿಕ ನೆಲೆಗಟ್ಟಿನಿಂದ ಓದುಗರ ಅಂತರಂಗದಲ್ಲಿ ಸ್ಥಾಯಿಯಾಗಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.