ಪುತ್ತೂರು: 19 ಪ್ರಕರಣಗಳಿಗೆ 1.72 ಲಕ್ಷ ರೂ. ಪರಿಹಾರ

ಈ ಬಾರಿ ಕಡಿಮೆಯಾದ ಪ್ರಾಕೃತಿಕ ಮಳೆ ಹಾನಿ ಪ್ರಮಾಣ

Team Udayavani, Jul 25, 2019, 5:00 AM IST

q-13

ಪುತ್ತೂರು: ಧಾರಾಕಾರ ಮಳೆಯ ಪರಿಣಾಮ ನಗರದ ಮಾರ್ಕೆಟ್‌ ರಸ್ತೆಯ ಬಳಿಯಿರುವ ಪಶು ಆಸ್ಪತ್ರೆಯ ಆವರಣ ಗೋಡೆ ಮಂಗಳವಾರ ರಾತ್ರಿ ಕುಸಿದು ಬಿದ್ದು ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

ಪುತ್ತೂರು: ಪ್ರತಿವರ್ಷವೂ ಮಳೆ ಒಂದಷ್ಟು ಹಾನಿಯನ್ನು ಮಾಡುತ್ತಿದ್ದು, ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಇಲ್ಲಿಯ ತನಕ ಹಾನಿಯ ಪ್ರಮಾಣ ಅರ್ಧಕ್ಕಿಂತಲೂ ಕಡಿಮೆ ಆಗಿದೆ. ಹೀಗಾಗಿ ಪುತ್ತೂರು ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಹಾನಿಯ ಪರಿಹಾರ ಮೊತ್ತಕ್ಕಾಗಿ 2019-20ನೇ ಸಾಲಿನಲ್ಲಿ ಕೇವಲ 1.72 ಲಕ್ಷ ರೂ.ಗಳನ್ನು ಮಾತ್ರ ಖರ್ಚು ಮಾಡಲಾಗಿದೆ.

ಮಳೆಗಾಲ ಆರಂಭದ ದಿನಗಳಲ್ಲಿ ಮನೆ, ಸೊತ್ತುಗಳ ಹಾನಿಯ ಜತೆಗೆ ಸಿಡಿಲಿನ ಪರಿಣಾಮ ಜೀವಹಾನಿಯ ಘಟನೆಗಳೂ ನಡೆಯುತ್ತವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅಂತಹ ದುರ್ಘ‌ಟನೆಗಳು ನಡೆಯದೇ ಇರುವುದರಿಂದ ಪರಿಹಾರದ ಮೊತ್ತದಲ್ಲಿ ಹೆಚ್ಚಿನ ವ್ಯಯವಾಗಿಲ್ಲ. ಎರಡು ತಿಂಗಳ ಮಳೆಗಾಲದಲ್ಲಿ 19 ಪ್ರಕರಣಗಳು ಮಾತ್ರ ಸಂಭವಿಸಿವೆ.

ಹೀಗೆ ವಿಂಗಡನೆ
ತಾಲೂಕು ಆಡಳಿತ ಪ್ರಾಕೃತಿಕ ವಿಕೋಪದ ಹಾನಿಗಾಗಿ ಪರಿಹಾರ ನೀಡುವ ಸಂದರ್ಭ ಪ್ರತಿ ಹಾನಿಯನ್ನು ವಿಂಗಡನೆ ಮಾಡಿಕೊಂಡು ಪರಿಹಾರ ವಿತರಿಸುತ್ತದೆ. ಜೀವ ಹಾನಿ, ಪಕ್ಕಾ ಮನೆ ಸಂಪೂರ್ಣ ಹಾನಿ, ಪಕ್ಕಾ ಮನೆ ತೀವ್ರ ಹಾನಿ, ಪಕ್ಕಾ ಮನೆ ಭಾಗಶಃ ಹಾನಿ, ಕಚ್ಚಾ ಮನೆ ಸಂಪೂರ್ಣ ಹಾನಿ, ಕಚ್ಚಾ ಮನೆ ತೀವ್ರ ಹಾನಿ, ಕಚ್ಚಾ ಮನೆ ಭಾಗಶಃ ಹಾನಿ, ತೋಟಗಾರಿಕಾ ಬೆಳೆ ಹಾನಿ, ಭತ್ತದ ಕೃಷಿ ಹಾನಿ, ಗಾಯಗೊಂಡವರು, ಗುಡಿಸಲು ಹಾನಿ, ದನದ ಹಟ್ಟಿ ಹಾನಿ ಹೀಗೆ ಪರಿಹಾರ ಮೊತ್ತವನ್ನು ವಿಂಗಡಿಸಿ ನೀಡಲಾಗುತ್ತದೆ.

ಪರಿಹಾರ ಮೊತ್ತಗಳ ವಿತರಣೆ
ತಾಲೂಕಿನಲ್ಲಿ ಪ್ರಸ್ತುತ ಪಕ್ಕಾ ಮನೆ ತೀವ್ರ ಹಾನಿಗೆ ಸಂಬಂಧಿಸಿದ 2 ಪ್ರಕರಣಗಳಿಗೆ 56,800 ರೂ., ಪಕ್ಕಾ ಮನೆಯ ಭಾಗಶಃ ಹಾನಿಗೆ ಸಂಬಂಧಿಸಿದ 16 ಪ್ರಕರಣಗಳಿಗೆ 94 ಸಾವಿರ ರೂ., ಒಂದು ದನದ ಹಟ್ಟಿ ಹಾನಿಗೆ 2,100 ರೂ.ಗಳನ್ನು ಪರಿಹಾರವಾಗಿ ವಿತರಿಸಲಾಗಿದೆ. ಹೀಗೆ ಒಟ್ಟು 19 ಪ್ರಕರಣಗಳಿಗೆ 1,52,900 ರೂ.ಗಳನ್ನು ವಿತರಿಸಲಾಗಿದೆ ಎಂದು ಪುತ್ತೂರು ತಾಲೂಕು ಆಡಳಿತ ತಿಳಿಸಿದೆ.

ಒಟ್ಟು 28.10 ಲಕ್ಷ ರೂ.
2019-20ನೇ ಸಾಲಿನ ಪ್ರಾಕೃತಿಕ ವಿಕೋಪ ಪರಿಹಾರಕ್ಕಾಗಿ ಹಿಂದಿನ ಉಳಿಕೆಯ ಮೊತ್ತದಲ್ಲೇ ಪರಿಹಾರ ವಿತರಿಸಲಾಗುತ್ತಿದ್ದು, ಈ ಬಾರಿ ಪರಿಹಾರ ಪಾವತಿಗೆ ಯಾವುದೇ ಅನುದಾನ ತಾಲೂಕಿಗೆ ಬಿಡುಗಡೆಯಾಗಿಲ್ಲ. ಪರಿಹಾರಕ್ಕಾಗಿ 28,10,796 ರೂ.ಗಳಿದ್ದು, ಇದರಲ್ಲಿ 8,06,007 ರೂ. ಮುಂಜಾಗ್ರತಾ ಕ್ರಮದ ಮೊತ್ತವೂ ಸೇರಿಕೊಂಡಿದೆ.

ಪ್ರಸ್ತುತ ಸಾಲಿನಲ್ಲಿ 1,52,900 ರೂ. ಪರಿಹಾರ ಮೊತ್ತವಾಗಿ ವಿತರಿಸಲಾಗಿದ್ದು, ಜತೆಗೆ 19,600 ರೂ.ಗಳನ್ನು ಮುಂಜಾಗ್ರತಾ ಕ್ರಮಕ್ಕಾಗಿ ಖರ್ಚು ಮಾಡಲಾಗಿದೆ. ಹೀಗಾಗಿ ಈ ಸಾಲಿನಲ್ಲಿ ಒಟ್ಟು 1,72,500 ರೂ.ಗಳನ್ನು ಖರ್ಚು ಮಾಡಲಾಗಿದ್ದು, ಪ್ರಸ್ತುತ ತಾಲೂಕು ಆಡಳಿತದ ಖಾತೆಯಲ್ಲಿ ಒಟ್ಟು 26,85,796 ರೂ.ಗಳು ಉಳಿದುಕೊಂಡಿದೆ.

ಸಾಮೆತ್ತಡ್ಕ: ಮಳೆಯಿಂದ ಮನೆಗೆ ಹಾನಿ
ಪುತ್ತೂರು: ಧಾರಾಕಾರ ಮಳೆಯ ಪರಿಣಾಮ ಸಾಮೆತ್ತಡ್ಕ ಅಂಬೇಡ್ಕರ್‌ ಕಾಲನಿಯಲ್ಲಿ ಮನೆಯೊಂದು ಕುಸಿತಗೊಂಡ ಘಟನೆ ಬುಧವಾರ ನಡೆದಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಕೂಲಿ ಕಾರ್ಮಿಕೆ ವೃದ್ಧೆ ಗಿರಿಜಾ ಅವರ ಮನೆಗೆ ಹಾನಿಯಾಗಿದ್ದು, ಪುತ್ರ ಕೂಲಿ ಕಾರ್ಮಿಕರಾಗಿದ್ದು, ಅವರ ಪತ್ನಿ ಹಾಗೂ ಮೂವರು ಪುತ್ರರು ಮನೆಯಲ್ಲಿ ವಾಸವಾಗಿದ್ದರು. ಘಟನೆಯ ವೇಳೆ ಮನೆಮಂದಿ ಹೊರಗೆ ಓಡಿಬಂದಿದ್ದು, ಯಾವುದೇ ಜೀವಹಾನಿಯ ಘಟನೆ ನಡೆದಿಲ್ಲ.

ಮನೆಯ ಗೋಡೆಗಳನ್ನು ಮಣ್ಣು ಮತ್ತು ಮರಳಿನ ಮಿಶ್ರಣದಿಂದ ನಿರ್ಮಾಣಗೊಳಿಸಲಾಗಿದ್ದು, ಅದಕ್ಕೆ ನೀರು ಬಿದ್ದ ಪರಿಣಾಮ ಗೋಡೆಯ ಜತೆಗೆ ಮೇಲ್ಛಾವಣಿಯೂ ಕುಸಿದಿದೆ. ಘಟನೆಯಿಂದ ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಹಾನಿ ಸಾಕಷ್ಟು ಕಡಿಮೆ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪ್ರಾಕೃತಿಕ ವಿಕೋಪದ ಹಾನಿಯು ಅರ್ಧದಷ್ಟು ಕಡಿಮೆಯಿದ್ದು, ಹಾನಿಯಾದ ಪ್ರಕರಣಗಳಿಗೆ ಈಗಾಗಲೇ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಈ ಬಾರಿಯ ಪ್ರಾಕೃತಿಕ ವಿಕೋಪದ ಪರಿಹಾರ ಮೊತ್ತಕ್ಕಾಗಿ ದ.ಕ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ.
– ಬಿ.ಅನಂತಶಂಕರ, ತಹಶೀಲ್ದಾರ್‌, ಪುತ್ತೂರು

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.