ಪುತ್ತೂರು: ಕೊಳವೆಬಾವಿಗಾಗಿ ಪಿಡಿಒಗಳಿಂದ ಆಗ್ರಹ

ಮಿನಿ ವಿಧಾನಸೌಧದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ

Team Udayavani, Apr 17, 2020, 4:16 AM IST

ಪುತ್ತೂರು: ಕೊಳವೆಬಾವಿಗಾಗಿ ಪಿಡಿಒಗಳಿಂದ ಆಗ್ರಹ

ಪುತ್ತೂರು: ತಾಲೂಕಿನ 41 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಟಾಸ್ಕ್ಫೋರ್ಸ್‌ ವತಿಯಿಂದ ಹೊಸ ಸಾರ್ವಜನಿಕ ಕೊಳವೆಬಾವಿ ತೆರೆಯುವಂತೆ ಅಭಿವೃದ್ಧಿ ಅಧಿಕಾರಿಗಳು ಆಗ್ರಹಿಸಿದರು.

ಬುಧವಾರ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕುಡಿಯುವ ನೀರು, ಕೋವಿಡ್ 19 ಮುಂಜಾಗರೂಕತೆ ಸಂಬಂಧಿಸಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಈ ಆಗ್ರಹ ವ್ಯಕ್ತವಾಯಿತು.

ತಾಲೂಕಿನ ಆರ್ಯಾಪು, ಅರಿಯಡ್ಕ, ಬನ್ನೂರು, ಕೆಯ್ಯೂರು, ಕಬಕ ಸಹಿತ ಬಹುತೇಕ ಗ್ರಾ.ಪಂ.ಗಳಲ್ಲಿ ಕೊಳವೆಬಾವಿ ಅಗತ್ಯವಿದೆ. ಕೆಲವು ಗ್ರಾ.ಪಂ.ಗಳಲ್ಲಿ ಕೊಳವೆಬಾವಿ ಇದ್ದರೂ ವಿದ್ಯುತ್‌ ಸಮಸ್ಯೆಯಿಂದ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಶಾಸಕರಿಗೆ ತಿಳಿಸಿದರು.

ಮೇವಿನ ಸಮಸ್ಯೆ
ಕೆಲವು ಗ್ರಾ.ಪಂ. ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಕಾಡುತ್ತಿದೆ. ತಾಲೂಕಿಗೆ ಒಣಮೇವು ಸಕಲೇಶಪುರ, ಹಾಸನದಿಂದ ಸರಬರಾಜುಗೊಳ್ಳುತ್ತಿತ್ತು. ಆದರೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮೇವು ಬರುತ್ತಿಲ್ಲ ಎಂದು ಜನತೆ ದೂರುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಇದಕ್ಕೆ ಸ್ಪಂದಿಸಿದ ಉಪವಿಭಾಗಾಧಿಕಾರಿ, ಒಣ ಮೇವು ತರಿಸಲು ಯಾವುದೇ ನಿರ್ಬಂಧವಿಲ್ಲ ಎಂದು ತಿಳಿಸಿದರು.
ಶಾಸಕರು ಮಾತನಾಡಿ, ಕೆಎಂಎಫ್ ವತಿಯಿಂದ ಒಣ ಮೇವು ತರುವ ಟೆಂಡರ್‌ ಕರೆಯ ಲಾಗಿತ್ತು. ಆದರೆ ಇವರ ದರದಲ್ಲಿ ಯಾರೂ ಟೆಂಡರ್‌ ಪಡೆದುಕೊಂಡಿಲ್ಲ. ಹಾಗಾಗಿ ಸಮಸ್ಯೆಯಾಗಿದೆ ಎಂದರು. ನಮಗೆ ರೈತರಿಂದ ಒಣಮೇವು ಕುರಿತು ಯಾವುದೇ ಬೇಡಿಕೆ ಬಂದಿಲ್ಲ ಎಂದು ಪಶುಸಂಗೋಪನಾ ಇಲಾಖೆಯ ಡಾ| ಧರ್ಮಪಾಲ ಅವರು ತಿಳಿಸಿದರು.

ನೆಕ್ಕಿಲಾಡಿಯಲ್ಲೂ ನೀರಿಲ್ಲ!
ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ದಂಡೆ ಯಲ್ಲಿರುವ ನೆಕ್ಕಿಲಾಡಿ ಗ್ರಾ.ಪಂ.ನಲ್ಲಿ ನೀರಿನ ಸಮಸ್ಯೆ ಬಗ್ಗೆ ಪಿಡಿಒ ತಿಳಿಸಿದಾಗ, ಎರಡು ಜೀವನದಿಗಳ ಮಧ್ಯೆ ಇರುವ ನೆಕ್ಕಿಲಾಡಿಯಲ್ಲಿ ನೀರಿಲ್ಲ ಎಂದರೆ ಅರ್ಥವೇನು? ನೀವು ಪೂರಕ ವ್ಯವಸ್ಥೆ ಮಾಡಿಕೊಂಡಿದ್ದರೆ ಈ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ಶಾಸಕರು ಹೇಳಿದರು.

ಪಿಡಿಒಗಳಿಗೆ ಇಒ ತರಾಟೆ
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಪಿಡಿಒಗಳ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಿಮ್ಮ ಕೆಲಸ ಸಮರ್ಪಕವಾಗಿಲ್ಲ. 5 ಹೊಸ ಕೊಳವೆಬಾವಿ ಬೇಕು ಎಂದು ಕೇಳಿದ್ದೀರಿ. 2 ವರ್ಷಗಳಿಂದ ನೆಕ್ಕಿಲಾಡಿ ಗ್ರಾ.ಪಂ.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿಮಗೆ ಯಾವ ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಅದಕ್ಕೆ ಏನು ಪೂರಕ ಕಾರ್ಯ ಮಾಡಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ಕೇಳಿದ್ದನ್ನೆಲ್ಲ ಕೊಡಲು ಟಾಸ್ಕ್ಫೋರ್ಸ್‌ ಹಣ ಎಲ್ಲಿದೆ ಎಂದು ಖಾರವಾಗಿ ಪ್ರಶ್ನಿಸಿದರು.

ಕರೆ ಸ್ವೀಕರಿಸದಿದ್ದರೆ ಕ್ರಮ
ತಾಲೂಕಿನ ಕೆಲವು ಪಿಡಿಒಗಳು ಜನರ ಅಗತ್ಯ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಮೊಬೈಲ್‌ “ನಾಟ್‌ರೀಚೆಬಲ್‌’ ಆಗಿರುತ್ತದೆ. ಇದೊಂದು ಯುದ್ಧ ಸನ್ನದ್ಧ ಸ್ಥಿತಿ. ಎಲ್ಲ ಅಧಿಕಾರಿಗಳೂ ಯೋಧರಂತೆ ಕೆಲಸ ಮಾಡಬೇಕು. ಗ್ರಾ.ಪಂ. ಮಟ್ಟದ ಅಧಿಕಾರಿಗಳು ಕರ್ತವ್ಯದ ಸ್ಥಳದಲ್ಲೇ ಇರಬೇಕು ಎಂಬ ನಿಯಮವಿದೆ. ಆದರೂ ಕೆಲವರು ಜನರಿಗೆ ಸಿಗುತ್ತಿಲ್ಲ ಎಂಬ ದೂರುಗಳಿವೆ. ಇನ್ನು ಮುಂದೆ ಹಾಗಾಗಬಾರದು. ಅಗತ್ಯ ಕರೆ ಸ್ವೀಕರಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಹಾಗೂ ಉಪವಿಭಾಗಾಧಿಕಾರಿಗಳು ಪಿಡಿಒಗಳಿಗೆ ಎಚ್ಚರಿಕೆ ನೀಡಿದರು.

ಪಡಿತರ ಕಾರ್ಡುದಾರರ ವಿವರ
ತಾಲೂಕಿನಲ್ಲಿ ಒಟ್ಟು 41,112 ಬಿಪಿಎಲ್‌ ಹಾಗೂ 3,995 ಅಂತ್ಯೋದಯ ಕಾರ್ಡುದಾರರಿದ್ದಾರೆ. ಇವರಿಗೆ ರಾಜ್ಯ ಸರಕಾರದ ವತಿಯಿಂದ ಪಡಿತರ ವಿತರಣೆ ನಡೆದಿದೆ. ಜತೆಗೆ 11,466 ಎಪಿಎಲ್‌ ಕಾರ್ಡುದಾರರಿಗೆ ಪಡಿತರ ವಿತರಣೆ ಮಾಡಲಾಗಿದೆ. 14,984 ಎಪಿಎಲ್‌ ಕಾರ್ಡುದಾರರು ಅಕ್ಕಿ ಬೇಡ ಎಂದು ತಿಳಿಸಿದ್ದಾರೆ ಎಂದು ತಹಶೀಲ್ದಾರ್‌ ರಮೇಶ್‌ ಬಾಬು ತಿಳಿಸಿದರು. ನಗರಸಭಾ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.