ಹೊಸ ಬಟ್ಟೆ ಸಿಗಲೇ ಇಲ್ಲ ; ಹಳೆಯ ಬಟ್ಟೆಯೇ ಮತ್ತೆ ಉಡುವಂತಾಯಿತು

ಕೆಡಹಿದ ಮೋರಿಯನ್ನು ಪುನಃ ನಿರ್ಮಿಸುತ್ತಿದ್ದಾರೆ!

Team Udayavani, Mar 22, 2021, 3:00 AM IST

ಹೊಸ ಬಟ್ಟೆ ಸಿಗಲೇ ಇಲ್ಲ ; ಹಳೆಯ  ಬಟ್ಟೆಯೇ ಮತ್ತೆ ಉಡುವಂತಾಯಿತು

ಪುತ್ತೂರು: ಹೊಸ ಬಟ್ಟೆ ಉಡುವುದೆಂದು ಹಳೆಯ ಬಟ್ಟೆ ಎಸೆದಾತನಿಗೆ ಹೊಸ ಬಟ್ಟೆ ಸಿಗದೆ ಕೊನೆಗೆ ಹಳೆಯ ಬಟ್ಟೆಯನ್ನೇ ಉಟ್ಟ ಕಥೆಯನ್ನೇ ಹೋಲುತ್ತಿದೆ ಉಪ್ಪಿನಂಗಡಿ-ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ!

ಚತುಷ್ಪಥ ರಸ್ತೆ ನಿರ್ಮಾಣಕ್ಕೆಂದು ಹಳೆ ಮೋರಿಯನ್ನು ಕೆಡವಿ ಹೊಸ ಮೋರಿ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸ್ಥಳದಲ್ಲೇ ಹಳೆಯ ಸ್ಥಿತಿಗೆ ಅನುಗುಣವಾಗಿ ಮರು ಜೋಡಣೆ ಕಾಮಗಾರಿ ಪ್ರಾರಂಭಿಸಲಾಗಿದೆ. ಅಂದರೆ ಚತುಷ್ಪಥ ವಿಸ್ತರಣೆ ಕಾಮಗಾರಿ ಸದ್ಯಕ್ಕೆ ಪುನಾರರಂಭಗೊಳ್ಳುವುದು ಅನುಮಾನ ಎನ್ನುವುದಕ್ಕೆ ಪುಷ್ಟಿ ನೀಡಿದೆ.

ತಡೆಗೋಡೆ ಕೆಡಹಿದರು ಈಗ ಮತ್ತೆ ಜೋಡಣೆ! :

ಬೆದ್ರೋಡಿ, ವಳಾಲು, ಗೋಳಿತೊಟ್ಟು, ಕೋಲ್ಪೆ ನಡುವಿನ ಸಣ್ಣ ಸಣ್ಣ ಜಂಕ್ಷನ್‌ಗಳಲ್ಲಿ ಹಳೆ ಮೋರಿಯನ್ನು ತೆಗೆದು ಹೊಸದಾಗಿ ನಿರ್ಮಿಸಲು ಮೋರಿಯ ಮೇಲ್ಭಾಗದ ಇಕ್ಕೆಲೆಗಳಲ್ಲಿ ರಸ್ತೆ ಸುರಕ್ಷತೆ ದೃಷ್ಟಿಯಿಂದ ನಿರ್ಮಿಸಿದ ತಡೆಗೋಡೆ ತೆರವು ಮಾಡಲಾಗಿತ್ತು. ಚತುಷ್ಪಥ ರಸ್ತೆಯ ಉದ್ದಕ್ಕೆ ತಕ್ಕಂತೆ ಹಳೆ ಮೋರಿ ಜಾಗದಲ್ಲಿ ವಿಸ್ತರಿತ ಹೊಸ ಮೋರಿ ಅಳವಡಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಉದ್ದೇಶಿತ ರಸ್ತೆ ಕಾಮಗಾರಿ ನಿರೀಕ್ಷೆಯಂತೆ ಸಾಗದೆ ಹಳೆ ಮೋರಿಯಲ್ಲಿ ನೀರಿನ ಹರಿವಿಗೆ ತಡೆ ಉಂಟಾಗುವ ಸ್ಥಿತಿ ಉಂಟಾಗಿತ್ತು. ಜತೆಗೆ ತಡೆಗೋಡೆ ಇಲ್ಲದೆ ವಾಹನಗಳಿಗೆ ಸಂಚಾರದ ವೇಳೆ ಆತಂಕದ ಸ್ಥಿತಿಯೂ ಇತ್ತು. ಹೊಸ ರಸ್ತೆಯ ವಿಸ್ತರಣೆಗೆ ಅನುಗುಣವಾಗಿ ತಡೆಗೋಡೆ ನಿರ್ಮಿಸುವ ಬದಲು ಹೀಗಿರುವ ರಸ್ತೆಯಲ್ಲಿನ ಮೋರಿಗೆ ಅನುಗುಣವಾಗಿ ಈ ಹಿಂದೆ ಇದ್ದ ಜಾಗದಲ್ಲೇ ಮತ್ತೆ ತಡೆಗೋಡೆ ಕಟ್ಟಲಾಗಿದೆ.

ಕಿರು ಸೇತುವೆ ಅಪೂರ್ಣ :

ಅಡ್ಡಹೊಳೆಯಿಂದ ಉಪ್ಪಿನಂಗಡಿ ನಡುವಿನ 41 ಕಿ.ಮೀ. ರಸ್ತೆಯು ಕೇಂದ್ರ ಹೆದ್ದಾರಿ ಪ್ರಾಧಿಕಾರದ ನೇತೃತ್ವದಲ್ಲಿ ಚತುಷ್ಪಥಗೊಳಿಸುವ ಸಲುವಾಗಿ ವಿದ್ಯುತ್‌ ಕಂಬಗಳು, ಕೊಳವೆ ಸಹಿತ ಹಳೆಯ ಮೋರಿ ವಿಸ್ತರಣೆ ಪ್ರಕ್ರಿಯೆಗಳು ನಡೆದಿವೆ. ರಸ್ತೆಯು ಹಲವು ತಿರುವುಗಳನ್ನು ಒಳಗೊಂಡಿರುವುದರಿಂದ ಮತ್ತು ಅಕ್ಕಪಕ್ಕದಲ್ಲಿ ಕಾಡು ಇರುವುದರಿಂದ ಇಲ್ಲಿ ರಸ್ತೆ ವಿಸ್ತರಣೆ ಸವಾಲಿನ ಕೆಲಸವಾಗಿದ್ದರೂ ಒಂದು ಭಾಗದಲ್ಲಿ ಗುಡ್ಡ ಹಾಗೂ ಇನ್ನೊಂದು ಭಾಗದಲ್ಲಿ ಹಳ್ಳ ಇದ್ದು ಇವುಗಳನ್ನು ಸಮತಟ್ಟುಗೊಳಿಸಿ ಅನಂತರ ಕಾಮಗಾರಿ ಕೈಗೆತ್ತಿಕೊಳ್ಳುವ ಕಾರ್ಯ ಆರಂಭಿಸಲಾಗಿತ್ತು. ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ತನಕ 2 ಮೇಲ್ಸೇತುವೆ, 2 ದೊಡ್ಡ ಸೇತುವೆ, 14 ಸಣ್ಣ ಸೇತುವೆ ನಿರ್ಮಿಸಲು ಉದ್ದೇಶಿಸಿದ್ದು ಉಪ್ಪಿನಂಗಡಿ-ಅಡ್ಡಹೊಳೆ ತನಕ ಸಣ್ಣ ಸೇತುವೆ ಕಾಮಗಾರಿ ಕೂಡ ಅಪೂರ್ಣ ಸ್ಥಿತಿಯಲ್ಲಿದೆ. ಗುಡ್ಡ ಪ್ರದೇಶ ಕುಸಿಯದ ಹಾಗೆ ನಿರ್ಮಿಸಲಾದ ತಡೆಗೋಡೆಗಳು ಕೂಡ ಪೂರ್ಣಗೊಂಡಿಲ್ಲ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.