ಲಂಬಾಣಿ ಸಮುದಾಯ ಮುಖ್ಯವಾಹಿನಿಗೆ ಬರಲಿ


Team Udayavani, Feb 16, 2019, 7:50 AM IST

16-february-9.jpg

ಪುತ್ತೂರು: ಲಂಬಾಣಿ ಸಮುದಾಯ ಸಾಕಷ್ಟು ಮುಂದುವರಿದಿದ್ದರೂ ಕುಲ ಕಸುಬನ್ನು ಮರೆತಿಲ್ಲ ಎಂದು ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಶ್ಲಾ ಸಿದರು. ಪುತ್ತೂರು ತಾಲೂಕು ಕಚೇರಿಯ ತಹಶೀಲ್ದಾರ್‌ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂತ ಸೇವಾಲಾಲ್‌ ಅವರು ನಮಗಾಗಿ ನೀಡಿದ ಆದರ್ಶಗಳ ಮಹತ್ವವನ್ನು ಅರಿತು ಕೊಳ್ಳಬೇಕಿದೆ. ಸಾಮಾನ್ಯ ವ್ಯಕ್ತಿಯಾಗಿ ಜನಿಸಿ, ಸಮಾಜದ ಜತೆ ನಿಂತು ಹೋರಾಡಿ ಆದರ್ಶ ಪುರುಷರಾಗಿ ಮೆರೆದಿದ್ದರು ಎಂದರು.

ಲಂಬಾಣಿ ಸಮುದಾಯ ಜೀವನಕ್ಕಾಗಿ ಅಲೆಮಾರಿಗಳಾಗಿ ಸುತ್ತಾಡುತ್ತಿದೆ. ಸಮುದಾಯದಲ್ಲಿ ಕೆಲವರು ಉನ್ನತ ಸ್ಥಾನಮಾನ ಪಡೆದಿದ್ದರೂ ಎಲ್ಲರೂ ಈ ಸ್ಥಾನಕ್ಕೆ ಹೋಗಿಲ್ಲ. ಆದ್ದರಿಂದ ಉಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ನಡೆಯಬೇಕಿದೆ ಎಂದರು.

13 ಸಾವಿರ ಜನ
ಉಪನ್ಯಾಸ ನೀಡಿದ ಎಡಮಂಗಲ ಸರಕಾರಿ ಪ್ರೌಢಶಾಲೆ ಸಹಶಿಕ್ಷಕ ರಮೇಶ ಪಿ. ನಾಯ್ಕ, 143 ದೇಶಗಳಲ್ಲಿ ಲಂಬಾಣಿ, ಬಂಜಾರ ಸಮುದಾಯದ ಜನರು ನೆಲೆಸಿದ್ದಾರೆ. ನಮ್ಮ ದೇಶದಲ್ಲಿ ಬಂಜಾರಾ, ವಂಜಾರ ಮೊದಲಾದ 29 ಹೆಸರುಗಳಿಂದ ಕರೆಸಿಕೊಳ್ಳುತ್ತಿದ್ದಾರೆ. ಇವರ ಮೂಲ ಕಸುಬು ವ್ಯಾಪಾರ. ಒಂಟೆ ಮೊದಲಾದ ಪ್ರಾಣಿಗಳ ಮೇಲೆ ಸರಕುಗಳನ್ನು ಹೇರಿಕೊಂಡು ಹೋಗಿ, ಮನೆಮನೆಗೆ ತಲುಪಿಸುತ್ತಿದ್ದರು. ಇಂತಹ ಸಮುದಾಯದಲ್ಲಿ ಹುಟ್ಟಿದ ಪವಾಡಪುರುಷ ಸಂತ ಶ್ರೀ ಸೇವಾಲಾಲ್‌. ರಾಜ್ಯದಲ್ಲಿ 3 ಸಾವಿರದಷ್ಟು ತಾಂಡಗಳಿದ್ದು, 45 ಲಕ್ಷಕ್ಕೂ ಮಿಕ್ಕಿ ಜನರಿದ್ದಾರೆ. ಆದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 13 ಸಾವಿರದಷ್ಟು ಮಾತ್ರ ಇದ್ದಾರೆ. ಅದೂ ಬೇರೆ ಜಿಲ್ಲೆಗಳಿಂದ ವಲಸೆ ಬಂದವರು. ಆದ್ದರಿಂದ ದ.ಕ.ದಲ್ಲಿ ಸಂತ ಶ್ರೀ ಸೇವಾಲಾಲ್‌ ಜಯಂತಿ ಮಾಡುವುದು ಹೆಚ್ಚಿನ ಪ್ರಾಧಾನ್ಯ ಪಡೆದುಕೊಂಡಿದೆ ಎಂದರು.

ಕರಾವಳಿ ಶ್ರೀ ಸೇವಾಲಾಲ್‌ ಬಂಜಾರ ಸಂಘದ ಪ್ರಧಾನ ಕಾರ್ಯದರ್ಶಿ ಚಂದು ನಾಯ್ಕ ಮಾತನಾಡಿ, ಸೇವಾಲಾಲ್‌ ಅವರ ಸಂದೇಶ ಕೇವಲ ಬಂಜಾರ ಸಮುದಾಯಕ್ಕೆ ಸೀಮಿತವಾಗಿಲ್ಲ, ನೀರು ಖರೀದಿಯ ವಸ್ತು ಆಗುತ್ತದೆ ಎಂದು 18ನೇ ಶತಮಾನದಲ್ಲೇ ಹೇಳಿಕೊಂಡಿದ್ದರು. ಅವರ ಆದರ್ಶಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪುತ್ತೂರಿನಲ್ಲೂ ಸೇವಾಲಾಲ್‌ ಭವನ ಆಗಬೇಕಿದೆ. ಆದರೆ ಇದಕ್ಕಾಗಿ 10 ಸೆಂಟ್ಸ್‌ ಜಾಗವೂ ಸಿಗುತ್ತಿಲ್ಲ. ಇದಕ್ಕೆ ಕಂದಾಯ ಇಲಾಖೆಯ ಸಹಕಾರ ಬೇಕು ಎಂದು ಮನವಿ ಮಾಡಿಕೊಂಡರು. ಶಾಸಕ ಸಂಜೀವ ಮಠಂದೂರು, ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌ ಶುಭ ಹಾರೈಸಿದರು. ಉಪತಹಶೀಲ್ದಾರ್‌ ಶ್ರೀಧರ್‌ ಕೆ. ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಕರಣಿಕ ಚಂದ್ರ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.