ಮಹಾಲಿಂಗೇಶ್ವರ ದೇಗುಲ: ಧನುಪೂಜೆ ವಿಶೇಷ


Team Udayavani, Jan 4, 2020, 11:03 PM IST

19

ನಗರ: ಧನು ಸಂಕ್ರಮಣದ ಮರು ದಿನದಿಂದ ಮಕರ ಸಂಕ್ರಮಣದವರೆಗೆ ಆಗಮೋಕ್ತ ಪದ್ಧತಿಯ ಪೂಜಾರಾಧನೆ ಇರುವ ದೇವಾಲಯಗಳಲ್ಲಿ ವಾರ್ಷಿಕ ಧನು ಪೂಜೆ ನಡೆಯುತ್ತವೆ. ಧನು ಪೂಜೆ ಶಿವನಿಗೆ ಪ್ರಿಯ ವಾಗಿರುವುದರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಿತ್ಯ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.

ಬ್ರಾಹ್ಮಿ ಮುಹೂರ್ತದಲ್ಲಿ ದೇವಾನು ದೇವತೆಗಳ ಪ್ರಸನ್ನ ಕಾಲದಲ್ಲಿ ಧನು ಪೂಜೆ ನೆರವೇರುತ್ತದೆ. ಇದನ್ನು ಧ್ಯಾನ ಕಾಲ ಎಂದು ಕರೆಯುತ್ತಾರೆ. ಈ ಹೊತ್ತಿನಲ್ಲಿ ಶ್ರೀ ದೇವರ ನಾಮಸ್ಮರಣೆ, ರುದ್ರಪಠಣ, ಅಶ್ವತ್ಥ ವೃಕ್ಷ ಪ್ರದಕ್ಷಿಣೆ ಇತ್ಯಾದಿ ಕಾರ್ಯಗಳನ್ನು ನೆರವೇರಿಸಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಜನರಲ್ಲಿದೆ.

ಸೀಮೆಯ ದೇವಸ್ಥಾನ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಗರ ಹಾಗೂ ಆಸುಪಾಸಿನ ಗ್ರಾಮಗಳ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಿಂದ ಧನುಪೂಜೆ ನಡೆಯುತ್ತದೆ. ಈ ಸಂದರ್ಭ ಶಿವನಿಗೆ ಪ್ರಿಯವಾದ ಸೋಮವಾರದಂದು ಧನುಪೂಜೆಯಲ್ಲಿ ಪಾಲ್ಗೊಳ್ಳುವ ಭಕ್ತರ ಸಂಖ್ಯೆ ಗರಿಷ್ಠವಾಗಿರುತ್ತದೆ.

ಪೂಜಾ ವಿಶೇಷ
ಮುಂಜಾನೆ ವ್ರತಾಚರಣೆಯೊಂದಿಗೆ ಶುದ್ಧಹಸ್ತರಾಗಿ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. 4 ಗಂಟೆಯಿಂದ ಶ್ರೀ ದೇವರಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಮಹಾಪೂಜೆ (ಧನು ವಿಶೇಷ ಪೂಜೆ), ಶ್ರೀ ದೇವರ ಬಲಿ ಉತ್ಸವದ ಬಳಿಕ ಅವಲಕ್ಕಿ ಪ್ರಸಾದ ವಿತರಣೆ ನಡೆಯುತ್ತದೆ. ಪೂಜಾ ಸಮಯದಲ್ಲಿ ವಿಶೇಷವಾಗಿ ರುದ್ರ ಪಾರಾಯಣ ನಡೆಯುತ್ತದೆ. ಧನುಪೂಜೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗಾಗಿ ಪ್ರತ್ಯೇಕ ಸರದಿಯ ಸಾಲು ಮಾಡಲಾಗುತ್ತದೆ. ಪ್ರತಿ ವರ್ಷವೂ ಧನುಮಾಸ ಪೂಜೆ ಆರಂಭವಾಗುವ ಹೊತ್ತಿನಲ್ಲಿ ದೇವಾಲಯದಲ್ಲಿ ತೆಂಗಿನ ಗರಿಯ ಸಾಂಪ್ರದಾಯಿಕ ಚಪ್ಪರವನ್ನು ಭಕ್ತರ ಅನುಕೂಲಕ್ಕಾಗಿ ಅಳವಡಿಸಲಾಗುತ್ತಿದೆ.

ಕನಕಾಭಿಷೇಕ
ಪೂರ್ವಶಿಷ್ಟ ಸಂಪ್ರದಾಯದಂತೆ ಧನುರ್ಮಾಸ ಮುಗಿದು ಉತ್ತರಾಯಣ ಪ್ರವೇಶದ ಪುಣ್ಯಕಾಲವಾದ ಮಕರ ಸಂಕ್ರಮಣದಂದು ರಾತ್ರಿ ದೇವಾಲಯದ ಗೋಪುರದಲ್ಲಿರುವ ಉಳ್ಳಾಲ್ತಿ ನಡೆಯ ಮುಂದೆ ಶ್ರೀ ದೇವರ ಉತ್ಸವ ಮೂರ್ತಿ ತಲುಪಿದಾಗ ಕನಕಾಭಿಷೇಕ ನಡೆಸಲಾಗುತ್ತದೆ. ದೇವಾಲಯದ ಕಾರ್ಯಸ್ಥರು ಶ್ರೀ ದೇವರ ಉತ್ಸವ ಮೂರ್ತಿಯ ಮೇಲೆ ಹರಿವಾಣದಲ್ಲಿ ಹೊದ್ಲು, ವೀಳ್ಯದೆಲೆ, ಅಡಿಕೆ, ಕಾಳುಮೆಣಸು, ಚಿನ್ನ, ಬೆಳ್ಳಿಯ ತುಣುಕು, ನಾಣ್ಯ ಮುಂತಾದ ಸುವಸ್ತು ಗಳ ಮಿಶ್ರಣ ಅಭಿಷೇಕ ಮಾಡುತ್ತಾರೆ.

ಪುತ್ತೂರಿನಲ್ಲಿ ಮಾತ್ರ
ಪುತ್ತೂರು ಸೀಮೆಯ ಪೂರ್ವಶಿಷ್ಟ ಸಂಪ್ರದಾಯಗಳಲ್ಲಿ ಮಕರ ಸಂಕ್ರಾಂತಿಯಂದು ನಡೆಯುವ ಕನಕಾಭಿಷೇಕ ಪ್ರಮುಖ ಉತ್ಸವ ವಾಗಿದೆ. ಸೀಮೆಯ ಅರಸೊತ್ತಿಗೆಯ ಆಡಳಿತದಲ್ಲಿ ವಿಜಯದ ಸಂಕೇತವಾಗಿ ಇದನ್ನು ಆಚರಿಸಿಕೊಂಡು ಬರುತ್ತಿದ್ದುದು ಪಾಡನಗಳಲ್ಲಿ, ದೈವಗಳ ನುಡಿಕಟ್ಟಿನಲ್ಲಿ ಉಲ್ಲೇಖವಿದೆ. ಶ್ರೀ ದಂಡನಾಯಕ ಉಳ್ಳಾಲ್ತಿ ಮತ್ತು ಪರಿವಾರ ದೈವಗಳು ಪುತ್ತೂರು ಕ್ಷೇತ್ರದ ರಕ್ಷಣೆಗಾಗಿ ಮಾಡಿದ ಯದ್ಧದ ವಿಜಯೋತ್ಸವದ ಸಂಕೇತವೇ ಕನಕಾಭಿಷೇಕ ಎಂಬ ನಂಬಿಕೆ ಇದೆ. ಕನಕಾಭಿಷೇಕ ನಡೆಸುವ ಪದ್ಧತಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮಾತ್ರ ಇದೆ ಎಂಬುದು ಧಾರ್ಮಿಕ ಅಧ್ಯಯನಕಾರರ ಅಭಿಪ್ರಾಯ.

ಮಕರ ಸಂಕ್ರಾಂತಿಯಂದು ದೇವಾಲಯದ ವಠಾರದಲ್ಲಿರುವ ಶ್ರೀ ಶಾರದಾ ಭಜನ ಮಂದಿರದಿಂದ ನಗರ ಭಜನೆ ಹೊರಟು ಬಲಾ°ಡು ಉಳ್ಳಾಲ್ತಿ ಕ್ಷೇತ್ರಕ್ಕೆ ತೆರಳುವ ಸಂಪ್ರದಾಯವಿದೆ. ಅಂದು ದೇವಾಲಯದ ವಠಾರದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯೂ ನಡೆಯುತ್ತದೆ.

ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಧನುಪೂಜೆ ವಿಶೇಷವಾಗಿ ನಡೆಯುವುದರಿಂದ ಭಕ್ತರಿಗೆ ಅನುಕೂಲಕರ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಧನುಪೂಜೆಯಲ್ಲಿ ನಿತ್ಯ 2 ಸಾವಿರಕ್ಕೂ ಮಿಕ್ಕಿ ಭಕ್ತರು ಪಾಲ್ಗೊಳ್ಳುತ್ತಾರೆ. ಮಕರ ಸಂಕ್ರಮಣದಂದು ದೇವರಿಗೆ ವಿಶೇಷ ಕನಕಾಭಿಷೇಕ ನಡೆಯುವುದರಿಂದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
-ನವೀನ್‌ ಭಂಡಾರಿ, ಪ್ರಭಾರ ಇಒ, ಶ್ರೀ ಮಹಾಲಿಂಗೇಶ್ವರ ದೇವಾಲಯ, ಪುತ್ತೂರು

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.