ಪುತ್ತೂರು-ಸುಳ್ಯ ತಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ಕುತ್ತು
ಕಡಬಕ್ಕೆ ನೂತನ ತಾ.ಪಂ. ಭಾಗ್ಯ: ಮೀಸಲಾತಿ ಪ್ರಕಟ
Team Udayavani, Jun 22, 2020, 6:15 AM IST
ವಿಶೇಷ ವರದಿ-ಪುತ್ತೂರು/ಸುಳ್ಯ: ಕಡಬ ತಾ.ಪಂ. ಆಗಿ ಹೊಸದಾಗಿ ರೂಪುಗೊಂಡು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಇದರ ಪರಿಣಾಮ ಪುತ್ತೂರು ಮತ್ತು ಸುಳ್ಯ ತಾ.ಪಂ.ನ ಉಪಾಧ್ಯಕ್ಷ ಸ್ಥಾನ ಖಾಲಿಯಾಗಲಿದ್ದು, ಹೊಸದಾಗಿ ಚುನಾವಣೆ ನಡೆಯಲಿದೆ.
ಎರಡೂ ತಾ.ಪಂ.ಗಳ ಉಪಾಧ್ಯಕ್ಷ ಸ್ಥಾನ ಹೊಂದಿರುವ ಸದಸ್ಯರು ಪ್ರತಿನಿಧಿಸುತ್ತಿರುವ ಕ್ಷೇತ್ರ ಕಡಬ ತಾ.ಪಂ.ಗೆ ಒಳಪಡಲಿರುವ ಕಾರಣ ಪುತ್ತೂರು ಮತ್ತು ಸುಳ್ಯ ತಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆ ನಡೆಯಬೇಕಿದೆ.
ಎರಡೂ “ಉಪಾಧ್ಯಕ್ಷೆ’ ಸ್ಥಾನ ತೆರವು
ತೆರವಾಗುತ್ತಿರುವ ಎರಡೂ ಉಪಾಧ್ಯಕ್ಷ ಸ್ಥಾನಗಳಲ್ಲಿ ಮಹಿಳೆಯರೇ ಇದ್ದಾರೆ. ಸುಳ್ಯ ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್. ರೈ ಅವರು ಎಣ್ಮೂರು ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಪುತ್ತೂರು ತಾ.ಪಂ. ಉಪಾಧ್ಯಕ್ಷೆ ಲಲಿತಾ ಈಶ್ವರ ಅವರು ಚಾರ್ವಾಕ ತಾ.ಪಂ. ಕ್ಷೇತ್ರದ ಸದಸ್ಯೆಯಾಗಿದ್ದಾರೆ.
ಈ ಎರಡು ಕ್ಷೇತ್ರಗಳು ಕಡಬ ತಾ.ಪಂ. ವ್ಯಾಪ್ತಿಗೆ ಸೇರ್ಪಡೆ ಗೊಂಡಿವೆ. ಹೀಗಾಗಿ ಇವರಿಬ್ಬರ ಉಪಾಧ್ಯಕ್ಷ ಸ್ಥಾನ ತೆರವಾಗಲಿದೆ. ಈ ಇಬ್ಬರೂ ಬೇರೆ ಬೇರೆ ತಾಲೂಕುಗಳ ತಾ.ಪಂ. ಸದಸ್ಯೆ, ಉಪಾಧ್ಯಕ್ಷ ರಾಗಿದ್ದರೂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿ ಇವರಿಬ್ಬರು ಸುಳ್ಯ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತಾರೆ. ಇನ್ನು ಮುಂದೆ ಇವರಿಬ್ಬರು ಒಂದೇ ತಾಲೂಕಿನ ತಾ.ಪಂ. ವ್ಯಾಪ್ತಿಯೊಳಗೂ ಸೇರಲಿದ್ದಾರೆ.
ಎಣ್ಮೂರು ಸದಸ್ಯರಿಗೆ ಇಕ್ಕಟ್ಟು
ಮೂರು ಗ್ರಾಮಗಳನ್ನು ಹೊಂದಿರುವ ಎಣ್ಮೂರು ತಾ.ಪಂ. ಕ್ಷೇತ್ರದ ಸದಸ್ಯರಿಗೆ ಸುಳ್ಯ ಮತ್ತು ಕಡಬ ತಾ|ನ ಗ್ರಾಮಗಳು ಒಳಪಡುವ ಕಾರಣ ಹೊಸ ಸಮಸ್ಯೆ ತಲೆದೋರಿದೆ. ಎಣ್ಮೂರು ತಾ.ಪಂ. ಕ್ಷೇತ್ರ ಎಣ್ಮೂರು, ಮುರುಳ್ಯ, ಎಡಮಂಗಲ ಗ್ರಾಮ ಒಳಗೊಂಡಿದೆ. ಕಡಬ ತಾಲೂಕು ಆದ ಬಳಿಕ ಎಡಮಂಗಲ ಮತ್ತು ಎಣ್ಮೂರು ಕಡಬಕ್ಕೆ ಸೇರಿತು. ಮುರುಳ್ಯ ಸುಳ್ಯದಲ್ಲೇ ಉಳಿದುಕೊಂಡಿದೆ.
ಈಗ ಎಣ್ಮೂರು ತಾ.ಪಂ. ಕ್ಷೇತ್ರ ಕಡಬಕ್ಕೆ ಸೇರಿದರೂ ಸುಳ್ಯಕ್ಕೆ ಒಳಪಟ್ಟಿರುವ ಮುರುಳ್ಯ ಗ್ರಾಮ ಯಾವ ತಾ.ಪಂ. ವ್ಯಾಪ್ತಿಗೆ ಬರಲಿದೆ ಎಂಬ ಜಿಜ್ಞಾಸೆ ಮೂಡಿದೆ. ವ್ಯಾಪ್ತಿ ಪ್ರಕಾರ ಎಣ್ಮೂರು ಮತ್ತು ಎಡಮಂಗಲಕ್ಕೆ ಸಂಬಂಧಿಸಿ ಕಡಬ ತಾ.ಪಂ., ಮುರುಳ್ಯ ಸುಳ್ಯ ತಾ.ಪಂ. ವ್ಯಾಪ್ತಿಗೆ ಒಳಪಡುತ್ತದೆ. ಅಂದರೆ ಇಲ್ಲಿನ ಸದಸ್ಯರು ಎರಡೂ ತಾ.ಪಂ. ವ್ಯಾಪ್ತಿಯೊಳಗೆ ಇದ್ದಂತೆ ಆಗಿದೆ.
ಸಹಾಯಕ ಆಯುಕ್ತರಿಗೆ ಪತ್ರ
ಪುತ್ತೂರು ಮತ್ತು ಸುಳ್ಯ ತಾ.ಪಂ.ಉಪಾಧ್ಯಕ್ಷರ ಸ್ಥಾನ ತೆರವಾಗುವ ಕಾರಣ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಉಭಯ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಳು ಸಹಾಯಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಕಡಬ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ದಿನಾಂಕ ನಿಗದಿ ಆದ ಸಂದರ್ಭ ಪುತ್ತೂರು, ಸುಳ್ಯ ತಾ.ಪಂ.ಉಪಾಧ್ಯಕ್ಷತೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಕಡಬ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ
ಕಡಬ: ನೂತನ ಕಡಬ ತಾ.ಪಂ.ನ ಪ್ರಥಮ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದ್ದು, ಅಧ್ಯಕ್ಷತೆ ಅನುಸೂಚಿತ ಜಾತಿ (ಮಹಿಳೆ), ಉಪಾಧ್ಯಕ್ಷತೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಶೀಘ್ರ ದಿನಾಂಕ ಘೋಷಣೆ ಯಾಗಲಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾ.ಪಂ.ನ ವ್ಯಾಪ್ತಿಯಲ್ಲಿರುವ ಕಡಬ ತಾ|ಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮ ಗಳನ್ನೊಳಗೊಂಡ 13 ತಾ.ಪಂ. ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾ.ಪಂ. ರೂಪುಗೊಂಡಿದೆ. ಕಡಬ ತಾ.ಪಂ.ನ 13 ಸದಸ್ಯರ ಪೈಕಿ ಇಬ್ಬರು ಅನುಸೂಚಿತ ಜಾತಿ ಮಹಿಳಾ ಅಭ್ಯರ್ಥಿಗಳಿದ್ದಾರೆ. ಚಾರ್ವಾಕ ಕ್ಷೇತ್ರದ ಸದಸ್ಯೆ ಲಲಿತಾ ಈಶ್ವರ ಹಾಗೂ ಸವಣೂರು ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅವಕಾಶ ಪಡೆದಿದ್ದಾರೆ. ಉಪಾಧ್ಯಕ್ಷತೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ 13 ಅಭ್ಯರ್ಥಿಗಳಿಗೂ ಸ್ಪರ್ಧಿಸುವ ಅವಕಾಶವಿದೆ.
ವರದಿ ಸಲ್ಲಿಕೆ
ಸುಳ್ಯ ತಾ.ಪಂ. ಉಪಾಧ್ಯಕ್ಷರು ಪ್ರತಿನಿಧಿಸುವ ಕ್ಷೇತ್ರ ಕಡಬ ತಾ.ಪಂ.ಗೆ ಸೇರಲಿದ್ದು, ಹಾಗಾಗಿ ಇಲ್ಲಿನ ಉಪಾಧ್ಯಕ್ಷ ಸ್ಥಾನ ತೆರವಾಗಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಕುರಿತು ತಾ.ಪಂ.ನಿಂದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಸಲಾಗಿದೆ.
– ಭವಾನಿಶಂಕರ
ಇಒ, ತಾ.ಪಂ., ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ