ಗಡಿ ಗುರುತಿಸಿ ಪಹಣಿ ಪತ್ರ ತಯಾರಿಸಲು ಸೂಚನೆ

ಪುತ್ತೂರು ತಾಲೂಕು ಪಂಚಾಯತ್‌ ಮಾಸಿಕ ಕೆಡಿಪಿ ಸಭೆ

Team Udayavani, Nov 5, 2020, 9:51 PM IST

Put

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು.

ಪುತ್ತೂರು: ಸರಕಾರಿ ಶಾಲೆ, ಅಂಗನವಾಡಿ ಕೇಂದ್ರ ಗಳಿಗೆ ಜಾಗ ಮಂಜೂರು ಮಾಡಿ, ಗಡಿ ಗುರುತಿಸಿ ಪಹಣಿ ಪತ್ರ ತಯಾರಿಸುವಂತೆ ತಾಲೂಕು ಪಂಚಾಯತ್‌ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್‌ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾ.ಪಂ. ಮಾಸಿಕ ಕೆಡಿಪಿ ಸಭೆ ನ. 5ರಂದು ತಾ.ಪಂ. ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಮಾತನಾಡಿ, ತಾಲೂಕಿನಲ್ಲಿ 75 ಶಾಲೆಗಳಿಗೆ ಜಾಗ ಮಂಜೂರುಗೊಂಡಿಲ್ಲ ಎನ್ನುವ ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ, ತಾಲೂಕಿನಲ್ಲಿ 11 ಅಂಗನವಾಡಿ ಕೇಂದ್ರಗಳಿಗೆ ಜಾಗ ಮಂಜೂರು ಬಗ್ಗೆ ಗಡಿ ಗುರುತು ಆಗಿಲ್ಲ ಎಂದು ಪ್ರಸ್ತಾವಿಸಿದರು.

ತಾ.ಪಂ. ಅಧ್ಯಕ್ಷರು ಉತ್ತರಿಸಿ, ಈ ಬಗ್ಗೆ ಕ್ರಮ ಕೈಗೊಂಡು ಗಡಿ ಗುರುತು ನಡೆಸಿ ಪಹಣಿ ತಯಾರಿಸಬೇಕು. ಈ ವರ್ಷದ ಅಂತ್ಯದ ಒಳಗಾಗಿ ಎಲ್ಲ ಅಂಗನವಾಡಿ ಮತ್ತು ಸರಕಾರಿ ಶಾಲೆಗಳಿಗೆ ಜಾಗ ಗುರುತಿಸಿ ಪಹಣಿ ಪತ್ರ ಸಿದ್ಧಗೊಳ್ಳಬೇಕು ಎಂದು ಕಂದಾಯ ಮತ್ತು ಭೂ ದಾಖಲೆಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಬದಿ ಮಾರಾಟ: ನಿಗಾ ವಹಿಸಲು ಸೂಚನೆ
ರಸ್ತೆ ಬದಿಯಲ್ಲಿ ಕಿಟಿಕಿ, ಬಾಗಿಲು ಇನ್ನಿತರ ಗೃಹ ನಿರ್ಮಾಣದ ವಸ್ತುಗಳನ್ನಿಟ್ಟು ಮಾರಾಟ ಮಾಡುತ್ತಿ ರುವುದರಿಂದ ವಾಹನಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅಧ್ಯಕ್ಷರು ಪ್ರಸ್ತಾವಿಸಿದರು. ರಸ್ತೆ ಬದಿಗಳಲ್ಲಿ ವಾಹನ ಮತ್ತು ಪಾದಚಾರಿ ಸಂಚಾರಕ್ಕೆ ತೊಂದರೆ ಮಾಡುವಂತಹ ಮಾರಾಟಕ್ಕೆ ಅವಕಾಶ ನೀಡಬಾರದು. ಈಗ ಅಂತಹ ಪ್ರಕರಣಗಳನ್ನು ಗುರುತಿಸಿ ತೆರವುಗೊಳಿಸುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

18 ಕುಟುಂಬಗಳಿಗೆ ನೋಟಿಸ್‌
ಕೊಳ್ತಿಗೆ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 18 ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸು ನೀಡಿ ತೆರವುಗೊಳಿಸುವಂತೆ ತಿಳಿಸಿದೆ. ಸುಮಾರು 15 ವರ್ಷಗಳಿಂದ ಇಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ಇಲ್ಲಿನ ಬಡ ಕುಟುಂಬಗಳಿಗೆ ಇದರಿಂದ ತೊಂದರೆಯಾಗಲಿದೆ ಎಂದು ಅಧ್ಯಕ್ಷರು ಅಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಅರಣ್ಯ ಅಧಿಕಾರಿ, ಈ ಪ್ರದೇಶ ಮೀಸಲು ಅರಣ್ಯ ವ್ಯಾಪ್ತಿಗೆ ಬರುತ್ತಿರುವುದರಿಂದ ವಾಸಕ್ಕೆ ನೀಡಲು ಅವಕಾಶವಿಲ್ಲ ಎಂದು ತಿಳಿಸಿದರು. ಅರಣ್ಯ ಇಲಾಖೆಗೆ ಪಹಣಿ ಪತ್ರವಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಅರಣ್ಯದ ಜಾಗ ಅಲ್ಲವೆಂದು ಹೇಳಲು ಆಗುವುದಿಲ್ಲ. ಪಹಣಿ ಪತ್ರ ನೀಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರೂ ಈ ತನಕ ಅವರು ಮಾಡಿಕೊಟ್ಟಿಲ್ಲ ಎಂದು ದೂರಿದರು. ನೀವು ಅರ್ಜಿ ನೀಡಿದಲ್ಲಿ ನಾವು ಪಹಣಿ ಪತ್ರ ನೀಡುತ್ತೇವೆ ಎಂದು ತಹಶೀಲ್ದಾರ್‌ ರಮೇಶ್‌ ಬಾಬು ತಿಳಿಸಿದರು. ಅರಣ್ಯ ಇಲಾಖೆಗೆ ಪಹಣಿ ಪತ್ರ ಸಿಗಬಹುದು. ಆದರೆ ಅಲ್ಲಿನ ಬಡವರ ಗತಿಯೇನು ಎಂದು ಪ್ರಶ್ನಿಸಿದ ರಾಧಾಕೃಷ್ಣ ಬೋರ್ಕರ್‌ ಅದೇ ಪ್ರದೇಶದಲ್ಲಿ ತಲಾ 5 ಸೆಂಟ್ಸ್‌ ಸರಕಾರಿ ಜಮೀನನ್ನು ತತ್‌ಕ್ಷಣವೇ ಆ ಕುಟುಂಬಗಳಿಗೆ ಮಂಜೂರುಗೊಳಿಸುವಂತೆ ತಹಶೀಲ್ದಾರ್‌ಗೆ ತಿಳಿಸಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಕಲಾಪ ನಿರ್ವಹಿಸಿದರು.

ಆರ್ಲಪದವು: ಅಪಾಯಕಾರಿ ಸ್ಥಿತಿಯಲ್ಲಿ ವಸತಿ ಸಮುಚ್ಚಯ
ಆರ್ಲಪದವು ಆರೋಗ್ಯ ಇಲಾಖೆಯ ವಸತಿ ಸಮುಚ್ಚಯ ಕುಸಿಯುವ ಹಂತದಲ್ಲಿದ್ದು, ಈ ಕಟ್ಟಡ ತೆರವುಗೊಳಿಸಲು ಗುತ್ತಿಗೆದಾರರು ಮುಂದಾಗದ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು. ಟೆಂಡರ್‌ ದರ ಕಡಿಮೆಗೊಳಿಸಿ ಮತ್ತೆ ಏಲಂ ನಡೆಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಹಿಂದಿನ ಸಭೆಯಲ್ಲಿ ಅಧ್ಯಕ್ಷರು ತಿಳಿಸಿರುವಂತೆ ಪಾಣಾಜೆ ಆರೋಗ್ಯ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.