ತಂತ್ರಜ್ಞಾನ-ಅಧ್ಯಾತ್ಮ ಮಿಳಿತವಾದಾಗ ಬೆಳವಣಿಗೆ


Team Udayavani, Jan 13, 2019, 9:01 AM IST

13-january-12.jpg

ನೆಹರೂನಗರ : ಭಾರತದ ಸಂಪನ್ನತೆ, ಸಮೃದ್ಧಿ ಹಾಗೂ ಕಲ್ಯಾಣ ವೆಂದರೆ ಅದು ಪ್ರಪಂಚದ ಉನ್ನತಿಕೆ ಹಾಗೂ ಉತ್ಕೃಷ್ಟತೆ ಎನ್ನುವುದನ್ನು ಸ್ವತಃ ಆಚರಿಸಿ ತೋರಿಸಿದ ರಾಷ್ಟ್ರ ಭಾರತ. ವ್ಯಕ್ತಿಯ ವಿಕಾಸದಿಂದ ಕುಟುಂಬದ ವಿಕಾಸ, ಅದರಿಂದ ಸಮಾಜದ ಬೆಳವಣಿಗೆ ಹಾಗೂ ತನ್ಮೂಲಕ ರಾಷ್ಟ್ರದ ಬೆಳವಣಿಗೆ ಎಂದು ಮೈಸೂರು ಮಹಾರಾಣಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷ ಡಾ| ಬಿ.ವಿ. ವಸಂತ ಕುಮಾರ್‌ ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಶನಿವಾರ ಆಯೋಜಿಸಿದ್ದ ವಿವೇಕಾನಂದ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ವಿವೇಕಾನಂದರು ಜಾತೀಯತೆ, ಅಸ್ಪೃಶ್ಯತೆ, ಒಡಕು ದೂರವಾಗಿಸುವ ಆಲೋಚನೆ ಹೊಂದಿದ್ದರು. ತಂತ್ರಜ್ಞಾನ, ವಿಜ್ಞಾನದೊಂದಿಗೆ ಅಧ್ಯಾತ್ಮ ಸೇರಿದಾಗ ಅದ್ಭುತ ಬೆಳವಣಿಗೆ ಸಾಧ್ಯ ಎಂದಿದ್ದರು. ಆದರೆ ಅಧ್ಯಾತ್ಮ ಹಾಗೂ ವಿಜ್ಞಾನ ಬೇರೆ ಬೇರೆ ಎನ್ನುವುದು ದುರಂತ ಎಂದರು.

ವಿವೇಕ ಶಕ್ತಿಯಿಂದ ಚೈತನ್ಯ
ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಎಂ. ಕೃಷ್ಣ ಭಟ್ ಮಾತನಾಡಿ, ಮೊಬೈಲ್‌ಗೆ ಹೇಗೆ ಒಂದು ಪವರ್‌ ಬ್ಯಾಂಕ್‌ ಉಪಯುಕ್ತ ಎನಿಸುತ್ತದೆಯೋ ಅದೇ ರೀತಿ ಯುವಶಕ್ತಿಗೆ ಸ್ವಾಮಿ ವಿವೇಕಾನಂದರು ಪವರ್‌. ವಿವೇಕಾನಂದ ಜಯಂತಿ ನಮ್ಮ ಶಕ್ತಿಯನ್ನು ಮತ್ತಷ್ಟು ಚೈತನ್ಯಗೊಳಿಸುತ್ತದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರು, ವಿವೇಕಾನಂದ ಸಂಸ್ಥೆಗಳ ಆಡಳಿತ ಮಂಡಳಿ ಪ್ರಾಚಾರ್ಯರು, ಸಿಬಂದಿ, 8 ಸಾವಿರ ವಿದ್ಯಾರ್ಥಿಗಳು ಮತ್ತು 600ರಷ್ಟು ಆಹ್ವಾನಿತರು ಉಪಸ್ಥಿತರಿದ್ದರು. ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷೆ ಡಾ| ಸುಧಾ ರಾವ್‌ ಸ್ವಾಗತಿಸಿ, ಕೋಶಾಧಿಕಾರಿ ಸುರೇಂದ್ರ ಕಿಣಿ ವಂದಿಸಿದರು. ಉಶಾಕಿರಣ್‌, ಗುರುಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಾತ್ಮದಿಂದ ಆತ್ಮಕಲ್ಯಾಣ
ಪ್ರತಿಯೊಬ್ಬ ಮನುಷ್ಯ ಅಧ್ಮಾತ್ಮದತ್ತ ಒಲವು ತೋರಿದಾಗ ಮಾತ್ರ ಆತ್ಮಕಲ್ಯಾಣ ಸಾಧ್ಯ ಎಂದರು. ವಿವೇಕಾನಂದರು ಕೇವಲ ಹಿಂದೂ ಧರ್ಮಕ್ಕೆ ಅಥವಾ ಭಾರತಕ್ಕೆ ಸೀಮಿತರಲ್ಲ, ಬದಲಾಗಿ ವಿಶ್ವಧರ್ಮಕ್ಕೆ ಸೇರಿದವರು. ಈ ಕಾರಣಕ್ಕಾಗಿಯೇ ವಿವೇಕಾನಂದರನ್ನು ಜಗತ್ತೇ ಆರಾಧಿಸುತ್ತದೆ. ಆದರೆ ದುರಂತವೆಂದರೆ ಇಂತಹ ಪುಣ್ಯಪುರುಷನ ಜನ್ಮಭೂಮಿಯಲ್ಲಿ ಇಂದು ಅಂಕ ಆಧಾರಿತ ಶಿಕ್ಷಣ ಹಾಗೂ ದುಡ್ಡಿನ ಆಧಾರಿತ ಉದ್ಯೋಗವನ್ನು ಪಡೆಯುವ ದಾರಿಯನ್ನು ತೋರಿಸಿಕೊಡಲಾಗುತ್ತಿದೆ ಎಂದು ಡಾ| ಬಿ.ವಿ. ವಸಂತ ಕುಮಾರ್‌ ವಿಷಾದಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.