ಗ್ರಾ.ಪಂ. ಪಕ್ಕದಲ್ಲೇ ಘನತ್ಯಾಜ್ಯ ಘಟಕ ನಿರ್ಮಾಣ


Team Udayavani, Jan 18, 2019, 8:55 AM IST

18j-anuary-14.jpg

ಪುತ್ತೂರು : ಗ್ರಾಮ ಪಂಚಾ ಯತ್‌ ವ್ಯಾಪ್ತಿಯಲ್ಲಿ ಬಾಕಿ ಆಗಿರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ವೇಗ ನೀಡಿ, ಸ್ವಚ್ಛತಾ ಕಾರ್ಯಕ್ಕೆ ಜೀವ ತುಂಬಲು ಜಿ.ಪಂ. ಆಲೋಚಿಸುತ್ತಿದೆ. ಘನತ್ಯಾಜ್ಯವನ್ನು ಸುಲಭವಾಗಿ ನಿರ್ವಹಣೆ ಮಾಡುವ ಉದ್ದೇಶದಿಂದ ಗ್ರಾ.ಪಂ. ಪಕ್ಕದಲ್ಲೇ ಘಟಕ ನಿರ್ಮಾಣಕ್ಕೆ ನಿವೇಶನ ಕಾದಿರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾ ಸ್ವಚ್ಛತಾ ಸಮಾಲೋಚಕ ನವೀನ್‌ ಹೇಳಿದರು.

ನಮ್ಮ ತ್ಯಾಜ್ಯ- ನಮ್ಮ ಹೊಣೆ ಪರಿಕಲ್ಪನೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ಜ. 17ರಂದು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಇದಕ್ಕೆ ಕಾರಣ ವಿಲೇವಾರಿ ಸರಿ ಆಗದೇ ಇರುವುದು. ಈ ಹಿನ್ನೆಲೆಯಲ್ಲಿ ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಪ್ರತಿ ಗ್ರಾ.ಪಂ.ಗೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಹಾಗೂ ತ್ಯಾಜ್ಯ ಸಂಗ್ರಹಿಸಿ ಸಾಗಾಟ ಮಾಡಲು ವಾಹನ ಖರೀದಿ ಸೇರಿದಂತೆ ಒಟ್ಟು 20 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ ಎಂದರು.

ಡಸ್ಟ್‌ಬಿನ್‌ ಮುಕ್ತ
ಉಡುಪಿ ಜಿಲ್ಲಾ ಸ್ವಚ್ಛತಾ ಸಮಾಲೋಚಕ ರಘುನಾಥ ಮಾತನಾಡಿ, ಡಸ್ಟ್‌ಬಿನ್‌ನಲ್ಲಿ ತ್ಯಾಜ್ಯ ತುಂಬಿಸಿ, ಅಲ್ಲಿಂದ ವಿಲೇವಾರಿ ಮಾಡುವುದು ತೀರಾ ಅವೈಜ್ಞಾನಿಕ ಕ್ರಮವಾದುದರಿಂದ ಗ್ರಾಮವನ್ನು ಡಸ್ಟ್‌ ಬಿನ್‌ ಮುಕ್ತವಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಂಯೋಜಕಿ ಮಂಜುಳಾ ಮಾಹಿತಿ ನೀಡಿದರು. ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ಉಪಾಧ್ಯಕ್ಷೆ ರಾಜೇಶ್ವರಿ, ಹರೀಶ್‌ ಬಿಜತ್ರೆ, ಸಾಜ ರಾಧಾಕೃಷ್ಣ ಆಳ್ವ, ಮೀನಾಕ್ಷಿ ಮಂಜುನಾಥ, ಲಲಿತಾ ಈಶ್ವರ, ಜಿ.ಪಂ. ಸದಸ್ಯೆ ಶಯನಾ ಜಯಾನಂದ, ತಾಲೂಕಿನ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.